AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಕೋಟಿ ರೂಪಾಯಿ ಮೌಲ್ಯದ ಒತ್ತುವರಿ ಜಾಗ ಮತ್ತೆ ತನ್ನ ಸುಪರ್ದಿಗೆ ತೆಗೆದುಕೊಂಡ ಬಿಬಿಎಂಪಿ

ಗಾಂಧಿಬಜಾರ್​ನ ವಿದ್ಯಾರ್ಥಿ ಭವನ ಸಮೀಪ ಇರುವ ಈ ಜಾಗದ ಮೌಲ್ಯವು ₹ 50 ಕೋಟಿ ಎಂದು ಅಂದಾಜಿಸಲಾಗಿದೆ.

50 ಕೋಟಿ ರೂಪಾಯಿ ಮೌಲ್ಯದ ಒತ್ತುವರಿ ಜಾಗ ಮತ್ತೆ ತನ್ನ ಸುಪರ್ದಿಗೆ ತೆಗೆದುಕೊಂಡ ಬಿಬಿಎಂಪಿ
ಬಿಬಿಎಂಪಿ ಕಚೇರಿ
TV9 Web
| Edited By: |

Updated on: Jul 22, 2022 | 11:34 AM

Share

ಬೆಂಗಳೂರು: ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದ ₹ 50 ಕೋಟಿ ಮೌಲ್ಯದ ನಿವೇಶನವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (Bruhat Bengaluru Mahanagara Palike – BBMP) ಅಧಿಕಾರಿಗಳು ಮತ್ತೆ ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ. ಗಾಂಧಿಬಜಾರ್​ನ ವಿದ್ಯಾರ್ಥಿ ಭವನ ಸಮೀಪ ಇರುವ ಈ ಜಾಗದ ಮೌಲ್ಯವು ₹ 50 ಕೋಟಿ ಎಂದು ಅಂದಾಜಿಸಲಾಗಿದೆ. ಇಬ್ಬರು ಖಾಸಗಿ ವ್ಯಕ್ತಿಗಳು 9,000 ಚದರ ಮೀಟರ್​ನಷ್ಟಿರುವ ಈ ಜಮೀನನ್ನು ಹಲವು ವರ್ಷಗಳಿಂದ ಒತ್ತುವರಿ ಮಾಡಿಕೊಂಡಿದ್ದರು. ಇದೀಗ ಬಿಬಿಎಂಪಿ ಒತ್ತುವರಿ ತೆರವುಗೊಳಿಸಿ ಜಾಗವನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ.

ಕೆರೆ ಒತ್ತುವರಿ ತೆರವುಗೊಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಸುಬ್ರಹ್ಮಣ್ಯಪುರ ಕೆರೆ, ಬೇಗೂರು ಕೆರೆ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿ ಕೆರೆ ಒತ್ತುವರಿ ತೆರವು ವಿಳಂಬಕ್ಕೆ ಹೈಕೋರ್ಟ್(High Court) ಅಸಮಾಧಾನ ವ್ಯಕ್ತಪಡಿಸಿದೆ. ಹಾಗೂ ರಾಜ್ಯಸರ್ಕಾರ (Karnataka Government) ಮತ್ತು ಬಿಬಿಎಂಪಿಗೆ (BBMP) ತರಾಟೆಗೆ ತೆಗೆದುಕೊಂಡಿದೆ. ಕಳೆದ 6 ತಿಂಗಳಿನಿಂದ ಒಂದೇ ಒಂದು ಒತ್ತುವರಿ ತೆರವುಗೊಳಿಸಿಲ್ಲ. ಬೆಂಗಳೂರಿನ ಕೆರೆಗಳನ್ನು ಭವಿಷ್ಯದ ಜನರಿಗಾಗಿ ರಕ್ಷಿಸಬೇಕು. ತಹಶೀಲ್ದಾರ್‌ಗಳು ಒತ್ತುವರಿ ತೆರವಿಗೆ ಸಹಕರಿಸಬೇಕು ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

10 ದಿನಗಳಲ್ಲಿ ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಳಿಸಬೇಕು. ಸರ್ವೆ ಕಾರ್ಯಕ್ಕೆ ಅಧಿಕಾರಿಗಳನ್ನು ನಿಯೋಜಿಸಬೇಕು. ಅದಾದ 1 ವಾರದಲ್ಲಿ ಒತ್ತುವರಿದಾರರಿಗೆ ನೋಟಿಸ್ ನೀಡಬೇಕು. ನಂತರದ ಒಂದು ವಾರದಲ್ಲಿ ಒತ್ತುವರಿ ತೆರವುಗೊಳಿಸಬೇಕು. ಅಗತ್ಯ ಸಿಬ್ಬಂದಿ, ಪೊಲೀಸ್ ಭದ್ರತೆ ಒದಗಿಸುವಂತೆ ಕೆರೆ ಸುತ್ತಲ ರಸ್ತೆ ಅಗಲೀಕರಣಗೊಳಿಸದಂತೆ ರಾಜ್ಯಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು