Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷ ಸಂಭ್ರಮಾಚರಣೆಗೆ ಗಬ್ಬೆದ್ದ ನಗರ, ಒಂದೇ ರಾತ್ರಿಗೆ ಬರೋಬ್ಬರಿ 8 ಮೆಟ್ರಿಕ್ ಟನ್ ತ್ಯಾಜ್ಯ ಸಂಗ್ರಹ

ಬೆಂಗಳೂರು ನಗರದ ಪ್ರಮುಖ ಬೀದಿಗಳಲ್ಲಿ ಭರ್ಜರಿ ವರ್ಷಾಚರಣೆ ನಡೆದಿದ್ದು ಒಂದೇ ರಾತ್ರಿಗೆ ಬರೋಬ್ಬರಿ 8 ಮೆಟ್ರಿಕ್ ಟನ್ ತ್ಯಾಜ್ಯ ಉತ್ಪತ್ತಿಯಾಗಿದೆ. ಎಂಜಿ ರೋಡ್, ಬ್ರಿಗೇಡ್‌ ರೋಡ್‌, ಚರ್ಚ್‌ಸ್ಟ್ರೀಟ್, ಇಂದಿರಾನಗರ, ಕೋರಮಂಗಲ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಕಸದ ರಾಶಿ ಕಂಡು ಬಂದಿದ್ದು 8 ಮೆಟ್ರಿಕ್ ಟನ್ ತ್ಯಾಜ್ಯ ಸಂಗ್ರಹವಾಗಿದೆ.

ಹೊಸ ವರ್ಷ ಸಂಭ್ರಮಾಚರಣೆಗೆ ಗಬ್ಬೆದ್ದ ನಗರ, ಒಂದೇ ರಾತ್ರಿಗೆ ಬರೋಬ್ಬರಿ 8 ಮೆಟ್ರಿಕ್ ಟನ್ ತ್ಯಾಜ್ಯ ಸಂಗ್ರಹ
ಹೊಸ ವರ್ಷ ಸಂಭ್ರಮಾಚರಣೆಗೆ ಗಬ್ಬೆದ್ದ ನಗರ
Follow us
Vinayak Hanamant Gurav
| Updated By: ಆಯೇಷಾ ಬಾನು

Updated on: Jan 01, 2024 | 1:07 PM

ಬೆಂಗಳೂರು, ಜ.01: ಕೆಲವೇ ಗಂಟೆಗಳ ಹಿಂದೆ ಜನ ಸಾಗರದಿಂದ ತುಂಬಿ ತುಳುಕುತ್ತಿದ್ದ ಎಂಜಿ ರೋಡ್ (MG Road), ಬ್ರಿಗೇಡ್‌ ರೋಡ್‌ (Brigade Road), ಚರ್ಚ್‌ಸ್ಟ್ರೀಟ್​ನಲ್ಲಿ (Church Street) ಕಸದ ರಾಶಿ ಕಂಡು ಬಂದಿದೆ. ಹೊಸ ವರ್ಷವನ್ನು (New Year) ಸಂಭ್ರಮದಿಂದ ಸ್ವಾಗತಿಸಲು ಡಿ.31ರ ರಾತ್ರಿ ಜನಸಮೂಹ ಎಂಜಿ ರೋಡ್, ಬ್ರಿಗೇಡ್‌ ರೋಡ್‌, ಚರ್ಚ್‌ಸ್ಟ್ರೀಟ್​ನಲ್ಲಿ ಜಮಾಯಿಸಿದ್ದರು. ಸದ್ಯ ಹೊಸ ವರ್ಷಾಚರಣೆ ಮುಗಿದಿದ್ದು ಜನರೆಲ್ಲ ತಮ್ಮ ಮನೆ ಸೇರಿದ್ದಾರೆ. ಆದರೆ ಬಿಬಿಎಂಪಿ (BBMP) ಪೌರ ಕಾರ್ಮಿಕರಿಗೆ ದೊಡ್ಡ ತಲೆ ನೋವಾಗಿದೆ.

ನಗರದ ಪ್ರಮುಖ ಬೀದಿಗಳಲ್ಲಿ ಭರ್ಜರಿ ವರ್ಷಾಚರಣೆ ನಡೆದಿದ್ದು ಒಂದೇ ರಾತ್ರಿಗೆ ಬರೋಬ್ಬರಿ 8 ಮೆಟ್ರಿಕ್ ಟನ್ ತ್ಯಾಜ್ಯ ಉತ್ಪತ್ತಿಯಾಗಿದೆ. ಎಂಜಿ ರೋಡ್, ಬ್ರಿಗೇಡ್‌ ರೋಡ್‌, ಚರ್ಚ್‌ಸ್ಟ್ರೀಟ್, ಇಂದಿರಾನಗರ, ಕೋರಮಂಗಲ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಕಸದ ರಾಶಿ ಕಂಡು ಬಂದಿದ್ದು 8 ಮೆಟ್ರಿಕ್ ಟನ್ ತ್ಯಾಜ್ಯ ಸಂಗ್ರಹವಾಗಿದೆ. ನಸುಕಿನ ಜಾವ 3 ಗಂಟೆಯಿಂದ ಬೆಳಿಗ್ಗೆ 8 ಗಂಟೆ ವರೆಗೆ ಬಿಬಿಎಂಪಿ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯ ಮಾಡಿದರು. 100ಕ್ಕೂ ಅಧಿಕ ಪೌರಕಾರ್ಮಿಕರು ನಗರದ ಬೀದಿಗಳನ್ನು ಗುಡಿಸಿ ಸ್ವಚ್ಚಗೊಳಿಸಿದ್ದಾರೆ. ಸ್ವಚ್ಛತಾ ಕಾರ್ಯಕ್ಕೆ 2 ಕಾಂಪ್ಯಾಕ್ಟರ್, 25 ಆಟೋ ಟಿಪ್ಪರ್ ಬಳಕೆ ಮಾಡಲಾಗಿದೆ.

ಇದನ್ನೂ ಓದಿ: ಹೊಸವರ್ಷ ದಿನದಂದು ನಮ್ಮ ಮೆಟ್ರೋಗೆ ಭರ್ಜರಿ ಆದಾಯ ಬಂದಿದೆ.

ಬಿಬಿಎಂಪಿ ಪೌರಕಾರ್ಮಿಕರ ಜೊತೆ ಕೈ ಜೋಡಿಸಿದ ಉದ್ಯೋಗಿಗಳು

ಇನ್ನು ಹೊಸ ವರ್ಷ ಹಿನ್ನೆಲೆ ನಗರದ ಪ್ರಮುಖ ರಸ್ತೆ, ಬೀದಿಗಳಲ್ಲಿ ಜನ ಹಾಡುತ್ತಾ, ಕುಡಿಯುತ್ತಾ, ಕುಣಿಯುತ್ತಾ ಸಂಭ್ರಮಿಸಿದರು. ಜನ ಮೋಜು, ಮಸ್ತಿ ನಡೆಸಿದ ಸ್ಥಳಗಳು, ಮದ್ಯದ ಬಾಟಲಿ ಮತ್ತು ತಿಂದು ಬಿಟ್ಟ ತಿಂಡಿಗಳು, ಪೇಪರ್-ಪ್ಯಾಕೆಟ್​ಗಳಿಂದ ಗಬ್ಬೆದಿತ್ತು. ಈ ವೇಳೆ ಬಿಬಿಎಂಪಿ ಪೌರಕಾರ್ಮಿಕರು ಸ್ವಚ್ಛತೆ ಕಾರ್ಯ ಮಾಡಿದ್ದಾರೆ. ಇನ್ನು ವಿಶೇಷವೆಂದರೆ ನಗರದ ಚರ್ಚ್ ಸ್ಟ್ರೀಟ್ ನಲ್ಲಿ ಸಂಸ್ಥಯೊಂದರ ಉದ್ಯೋಗಿಗಳು ಖುದ್ದು ತಾವೇ ಬೀದಿಗಿಳಿದು ಸುತ್ತಮುತ್ತಲಿನ ಜಾಗವನ್ನು ಸ್ವಚ್ಛ ಮಾಡಿದ್ದಾರೆ. ಈ ವಿವೇಕವಂತ ಮತ್ತು ಪರಿಸರ ಹಾಗೂ ಸ್ವಚ್ಛತೆಯ ಬಗ್ಗೆ ಕಾಳಜಿಯುಳ್ಳ ಜನ ಉಳಿದ ನಗರವಾಸಿಗಳಿಗೆ ಮಾದರಿಯೆನಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​