AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ರೂಪಾಂತರಿ ವೈರಾಣು ಆತಂಕ: ಕೊವಿಡ್ ತಜ್ಞರ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತರ ಸಭೆ

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​ ಗುಪ್ತ ಕೊವಿಡ್ ತಜ್ಞರ ಸಮಿತಿ ಜೊತೆ ಸಭೆ ನಡೆಸಿದರು. ಕೊವಿಡ್ ರೂಪಾಂತರಿ ವೈರಸ್​​ ನಿಯಂತ್ರಿಸುವ ಕುರಿತು ಸಭೆಯಲ್ಲಿ ಮುಖ್ಯವಾಗಿ ಚರ್ಚಿಸಲಾಯಿತು

ಕೊವಿಡ್ ರೂಪಾಂತರಿ ವೈರಾಣು ಆತಂಕ: ಕೊವಿಡ್ ತಜ್ಞರ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತರ ಸಭೆ
ಬಿಬಿಎಂಪಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Dec 01, 2021 | 10:49 PM

Share

ಬೆಂಗಳೂರು: ಕೊವಿಡ್ ರೂಪಾಂತರಿ ವೈರಾಣು ನಿಯಂತ್ರಿಸುವ ಸಂಬಂಧ ಸೂಕ್ತ ಸಲಹೆ ಸೂಚನೆಗಳನ್ನು ಜಾರಿಗೆ ತರಲು ನಗರದಲ್ಲಿ ಬುಧವಾರ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​ ಗುಪ್ತ ಕೊವಿಡ್ ತಜ್ಞರ ಸಮಿತಿ ಜೊತೆ ಸಭೆ ನಡೆಸಿದರು. ಕೊವಿಡ್ ರೂಪಾಂತರಿ ವೈರಸ್​​ ನಿಯಂತ್ರಿಸುವ ಕುರಿತು ಸಭೆಯಲ್ಲಿ ಮುಖ್ಯವಾಗಿ ಚರ್ಚಿಸಲಾಯಿತು. ವಿದೇಶಗಳಿಂದ ಬರುವ ಪ್ರಯಾಣಿಕರಿಗೆ ಟೆಸ್ಟ್ ಮಾಡಬೇಕು. ಕ್ವಾರಂಟೈನ್, ಜಿನೋಮ್​​ ಸೀಕ್ವೆನ್ಸಿಂಗ್​​ಗೆ ಸ್ಯಾಂಪಲ್ಸ್​​ ಕಳಿಸುವುದು, ನಗರದ ಕಂಟೇನ್ಮೆಂಟ್ ಜೋನ್​ಗಳ ಮೇಲೆ ನಿಗಾವಹಿಸುವುದು, ಕ್ಲಸ್ಟರ್​ಗಳಾದರೆ ಅವುಗಳ ಮೇಲೆ ಹೆಚ್ಚು ಗಮನ ಹರಿಸುವುದು, ಸಭೆ-ಸಮಾರಂಭಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಬೇಕು. ಪಾಲ್ಗೊಳ್ಳುವ ಜನರ ಸಂಖ್ಯೆಗೆ ಮಿತಿ ಹೇರಬೇಕು. ಅಗತ್ಯಬಿದ್ದರೆ ಕೊವಿಡ್​ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಬೇಕು ಎಂದು ತಜ್ಞರು ಸಲಹೆ ಮಾಡಿದರು. ಸಭೆಯಲ್ಲಿ ವಿಶೇಷ ಆಯುಕ್ತ (ಆರೋಗ್ಯ) ಡಾ.ತ್ರಿಲೋಕ್ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್, ನಿರ್ಮಲಾ ಬುಗ್ಗಿ ಇತರರು ಪಾಲ್ಗೊಂಡಿದ್ದರು.

ಸಮಿತಿಯಲ್ಲಿ ವ್ಯಕ್ತವಾದ ಮುಖ್ಯ ಸಲಹೆಗಳು ಇವು – ನಗರದ ಉದ್ಯಾನ, ಚಿತ್ರಮಂದಿರ, ಮಾಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಎರಡೂ ಡೋಸ್ ಲಸಿಕೆ ಪಡೆದವರಿಗೆ ಪ್ರವೇಶ ನೀಡಬೇಕು – ಹೊಸದಾಗಿ ಬಂದಿರುವ ಓಮೈಕ್ರಾನ್ ಹಾಗೂ ಇನ್ನಿತರೆ ವೈರಾಣು ಹರಡದಂತೆ ಪೂರ್ವ ಸಿದ್ದತೆ ಮಾಡಿಕೊಳ್ಳಬೇಕು – ಶಾಲೆಗಳಲ್ಲಿ ಕನಿಷ್ಠ ತಿಂಗಳಿಗೊಮ್ಮೆ ಶೇ 10ರಷ್ಟು ಮಕ್ಕಳಿಗೆ ಪರೀಕ್ಷೆ ಮಾಡಬೇಕು – ವಿದೇಶದಿಂದ ಬರುವ ಪ್ರಯಾಣಿಕರಿಗೆ ಟೆಸ್ಟಿಂಗ್, ಕ್ವಾರಂಟೈನ್ ಮಾಡುವುಡು. ಸಂಗ್ರಹಿಸಿರುವ ಮಾದರಿಯನ್ನು ಜಿನೋಮ್ ಸೀಕ್ವೆನ್ಸಿಂಗ್​ಗೆ ಕಳುಹಿಸುವುದು‌ – ನಗರದಲ್ಲಿರುವ ಕಂಟೈನ್ಮೆಂಟ್ ಜೋನ್​ಗಳ ಮೇಲೆ ನಿಗಾವಹಿಸುವುದು – ಕ್ಲಸ್ಟರ್​ಗಳಾದರೆ ಹೆಚ್ಚು ಗಮನ ಹರಿಸುವುದು – ಸಭೆ-ಸಮಾರಂಭಗಳು, ಪಾರ್ಟಿ, ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮಗಳನ್ನು ಅನುಸರಿಸಿ ಆದಷ್ಟು ಕಡಿಮೆ ಸಂಖ್ಯೆಯಲ್ಲಿ ಭಾಗವಹಿಸುವುದು – ಅವಶ್ಯಕತೆ ಬಿದ್ದಲ್ಲಿ ಕೋವಿಡ್ ಟೆಸ್ಟಿಂಗ್ ಪ್ರಮಾಣವನ್ನು ಹೆಚ್ಚಿಸುವುದು – ನಗರದ ಉದ್ಯಾನ, ಚಿತ್ರಮಂದಿರ, ಮಾಲ್ ಸೇರಿದಂತೆ ಇನ್ನಿತರ ಸಾರ್ವಜನಿಕ ಸ್ಥಳಗಳಿಗೆ ಎರಡೂ ಡೋಸ್ ಲಸಿಕೆ ಪಡೆದವರಿಗೆ ಪ್ರವೇಶ ನೀಡುವುದು – ಹೊಸದಾಗಿ ಬಂದಿರುವ ಓಮೈಕ್ರಾನ್ ಹಾಗೂ ಇನ್ನಿತರೆ ವೈರಾಣು ಹರಡದಂತೆ ಪೂರ್ವ ಸಿದ್ದತೆ ಮಾಡಿಕೊಳ್ಳುವುದು – ಶಾಲೆಗಳಲ್ಲಿ ಕನಿಷ್ಠ ತಿಂಗಳಿಗೊಮ್ಮೆ ಶೇ.10 ರಷ್ಟು ಮಕ್ಕಳಿಗೆ ಪರೀಕ್ಷೆ ಮಾಡುವುದು

ಆಯುಕ್ತರು ಕೊಟ್ಟ ಸೂಚನೆಗಳು – ನಗರದಲ್ಲಿ ಕೋವಿಡ್ ನಿಯಮಗಳನ್ನು ಅನುಸರಿಸಬೇಕು – ಅರ್ಹ ಫಲಾನುವಿಗಳು ಕಡ್ಡಾಯವಾಗಿ ಎರಡೂ ಡೋಸ್ ಪಡೆಯುವ ಸಂಬಂಧ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಗಮನ ಹರಿಸಬೇಕು – ಹೋಟೆಲ್, ವ್ಯಾಪಾರಿಗಳು ಸೇರಿದಂತೆ ವರ್ತಕರ ಸಂಘಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಬೇಕು – ತಜ್ಞರ ಸಮಿತಿ ನೀಡಿರುವ ಸಲಹೆಗಳಿಗೆ ಸಂಬಂಧಿಸಿದಂತೆ ಸೂಕ್ತವಾಗಿರುವ ಅಂಶಗಳನ್ನು ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಗೆ ತರಲು ಮುಖ್ಯ ಆಯುಕ್ತರು ವಿಶೇಷ ಆಯುಕ್ತರಿಗೆ ಸೂಚನೆ ನೀಡಿದರು

ಧಾರವಾಡ ಎಸ್​ಡಿಎಂ ಆಸ್ಪತ್ರೆ ಮೇಲೆ ನಿರ್ಬಂಧ ಮುಂದುವರಿಕೆ ಧಾರವಾಡ: ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೊರೊನಾ ಪ್ರಕರಣಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಹಲವು ಶಿಸ್ತುಕ್ರಮಗಳನ್ನು ಅಧಿಕಾರಿಗಳು ಮುಂದುವರಿಸಿದ್ದಾರೆ. ಇನ್ನೂ 140 ಜನರ ಜಿನೋಮ್ ಸೀಕ್ವೆನ್ಸ್‌ ವರದಿ ಬಾಕಿಯಿರುವ ಹಿನ್ನೆಲೆಯಲ್ಲಿ ಎಸ್​ಡಿಎಂ ವೈದ್ಯಕೀಯ ಆಸ್ಪತ್ರೆ ಒಪಿಡಿ ಮೇಲಿನ ನಿರ್ಬಂಧ ಮುಂದುವರಿಸಲಾಗಿದೆ. ಎಸ್‌ಡಿಎಂ ಆಸ್ಪತ್ರೆಗೆ ಜನರ ಪ್ರವೇಶಕ್ಕೆ ನಾಳೆಯೂ ನಿರ್ಬಂಧ ಮುಂದುವರಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಆಸ್ಪತ್ರೆಯ 500 ಮೀಟರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಶಾಲಾ-ಕಾಲೇಜು ಆರಂಭಕ್ಕೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ: ಲಸಿಕೆ ಹಾಕದ ಕೊವಿಡ್ ರೋಗಿಗಳಿಗೆ ಕೇರಳ ಸರ್ಕಾರ ಉಚಿತ ಚಿಕಿತ್ಸೆ ನೀಡುವುದಿಲ್ಲ: ಪಿಣರಾಯಿ ವಿಜಯನ್ ಇದನ್ನೂ ಓದಿ: ಈ ರಾಜ್ಯಗಳಲ್ಲಿ ಲಸಿಕೆ ಹಾಕದವರಿಗೆ ಉಚಿತ ಕೊವಿಡ್ ಚಿಕಿತ್ಸೆ ಇಲ್ಲ, ಪಡಿತರ ಮತ್ತು ಪಿಂಚಣಿಯೂ ಸಿಗಲ್ಲ; ಯಾವ ರಾಜ್ಯ ಯಾವ ರೀತಿಯ ಕ್ರಮ ಕೈಗೊಂಡಿದೆ?

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್