AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್ ಕರ್ಫ್ಯೂ, ಪರಿಣಾಮಕಾರಿ ಕ್ರಮಗಳ ಬಗ್ಗೆ ಶೀಘ್ರದಲ್ಲಿಯೇ ಸಿಎಂ ಬೊಮ್ಮಾಯಿ ಜೊತೆ ಸಭೆ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

ಪಕ್ಕದ ರಾಜ್ಯಗಳಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಎಚ್ಚರಿಕೆ ವಹಿಸುವ ಅಗತ್ಯತೆ ಇದೆ ಎಂದು ಹೇಳಿಕೆ ನೀಡಿದ ಗೌರವ್ ಗುಪ್ತಾ, ನೈಟ್ ಕರ್ಫ್ಯೂ, ಪರಿಣಾಮಕಾರಿ ಕ್ರಮಗಳ ಬಗ್ಗೆ ಚರ್ಚೆ ಶೀಘ್ರದಲ್ಲಿಯೇ ಸಿಎಂ ಬೊಮ್ಮಾಯಿ ಜೊತೆ ಸಭೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ನೈಟ್ ಕರ್ಫ್ಯೂ, ಪರಿಣಾಮಕಾರಿ ಕ್ರಮಗಳ ಬಗ್ಗೆ ಶೀಘ್ರದಲ್ಲಿಯೇ ಸಿಎಂ ಬೊಮ್ಮಾಯಿ ಜೊತೆ ಸಭೆ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on: Aug 02, 2021 | 2:07 PM

Share

ಬೆಂಗಳೂರು: ಮಾಸ್ಕ್, ದೈಹಿಕ ಅಂತರ ಬಗ್ಗೆ ಹೆಚ್ಚು ನಿಗಾವಹಿಸಲು ಬಿಬಿಎಂಪಿ ಕಮಿಷನರ್ ಮತ್ತು ಪೊಲೀಸ್ ಕಮಿಷನರ್ ಸೂಚನೆ ನೀಡಿದ್ದಾರೆ. ಪೊಲೀಸರು ಕರ್ತವ್ಯ ನಿರ್ವಹಿಸುವಾಗ ಎಚ್ಚರಿಕೆ ವಹಿಸಬೇಕು ಅಂತ ಬೆಂಗಳೂರು ಪೊಲೀಸ್ ಆಯುಕ್ತರಾದ ಕಮಲ್ ಪಂತ್ ತಿಳಿಸಿದ್ದಾರೆ. 3ನೇ ಅಲೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಬಿಬಿಎಂಪಿ ಹಾಗು ಪೊಲೀಸ್ ಇಲಾಖೆ ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು ಅಂತ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚನೆ ನೀಡಿದ್ದಾರೆ.

ಪಕ್ಕದ ರಾಜ್ಯಗಳಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಎಚ್ಚರಿಕೆ ವಹಿಸುವ ಅಗತ್ಯತೆ ಇದೆ ಎಂದು ಹೇಳಿಕೆ ನೀಡಿದ ಗೌರವ್ ಗುಪ್ತಾ, ನೈಟ್ ಕರ್ಫ್ಯೂ, ಪರಿಣಾಮಕಾರಿ ಕ್ರಮಗಳ ಬಗ್ಗೆ ಚರ್ಚೆ ಶೀಘ್ರದಲ್ಲಿಯೇ ಸಿಎಂ ಬೊಮ್ಮಾಯಿ ಜೊತೆ ಸಭೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ. ಇವತ್ತು ನಗರ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿ ಎಲ್ಲಾ ಸಭೆ ಮಾಡಿದ್ದೀವಿ. ಎರಡನೇ ಅಲೆ ಪರಿಣಾಮಕಾರಿಯಾಗಿ ಎದುರಿಸಿದ್ದೀವಿ. ಅನ್​ಲಾಕ್​ ಆಗಿ ಸಾಮಾನ್ಯ ಸ್ಥಿತಿಗೆ ಬಂದಿದ್ದೀವಿ. ಆದರೆ ಪಕ್ಕದ ರಾಜ್ಯಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಹಾಗಾಗಿ ಎಚ್ಚರಿಕೆ ವಹಿಸುವುದು ಅವಶ್ಯಕತೆ ಇದೆ ಎಂದು ಗೌರವ್ ಗುಪ್ತಾ ಹೇಳಿದರು.

ಪಕ್ಕದ ರಾಜ್ಯದಿಂದ ಬಂದವರಿಂದ ಸೋಂಕು ಹರಡಬಾರದು ಅಂತ ಹೆಚ್ಚು ಕ್ರಮ ವಹಿಸಲಾಗುತ್ತಿದೆ. ಹೀಗಾಗಿ ಹೆಚ್ಚುವರಿಯಾಗಿ ಟೆಸ್ಟ್ ಮಾಡುವುದು, ಕ್ವಾರಂಟೈನ್ ಮಾಡಲಾಗುತ್ತಿದೆ. ಆಂಟಿಬಾಡಿ ಸಿರೋ ಸರ್ವೆ ಪ್ರಕಾರ ನಾವು ಸೇಫ್ ಆಗಲಿದೆ. ನೈಟ್ ಕರ್ಪ್ಯೂ ಅಥವಾ ಪರಿಣಾಮಕಾರಿ ಕ್ರಮಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಬೇಕು. ಸಿಎಂ ಅವರ ಜೊತೆಯಲ್ಲಿ ಶೀಘ್ರದಲ್ಲಿ ಸಭೆ ನಡೆಯುತ್ತದೆ. ನಂತರ ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ತಜ್ಞರು ವರದಿಯನ್ನು ನೀಡುತ್ತಾರೆ. ಬಳಿಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ

Nirmala Sitharaman: ಜುಲೈನಲ್ಲಿ ಮತ್ತೆ 1 ಲಕ್ಷ ಕೋಟಿ ರೂ. ದಾಟಿದ ಜಿಎಸ್​ಟಿ ಸಂಗ್ರಹ; ಚೇತರಿಕೆಯತ್ತ ಆರ್ಥಿಕತೆ ಎಂದ ನಿರ್ಮಲಾ

Covid 19 Updates: ‘ಕೊರೊನಾ ಮೂರನೇ ಅಲೆ ಈ ತಿಂಗಳಲ್ಲೇ ಶುರುವಾಗಲಿದೆ, ಅಕ್ಟೋಬರ್​ನಲ್ಲಿ ಉತ್ತುಂಗಕ್ಕೇರಲಿದೆ’

(BBMP commissioner Gaurav Gupta said would be meeting with CM Bommai soon to take action on corona third wave)

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು