Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳು ಸೂಚನೆ ಕೊಡಬೇಕೆಂದು ಕಾಯಬಾರದು, ಜನರೇ ಜಾಗೃತಿ ಪಡೆಯಬೇಕು; ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿಕೆ

ನಿತ್ಯ 300 ಸ್ಯಾಂಪಲ್ ಜಿನೋಮಿಕ್ ಸೀಕ್ವೆನ್ಸ್​ಗೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದ ಆಯುಕ್ತರು, 7 ಜನವರಿ ನಂತರದ ನೈಟ್ ಕಪ್ಯೂ ನಿರ್ಧಾರ ನಾವು ಮಾಡುವುದಿಲ್ಲ. ಮುಂದಿನ ಕ್ರಮಗಳ ಬಗ್ಗೆ ಸಿಎಂ, ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಲಿದೆ ಎಂದಿದ್ದಾರೆ.

ಅಧಿಕಾರಿಗಳು ಸೂಚನೆ ಕೊಡಬೇಕೆಂದು ಕಾಯಬಾರದು, ಜನರೇ ಜಾಗೃತಿ ಪಡೆಯಬೇಕು; ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿಕೆ
ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ
Follow us
TV9 Web
| Updated By: sandhya thejappa

Updated on:Dec 28, 2021 | 11:35 AM

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ನೈಟ್ ಕರ್ಫ್ಯೂ ಇರಲಿದ್ದು, ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ, ಸಿಎಂ ಹೆಚ್ಚಿನ ನಿರ್ಬಂಧನೆ ಘೋಷಣೆ ಮಾಡಿದ್ದಾರೆ. ನೈಟ್ ಕರ್ಫ್ಯೂ ಎಲ್ಲರ ಗಮನಕ್ಕೆ ಬಂದಿರುವ ವಿಚಾರ. ಪೊಲೀಸ್ ಇಲಾಖೆ ನೈಟ್ ಕರ್ಫ್ಯೂ ಬಗ್ಗೆ ಗಮನ ಇಡಲಿದೆ. ಈಗಾಗಲೇ ನಿನ್ನೆ (ಡಿ.27) ಪೊಲೀಸ್ ಕಮೀಷನರ್ ಜೊತೆಯೂ ಚರ್ಚೆ ನಡೆದಿದೆ ಅಂತ ತಿಳಿಸಿದ್ದಾರೆ.

ಹೋಂ ಗಾರ್ಡ್ಸ್, ಮಾರ್ಷಲ್ಗಳ ಬಳಕೆ ಮಾಡಲಾಗುತ್ತಿದೆ. ಪೊಲೀಸ್ ಇಲಾಖೆ ನಿರ್ದೇಶನದಂತೆ ಎಲ್ಲಾ ಸಿಬ್ಬಂದಿಗಳು ಸಹಕಾರ ನೀಡಲಿದ್ದಾರೆ. ಜನರೇ ಜಾಗೃತಿ ಪಡೆಯಬೇಕಾಗಿದೆ. ಪೊಲೀಸರು, ಅಧಿಕಾರಿಗಳು ಸೂಚನೆ ಕೊಡಬೇಕೆಂದು ಜನರು ಕಾಯಬೇಕಾಗಿಲ್ಲ ಅಂತ ಗೌರವ್ ಗುಪ್ತ ಹೇಳಿದರು.

ನಿತ್ಯ 300 ಸ್ಯಾಂಪಲ್ ಜಿನೋಮಿಕ್ ಸೀಕ್ವೆನ್ಸ್​ಗೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದ ಆಯುಕ್ತರು, 7 ಜನವರಿ ನಂತರದ ನೈಟ್ ಕಪ್ಯೂ ನಿರ್ಧಾರ ನಾವು ಮಾಡುವುದಿಲ್ಲ. ಮುಂದಿನ ಕ್ರಮಗಳ ಬಗ್ಗೆ ಸಿಎಂ, ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಲಿದೆ ಎಂದಿದ್ದಾರೆ. ಇದೇ ವೇಳೆ ಮಕ್ಕಳಿಗೆ ಲಸಿಕೆ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಲಸಿಕೆ ಎಂಬುದು ಸ್ವಯಂ ಪ್ರೇರಿತವಾಗಿ ಪಡೆಯಬೇಕಾಗಿದೆ. ಜನರಿಗೆ ಒತ್ತಾಯ ಪೂರಕವಾಗಿ ನೀಡಬೇಕಾಗಿದೆ. ಹಲವು ಪೋಷಕರು ಮಕ್ಕಳ ಲಸಿಕೆಗೆ ಬೇಡಿಕೆ ಇಟ್ಟಿದ್ದರು. ಮಕ್ಕಳಿಗೆ ಇರುವ ಲಸಿಕೆ ಲಭ್ಯತೆ ಬಳಸಿಕೊಳ್ಳಿ. 15-18 ನಡುವಿನ ಮಕ್ಕಳ ಅಂಕಿ ಅಂಶ ಕಲೆ ಹಾಕಲಾಗುತ್ತಿದೆ ಅಂತ ಅಭಿಪ್ರಾಯಪಟ್ಟರು.

ಪ್ರತಿ ದಿನ 30-40 ಸಾವಿರದಿಂದ 60 ಸಾವಿರ ಟೆಸ್ಟಿಂಗ್ ಏರಿಕೆ ಮಾಡಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಬೇಕಾದ ಎಲ್ಲ ರೂಲ್ಸ್ ತೆಗೆದುಕೊಳ್ಳಲಾಗುತ್ತದೆ. ಒಮಿಕ್ರಾನ್ ಅಮೆರಿಕಾ, ಬ್ರಿಟನ್ ದೇಶದಲ್ಲಿ ಹೆಚ್ಚಾಗಿದೆ. ಎರಡನೇ ಅಲೆಯಲ್ಲೂ ಇದೇ ರೀತಿ ಏಕಾಏಕಿ ಜಾಸ್ತಿ ಆಗಿತ್ತು. ಈ ಪರಿಣಾಮ ಆಧರಿಸಿ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಾಗಿದೆ. ಮಾರುಕಟ್ಟೆ ಅಷ್ಟೇ ಅಲ್ಲ ಎಲ್ಲಿ ಅಗತ್ಯ ಇದ್ದೆಯೊ, ಅಲ್ಲೆಲ್ಲ ಅಗತ್ಯ ಕ್ರಮ ವಹಿಸಲು ಪಾಲಿಕೆ ಸಿದ್ಧ ಅಂತ ತಿಳಿಸಿದರು.

ಇದನ್ನೂ ಓದಿ

Shiva Rajkumar: ಶಿವಣ್ಣ ಹೃದಯವಂತಿಕೆಗಿಲ್ಲ ಸರಿಸಾಟಿ; ಮಕ್ಕಳೊಂದಿಗೆ ಖೋ ಖೋ ಆಡುತ್ತಿರುವ ಅಪರೂಪದ ವಿಡಿಯೋ ಇಲ್ಲಿದೆ

Rohit Sharma: ರೋಹಿತ್ ಔಟ್: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ 15 ಸದಸ್ಯರ ಸಂಭಾವ್ಯ ಭಾರತ ತಂಡ ಇಲ್ಲಿದೆ

Published On - 11:33 am, Tue, 28 December 21

ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ