AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಹಡಿ ಮಳಿಗೆದಾರರಿಗೆ ಶಾಕ್ ಕೊಟ್ಟ ಬಿಬಿಎಂಪಿ: ಭದ್ರತೆ ದೃಷ್ಟಿಯಿಂದ ತೆರವು ಮಾಡಿಸಲು ಸೂಚನೆ

ಬೆಂಗಳೂರು ನಗರದಲ್ಲಿ ಅವ್ಯಸ್ಥಿತವಾಗಿ, ಕಾನೂನು ಬಾಹಿರವಾಗಿ ಬಹು ಅಂತಸ್ತಿನ ಕಟ್ಟಡಗಳು ತಲೆ ಎತ್ತಿವೆ. ಅಲ್ಲದೆ ಪಾರ್ಕಿಂಗ್ ಜಾಗಗಳಲ್ಲಿ ಕೂಡ ನೆಲಮಹಡಿ ವಾಣಿಜ್ಯ ಮಳಿಗೆಗಳು ಎಗ್ಗಿಲ್ಲದೆ ಸಕ್ರಿಯವಾಗಿದ್ದು, ಸಾರ್ವಜನಿಕರ ಭದ್ರತೆಯ ದೃಷ್ಟಿಯಿಂದ ಕಳವಳಕ್ಕೆ ಕಾರಣವಾಗಿದೆ. ಹೀಗಾಗಿ ಬಿಬಿಎಂಪಿ ಈಗ ನೆಲಮಹಡಿ ಮಳಿಗೆದಾರರಿಗೆ ಶಾಕ್ ನೀಡಲು ಮುಂದಾಗಿದೆ.

ನೆಲಮಹಡಿ ಮಳಿಗೆದಾರರಿಗೆ ಶಾಕ್ ಕೊಟ್ಟ ಬಿಬಿಎಂಪಿ: ಭದ್ರತೆ ದೃಷ್ಟಿಯಿಂದ ತೆರವು ಮಾಡಿಸಲು ಸೂಚನೆ
ನೆಲಮಹಡಿ ಮಳಿಗೆಗಳು
ಗಣಪತಿ ಶರ್ಮಾ
|

Updated on: Jul 24, 2025 | 9:43 AM

Share

ಬೆಂಗಳೂರು, ಜುಲೈ 24: ಬೆಂಗಳೂರಿನಲ್ಲಿ (Bengaluru) ಅವೈಜ್ಞಾನಿಕವಾಗಿ, ಅವ್ಯವಸ್ತಿವಾಗಿ ಬಹು ಅಂತಸ್ತಿನ ಕಟ್ಟಡಗಳು ತಲೆ ಎತ್ತುತ್ತಿವೆ. ಇದರಿಂದಾಗಿ ಅವಘಡಗಳು, ಪ್ರಮಾದಗಳು ಉಂಟಾಗಿರುವ ಉದಾಹರಣೆಗಳೂ ಇವೆ. ಹೀಗಾಗಿಯೇ ಮಹತ್ವದ ಸಭೆ ನಡೆಸಿರುವ ಬಿಬಿಎಂಪಿ (BBMP) ಮುಖ್ಯ ಆಯುಕ್ತರು, ನೆಲಮಹಡಿಯಲ್ಲಿ ಪಾರ್ಕಿಂಗ್ ಉದ್ದೇಶಕ್ಕೆ ಹೊರತುಪಡಿಸಿ ವಾಣಿಜ್ಯ ಉದ್ದೇಶಕ್ಕೆ ನಡೆಸಲಾಗುತ್ತಿರುವ ಮಳಿಗೆಗಳ ತೆರವಿಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಬಿಬಿಎಂಪಿ ನಡೆ ವಿರುದ್ಧ ವರ್ತಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಹಲವು ಪ್ರದೇಶಗಳ ಶಾಪಿಂಗ್ ಮಾಲ್​ಗಳಲ್ಲಿ ನೆಲಮಾಡಿಯಲ್ಲಿ ಕೂಡ ವಾಣಿಜ್ಯ ಮಳಿಗೆಗಳು ಸಕ್ರಿಯವಾಗಿವೆ. ಮೆಜೆಸ್ಟಿಕ್​ನ ನ್ಯಾಷನಲ್ ಬಜಾರ್, ಸಿಟಿ ಸೆಂಟರ್ ಸುತ್ತಮುತ್ತ ಈ ರೀತಿಯ ಮಳಿಗೆಗಳು ಹಲವು ವರ್ಷಗಳಿಂದಲೂ ಇವೆ. ಇವುಗಳನ್ನು ತೆರವು ಮಾಡಿಸಲು ಬಿಬಿಎಂಪಿ ಮುಂದಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ಥಳೀಯ ವ್ಯಾಪಾರಿಗಳು, ಹೊಸದಾಗಿ ನಿರ್ಮಾಣ ಮಾಡಲಾಗುತ್ತಿರುವ ವಾಣಿಜ್ಯ ಸಂಕೀರ್ಣಗಳಿಗೆ ಈ ನಿಯಮ ಅಳವಡಿಕೆ ಮಾಡಿ. ಸುಮಾರು ವರ್ಷಗಳಿಂದ ನಾವು ಇಲ್ಲಿ ವ್ಯಾಪಾರ ಮಾಡಿಕೊಂಡಿದ್ದೇವೆ. ಈಗ ತೆರವು ಮಾಡಿದರೆ ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ
Image
ಮಹದಾಯಿ ವಿಚಾರದಲ್ಲಿ ಮತ್ತೆ ಗೋವಾ ಕ್ಯಾತೆ: ಸಾವಂತ್ ಹೇಳಿಕೆಗೆ ಕರ್ನಾಟಕ ಕಿಡಿ
Image
ದೆಹಲಿ ಪ್ರವಾಸಕ್ಕೆ ಮುನ್ನಾ ದಿನ ರಹಸ್ಯವಾಗಿ ಹಾಸನಕ್ಕೆ ತೆರಳಿ ಡಿಕೆಶಿ ಪೂಜೆ!
Image
ಶಾಲಾ ಮಕ್ಕಳಿಗೆ ಫ್ಲೇವರ್ಡ್ ನಂದಿನಿ ಹಾಲು ವಿತರಣೆಗೆ ಬಮೂಲ್ ಪ್ರಸ್ತಾಪ

ಇದನ್ನೂ ಓದಿ: ಹಳೆ ಜಿಎಸ್‌ಟಿ ಬಾಕಿ ಮನ್ನಾ ಮಾಡಿದ ಸರ್ಕಾರ: ಸಣ್ಣ ವ್ಯಾಪಾರಿಗಳ ಮುಷ್ಕರ ವಾಪಸ್

ಒಟ್ಟಾರೆಯಾಗಿ ಬಿಬಿಎಂಪಿ ಸಾರ್ವಜನಿಕರ ಅಥವಾ ಗ್ರಾಹಕರ ಹಿತದೃಷ್ಟಿಯಿಂದ ಅನಧಿಕೃತ ನೆಲ ಮಹಡಿಗಳ ತೆರವಿಗೆ ನೋಟಿಸ್ ಕೊಡಲು ಮುಂದಾಗಿದೆ. ಪಾಲಿಕೆಯ ಎಲ್ಲ ವಲಯಗಳಲ್ಲೂ ನೋಟಿಸ್ ನೀಡಲು ತಯಾರಿ ನಡೆಸಿದೆ. ಹೀಗಾಗಿ ನೆಲಮಹಡಿಗಳಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ವ್ಯಾಪಾರಿಗಳ ಆಕ್ಷೇಪಕ್ಕೆ ಬಿಬಿಎಂಪಿ ಯಾವ ರೀತಿ ಸ್ಪಂದಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9, ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ