AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಹಡಿ ಮಳಿಗೆದಾರರಿಗೆ ಶಾಕ್ ಕೊಟ್ಟ ಬಿಬಿಎಂಪಿ: ಭದ್ರತೆ ದೃಷ್ಟಿಯಿಂದ ತೆರವು ಮಾಡಿಸಲು ಸೂಚನೆ

ಬೆಂಗಳೂರು ನಗರದಲ್ಲಿ ಅವ್ಯಸ್ಥಿತವಾಗಿ, ಕಾನೂನು ಬಾಹಿರವಾಗಿ ಬಹು ಅಂತಸ್ತಿನ ಕಟ್ಟಡಗಳು ತಲೆ ಎತ್ತಿವೆ. ಅಲ್ಲದೆ ಪಾರ್ಕಿಂಗ್ ಜಾಗಗಳಲ್ಲಿ ಕೂಡ ನೆಲಮಹಡಿ ವಾಣಿಜ್ಯ ಮಳಿಗೆಗಳು ಎಗ್ಗಿಲ್ಲದೆ ಸಕ್ರಿಯವಾಗಿದ್ದು, ಸಾರ್ವಜನಿಕರ ಭದ್ರತೆಯ ದೃಷ್ಟಿಯಿಂದ ಕಳವಳಕ್ಕೆ ಕಾರಣವಾಗಿದೆ. ಹೀಗಾಗಿ ಬಿಬಿಎಂಪಿ ಈಗ ನೆಲಮಹಡಿ ಮಳಿಗೆದಾರರಿಗೆ ಶಾಕ್ ನೀಡಲು ಮುಂದಾಗಿದೆ.

ನೆಲಮಹಡಿ ಮಳಿಗೆದಾರರಿಗೆ ಶಾಕ್ ಕೊಟ್ಟ ಬಿಬಿಎಂಪಿ: ಭದ್ರತೆ ದೃಷ್ಟಿಯಿಂದ ತೆರವು ಮಾಡಿಸಲು ಸೂಚನೆ
ನೆಲಮಹಡಿ ಮಳಿಗೆಗಳು
Ganapathi Sharma
|

Updated on: Jul 24, 2025 | 9:43 AM

Share

ಬೆಂಗಳೂರು, ಜುಲೈ 24: ಬೆಂಗಳೂರಿನಲ್ಲಿ (Bengaluru) ಅವೈಜ್ಞಾನಿಕವಾಗಿ, ಅವ್ಯವಸ್ತಿವಾಗಿ ಬಹು ಅಂತಸ್ತಿನ ಕಟ್ಟಡಗಳು ತಲೆ ಎತ್ತುತ್ತಿವೆ. ಇದರಿಂದಾಗಿ ಅವಘಡಗಳು, ಪ್ರಮಾದಗಳು ಉಂಟಾಗಿರುವ ಉದಾಹರಣೆಗಳೂ ಇವೆ. ಹೀಗಾಗಿಯೇ ಮಹತ್ವದ ಸಭೆ ನಡೆಸಿರುವ ಬಿಬಿಎಂಪಿ (BBMP) ಮುಖ್ಯ ಆಯುಕ್ತರು, ನೆಲಮಹಡಿಯಲ್ಲಿ ಪಾರ್ಕಿಂಗ್ ಉದ್ದೇಶಕ್ಕೆ ಹೊರತುಪಡಿಸಿ ವಾಣಿಜ್ಯ ಉದ್ದೇಶಕ್ಕೆ ನಡೆಸಲಾಗುತ್ತಿರುವ ಮಳಿಗೆಗಳ ತೆರವಿಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಬಿಬಿಎಂಪಿ ನಡೆ ವಿರುದ್ಧ ವರ್ತಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಹಲವು ಪ್ರದೇಶಗಳ ಶಾಪಿಂಗ್ ಮಾಲ್​ಗಳಲ್ಲಿ ನೆಲಮಾಡಿಯಲ್ಲಿ ಕೂಡ ವಾಣಿಜ್ಯ ಮಳಿಗೆಗಳು ಸಕ್ರಿಯವಾಗಿವೆ. ಮೆಜೆಸ್ಟಿಕ್​ನ ನ್ಯಾಷನಲ್ ಬಜಾರ್, ಸಿಟಿ ಸೆಂಟರ್ ಸುತ್ತಮುತ್ತ ಈ ರೀತಿಯ ಮಳಿಗೆಗಳು ಹಲವು ವರ್ಷಗಳಿಂದಲೂ ಇವೆ. ಇವುಗಳನ್ನು ತೆರವು ಮಾಡಿಸಲು ಬಿಬಿಎಂಪಿ ಮುಂದಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ಥಳೀಯ ವ್ಯಾಪಾರಿಗಳು, ಹೊಸದಾಗಿ ನಿರ್ಮಾಣ ಮಾಡಲಾಗುತ್ತಿರುವ ವಾಣಿಜ್ಯ ಸಂಕೀರ್ಣಗಳಿಗೆ ಈ ನಿಯಮ ಅಳವಡಿಕೆ ಮಾಡಿ. ಸುಮಾರು ವರ್ಷಗಳಿಂದ ನಾವು ಇಲ್ಲಿ ವ್ಯಾಪಾರ ಮಾಡಿಕೊಂಡಿದ್ದೇವೆ. ಈಗ ತೆರವು ಮಾಡಿದರೆ ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ
Image
ಮಹದಾಯಿ ವಿಚಾರದಲ್ಲಿ ಮತ್ತೆ ಗೋವಾ ಕ್ಯಾತೆ: ಸಾವಂತ್ ಹೇಳಿಕೆಗೆ ಕರ್ನಾಟಕ ಕಿಡಿ
Image
ದೆಹಲಿ ಪ್ರವಾಸಕ್ಕೆ ಮುನ್ನಾ ದಿನ ರಹಸ್ಯವಾಗಿ ಹಾಸನಕ್ಕೆ ತೆರಳಿ ಡಿಕೆಶಿ ಪೂಜೆ!
Image
ಶಾಲಾ ಮಕ್ಕಳಿಗೆ ಫ್ಲೇವರ್ಡ್ ನಂದಿನಿ ಹಾಲು ವಿತರಣೆಗೆ ಬಮೂಲ್ ಪ್ರಸ್ತಾಪ

ಇದನ್ನೂ ಓದಿ: ಹಳೆ ಜಿಎಸ್‌ಟಿ ಬಾಕಿ ಮನ್ನಾ ಮಾಡಿದ ಸರ್ಕಾರ: ಸಣ್ಣ ವ್ಯಾಪಾರಿಗಳ ಮುಷ್ಕರ ವಾಪಸ್

ಒಟ್ಟಾರೆಯಾಗಿ ಬಿಬಿಎಂಪಿ ಸಾರ್ವಜನಿಕರ ಅಥವಾ ಗ್ರಾಹಕರ ಹಿತದೃಷ್ಟಿಯಿಂದ ಅನಧಿಕೃತ ನೆಲ ಮಹಡಿಗಳ ತೆರವಿಗೆ ನೋಟಿಸ್ ಕೊಡಲು ಮುಂದಾಗಿದೆ. ಪಾಲಿಕೆಯ ಎಲ್ಲ ವಲಯಗಳಲ್ಲೂ ನೋಟಿಸ್ ನೀಡಲು ತಯಾರಿ ನಡೆಸಿದೆ. ಹೀಗಾಗಿ ನೆಲಮಹಡಿಗಳಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ವ್ಯಾಪಾರಿಗಳ ಆಕ್ಷೇಪಕ್ಕೆ ಬಿಬಿಎಂಪಿ ಯಾವ ರೀತಿ ಸ್ಪಂದಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9, ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!