AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಹಡಿ ಮಳಿಗೆದಾರರಿಗೆ ಶಾಕ್ ಕೊಟ್ಟ ಬಿಬಿಎಂಪಿ: ಭದ್ರತೆ ದೃಷ್ಟಿಯಿಂದ ತೆರವು ಮಾಡಿಸಲು ಸೂಚನೆ

ಬೆಂಗಳೂರು ನಗರದಲ್ಲಿ ಅವ್ಯಸ್ಥಿತವಾಗಿ, ಕಾನೂನು ಬಾಹಿರವಾಗಿ ಬಹು ಅಂತಸ್ತಿನ ಕಟ್ಟಡಗಳು ತಲೆ ಎತ್ತಿವೆ. ಅಲ್ಲದೆ ಪಾರ್ಕಿಂಗ್ ಜಾಗಗಳಲ್ಲಿ ಕೂಡ ನೆಲಮಹಡಿ ವಾಣಿಜ್ಯ ಮಳಿಗೆಗಳು ಎಗ್ಗಿಲ್ಲದೆ ಸಕ್ರಿಯವಾಗಿದ್ದು, ಸಾರ್ವಜನಿಕರ ಭದ್ರತೆಯ ದೃಷ್ಟಿಯಿಂದ ಕಳವಳಕ್ಕೆ ಕಾರಣವಾಗಿದೆ. ಹೀಗಾಗಿ ಬಿಬಿಎಂಪಿ ಈಗ ನೆಲಮಹಡಿ ಮಳಿಗೆದಾರರಿಗೆ ಶಾಕ್ ನೀಡಲು ಮುಂದಾಗಿದೆ.

ನೆಲಮಹಡಿ ಮಳಿಗೆದಾರರಿಗೆ ಶಾಕ್ ಕೊಟ್ಟ ಬಿಬಿಎಂಪಿ: ಭದ್ರತೆ ದೃಷ್ಟಿಯಿಂದ ತೆರವು ಮಾಡಿಸಲು ಸೂಚನೆ
ನೆಲಮಹಡಿ ಮಳಿಗೆಗಳು
Ganapathi Sharma
|

Updated on: Jul 24, 2025 | 9:43 AM

Share

ಬೆಂಗಳೂರು, ಜುಲೈ 24: ಬೆಂಗಳೂರಿನಲ್ಲಿ (Bengaluru) ಅವೈಜ್ಞಾನಿಕವಾಗಿ, ಅವ್ಯವಸ್ತಿವಾಗಿ ಬಹು ಅಂತಸ್ತಿನ ಕಟ್ಟಡಗಳು ತಲೆ ಎತ್ತುತ್ತಿವೆ. ಇದರಿಂದಾಗಿ ಅವಘಡಗಳು, ಪ್ರಮಾದಗಳು ಉಂಟಾಗಿರುವ ಉದಾಹರಣೆಗಳೂ ಇವೆ. ಹೀಗಾಗಿಯೇ ಮಹತ್ವದ ಸಭೆ ನಡೆಸಿರುವ ಬಿಬಿಎಂಪಿ (BBMP) ಮುಖ್ಯ ಆಯುಕ್ತರು, ನೆಲಮಹಡಿಯಲ್ಲಿ ಪಾರ್ಕಿಂಗ್ ಉದ್ದೇಶಕ್ಕೆ ಹೊರತುಪಡಿಸಿ ವಾಣಿಜ್ಯ ಉದ್ದೇಶಕ್ಕೆ ನಡೆಸಲಾಗುತ್ತಿರುವ ಮಳಿಗೆಗಳ ತೆರವಿಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಬಿಬಿಎಂಪಿ ನಡೆ ವಿರುದ್ಧ ವರ್ತಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಹಲವು ಪ್ರದೇಶಗಳ ಶಾಪಿಂಗ್ ಮಾಲ್​ಗಳಲ್ಲಿ ನೆಲಮಾಡಿಯಲ್ಲಿ ಕೂಡ ವಾಣಿಜ್ಯ ಮಳಿಗೆಗಳು ಸಕ್ರಿಯವಾಗಿವೆ. ಮೆಜೆಸ್ಟಿಕ್​ನ ನ್ಯಾಷನಲ್ ಬಜಾರ್, ಸಿಟಿ ಸೆಂಟರ್ ಸುತ್ತಮುತ್ತ ಈ ರೀತಿಯ ಮಳಿಗೆಗಳು ಹಲವು ವರ್ಷಗಳಿಂದಲೂ ಇವೆ. ಇವುಗಳನ್ನು ತೆರವು ಮಾಡಿಸಲು ಬಿಬಿಎಂಪಿ ಮುಂದಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ಥಳೀಯ ವ್ಯಾಪಾರಿಗಳು, ಹೊಸದಾಗಿ ನಿರ್ಮಾಣ ಮಾಡಲಾಗುತ್ತಿರುವ ವಾಣಿಜ್ಯ ಸಂಕೀರ್ಣಗಳಿಗೆ ಈ ನಿಯಮ ಅಳವಡಿಕೆ ಮಾಡಿ. ಸುಮಾರು ವರ್ಷಗಳಿಂದ ನಾವು ಇಲ್ಲಿ ವ್ಯಾಪಾರ ಮಾಡಿಕೊಂಡಿದ್ದೇವೆ. ಈಗ ತೆರವು ಮಾಡಿದರೆ ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ
Image
ಮಹದಾಯಿ ವಿಚಾರದಲ್ಲಿ ಮತ್ತೆ ಗೋವಾ ಕ್ಯಾತೆ: ಸಾವಂತ್ ಹೇಳಿಕೆಗೆ ಕರ್ನಾಟಕ ಕಿಡಿ
Image
ದೆಹಲಿ ಪ್ರವಾಸಕ್ಕೆ ಮುನ್ನಾ ದಿನ ರಹಸ್ಯವಾಗಿ ಹಾಸನಕ್ಕೆ ತೆರಳಿ ಡಿಕೆಶಿ ಪೂಜೆ!
Image
ಶಾಲಾ ಮಕ್ಕಳಿಗೆ ಫ್ಲೇವರ್ಡ್ ನಂದಿನಿ ಹಾಲು ವಿತರಣೆಗೆ ಬಮೂಲ್ ಪ್ರಸ್ತಾಪ

ಇದನ್ನೂ ಓದಿ: ಹಳೆ ಜಿಎಸ್‌ಟಿ ಬಾಕಿ ಮನ್ನಾ ಮಾಡಿದ ಸರ್ಕಾರ: ಸಣ್ಣ ವ್ಯಾಪಾರಿಗಳ ಮುಷ್ಕರ ವಾಪಸ್

ಒಟ್ಟಾರೆಯಾಗಿ ಬಿಬಿಎಂಪಿ ಸಾರ್ವಜನಿಕರ ಅಥವಾ ಗ್ರಾಹಕರ ಹಿತದೃಷ್ಟಿಯಿಂದ ಅನಧಿಕೃತ ನೆಲ ಮಹಡಿಗಳ ತೆರವಿಗೆ ನೋಟಿಸ್ ಕೊಡಲು ಮುಂದಾಗಿದೆ. ಪಾಲಿಕೆಯ ಎಲ್ಲ ವಲಯಗಳಲ್ಲೂ ನೋಟಿಸ್ ನೀಡಲು ತಯಾರಿ ನಡೆಸಿದೆ. ಹೀಗಾಗಿ ನೆಲಮಹಡಿಗಳಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ವ್ಯಾಪಾರಿಗಳ ಆಕ್ಷೇಪಕ್ಕೆ ಬಿಬಿಎಂಪಿ ಯಾವ ರೀತಿ ಸ್ಪಂದಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9, ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​