AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಎಚ್ಚೆತ್ತುಕೊಂಡ ಬಿಬಿಎಂಪಿ, ಸಂಚಾರಕ್ಕೆ ಸೂಕ್ತವಿಲ್ಲದಿರುವ ಅಂಡರ್ ಪಾಸ್ ಬಂದ್​ ಮಾಡಲು ತೀರ್ಮಾನಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಿನ್ನೆ ಮಧ್ಯಾಹ್ನ 3.15ರಿಂದ 4 ಗಂಟೆ ವೇಳೆಗೆ 50 ಮಿ.ಮೀ ಮಳೆ ಆಗಿದೆ. 45 ನಿಮಿಷದ ಅವಧಿಯಲ್ಲಿ ಭಾರಿ ಮಳೆ ಬಂದಿದ್ದರಿಂದ ಸಮಸ್ಯೆ ಆಗಿದೆ.

Bengaluru Rain: ಎಚ್ಚೆತ್ತುಕೊಂಡ ಬಿಬಿಎಂಪಿ, ಸಂಚಾರಕ್ಕೆ ಸೂಕ್ತವಿಲ್ಲದಿರುವ ಅಂಡರ್ ಪಾಸ್ ಬಂದ್​ ಮಾಡಲು ತೀರ್ಮಾನಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಆಯೇಷಾ ಬಾನು
|

Updated on: May 22, 2023 | 1:11 PM

Share

ಬೆಂಗಳೂರು: ನಗರದಲ್ಲಿ ನಿನ್ನೆ(ಮೇ 21) ಸುರಿದ ಮಳೆ ಭಾರೀ ಅವಾಂತರಗಳನ್ನು ಸೃಷ್ಟಿಸಿದೆ(Bengaluru Rain). ರಣ ಮಳೆಗೆ ಬೆಂಗಳೂರಿನಲ್ಲಿ ಇಬ್ಬರು ಬಲಿಯಾಗಿದ್ದಾರೆ(Death). ಅನೇಕ ಏರಿಯಾಗಳಲ್ಲಿ ಮರಗಳು, ಲೈಟ್ ಕಂಬಗಳು ಧರೆಗುರುಳಿದ್ದು ಕಗ್ಗತ್ತಲು ಆವರಿಸಿದೆ. ನಗರದ ಅವ್ಯವಸ್ಥೆ, ಅವೈಜ್ಞಾನಿಕ ರಸ್ತೆ, ಅಂಡರ್​ ಪಾಸ್​ಗಳಿಗಾಗಿ ಜನ ಬಿಬಿಎಂಪಿ(BBMP) ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಬೆಂಗಳೂರಿನ ಮಳೆ ಸಂಬಂಧ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಿನ್ನೆ ಮಧ್ಯಾಹ್ನ 3.15ರಿಂದ 4 ಗಂಟೆ ವೇಳೆಗೆ 50 ಮಿ.ಮೀ ಮಳೆ ಆಗಿದೆ. 45 ನಿಮಿಷದ ಅವಧಿಯಲ್ಲಿ ಭಾರಿ ಮಳೆ ಬಂದಿದ್ದರಿಂದ ಸಮಸ್ಯೆ ಆಗಿದೆ. ಬೆಂಗಳೂರು ನಗರದ ಎಲ್ಲಾ ಅಂಡರ್​ಪಾಸ್​ಗಳ ಸರ್ವೆ ನಡೆಯುತ್ತಿದೆ. ಡ್ರೈನೇಜ್ ಇಲ್ಲದ ಅಂಡರ್ ಪಾಸ್​​ಗಳನ್ನು ಬಂದ್ ಮಾಡಲಾಗುವುದು. ಲೋಪ ಇರೋ ಅಂಡರ್ ಪಾಸ್ ರಿಪೇರಿ ಮಾಡಿಯೇ ರಿ ಓಪನ್ ಮಾಡಲಾಗುವುದು. ಬೆಂಗಳೂರಿನಲ್ಲಿ 18 ಅಂಡರ್ ಪಾಸ್​ಗಳಿವೆ. ನಿನ್ನೆ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಭಾರೀ ಮಳೆಗೆ ಬೆಂಗಳೂರಿನಲ್ಲಿ ಅವಘಡ; ನೂತನ ಮುಖ್ಯಮಂತ್ರಿಗೆ ಮಾಜಿ ಸಿಎಂ ಬೊಮ್ಮಾಯಿ ಮಹತ್ವದ ಸಲಹೆ

ಇನ್ನು ಇದೇ ವೇಳೆ ಬೆಂಗಳೂರು ನಗರದಲ್ಲಿ ನಿನ್ನೆ 20 ಮನೆಗಳಿಗೆ ಮಳೆ ನೀರು ನುಗ್ಗಿದೆ.  ಸಂಚಾರಕ್ಕೆ ಸೂಕ್ತವಿಲ್ಲದಿರುವ ಅಂಡರ್ ಪಾಸ್ ಬಂದ್​ ಮಾಡುತ್ತೇವೆ. ಮಹಾಲಕ್ಷ್ಮಿ ಲೇಔಟ್​ನಲ್ಲಿ ರಾಜಕಾಲುವೆ ಕೆಲಸ ನಡೆಯುತ್ತಿದ್ದ ಹಿನ್ನೆಲೆ ಅತೀವ ಮಳೆಯಾಗಿ 20 ಮನೆಗಳಿಗೆ ನೀರು ನುಗ್ಗಿದೆ. ಚಂಡ ಮಾರುತದಿಂದ ಎಲೆಗಳು ಉದುರಿದ್ದು 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬಂದಿದೆ. ಹಾಗಾಗಿ ಎಲೆಗಳು ಉದುರಿ ಅಂಡರ್ ಪಾಸ್ ನಲ್ಲಿ ನೀರುಹೋಗುವ ಸ್ಥಳಗಳು ಬಂದ್ ಆಗಿ ಅನಾಹುತ ನಡೆದಿದೆ ಎಂದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ