AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಎಚ್ಚೆತ್ತುಕೊಂಡ ಬಿಬಿಎಂಪಿ, ಸಂಚಾರಕ್ಕೆ ಸೂಕ್ತವಿಲ್ಲದಿರುವ ಅಂಡರ್ ಪಾಸ್ ಬಂದ್​ ಮಾಡಲು ತೀರ್ಮಾನಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಿನ್ನೆ ಮಧ್ಯಾಹ್ನ 3.15ರಿಂದ 4 ಗಂಟೆ ವೇಳೆಗೆ 50 ಮಿ.ಮೀ ಮಳೆ ಆಗಿದೆ. 45 ನಿಮಿಷದ ಅವಧಿಯಲ್ಲಿ ಭಾರಿ ಮಳೆ ಬಂದಿದ್ದರಿಂದ ಸಮಸ್ಯೆ ಆಗಿದೆ.

Bengaluru Rain: ಎಚ್ಚೆತ್ತುಕೊಂಡ ಬಿಬಿಎಂಪಿ, ಸಂಚಾರಕ್ಕೆ ಸೂಕ್ತವಿಲ್ಲದಿರುವ ಅಂಡರ್ ಪಾಸ್ ಬಂದ್​ ಮಾಡಲು ತೀರ್ಮಾನಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಆಯೇಷಾ ಬಾನು
|

Updated on: May 22, 2023 | 1:11 PM

Share

ಬೆಂಗಳೂರು: ನಗರದಲ್ಲಿ ನಿನ್ನೆ(ಮೇ 21) ಸುರಿದ ಮಳೆ ಭಾರೀ ಅವಾಂತರಗಳನ್ನು ಸೃಷ್ಟಿಸಿದೆ(Bengaluru Rain). ರಣ ಮಳೆಗೆ ಬೆಂಗಳೂರಿನಲ್ಲಿ ಇಬ್ಬರು ಬಲಿಯಾಗಿದ್ದಾರೆ(Death). ಅನೇಕ ಏರಿಯಾಗಳಲ್ಲಿ ಮರಗಳು, ಲೈಟ್ ಕಂಬಗಳು ಧರೆಗುರುಳಿದ್ದು ಕಗ್ಗತ್ತಲು ಆವರಿಸಿದೆ. ನಗರದ ಅವ್ಯವಸ್ಥೆ, ಅವೈಜ್ಞಾನಿಕ ರಸ್ತೆ, ಅಂಡರ್​ ಪಾಸ್​ಗಳಿಗಾಗಿ ಜನ ಬಿಬಿಎಂಪಿ(BBMP) ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಬೆಂಗಳೂರಿನ ಮಳೆ ಸಂಬಂಧ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಿನ್ನೆ ಮಧ್ಯಾಹ್ನ 3.15ರಿಂದ 4 ಗಂಟೆ ವೇಳೆಗೆ 50 ಮಿ.ಮೀ ಮಳೆ ಆಗಿದೆ. 45 ನಿಮಿಷದ ಅವಧಿಯಲ್ಲಿ ಭಾರಿ ಮಳೆ ಬಂದಿದ್ದರಿಂದ ಸಮಸ್ಯೆ ಆಗಿದೆ. ಬೆಂಗಳೂರು ನಗರದ ಎಲ್ಲಾ ಅಂಡರ್​ಪಾಸ್​ಗಳ ಸರ್ವೆ ನಡೆಯುತ್ತಿದೆ. ಡ್ರೈನೇಜ್ ಇಲ್ಲದ ಅಂಡರ್ ಪಾಸ್​​ಗಳನ್ನು ಬಂದ್ ಮಾಡಲಾಗುವುದು. ಲೋಪ ಇರೋ ಅಂಡರ್ ಪಾಸ್ ರಿಪೇರಿ ಮಾಡಿಯೇ ರಿ ಓಪನ್ ಮಾಡಲಾಗುವುದು. ಬೆಂಗಳೂರಿನಲ್ಲಿ 18 ಅಂಡರ್ ಪಾಸ್​ಗಳಿವೆ. ನಿನ್ನೆ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಭಾರೀ ಮಳೆಗೆ ಬೆಂಗಳೂರಿನಲ್ಲಿ ಅವಘಡ; ನೂತನ ಮುಖ್ಯಮಂತ್ರಿಗೆ ಮಾಜಿ ಸಿಎಂ ಬೊಮ್ಮಾಯಿ ಮಹತ್ವದ ಸಲಹೆ

ಇನ್ನು ಇದೇ ವೇಳೆ ಬೆಂಗಳೂರು ನಗರದಲ್ಲಿ ನಿನ್ನೆ 20 ಮನೆಗಳಿಗೆ ಮಳೆ ನೀರು ನುಗ್ಗಿದೆ.  ಸಂಚಾರಕ್ಕೆ ಸೂಕ್ತವಿಲ್ಲದಿರುವ ಅಂಡರ್ ಪಾಸ್ ಬಂದ್​ ಮಾಡುತ್ತೇವೆ. ಮಹಾಲಕ್ಷ್ಮಿ ಲೇಔಟ್​ನಲ್ಲಿ ರಾಜಕಾಲುವೆ ಕೆಲಸ ನಡೆಯುತ್ತಿದ್ದ ಹಿನ್ನೆಲೆ ಅತೀವ ಮಳೆಯಾಗಿ 20 ಮನೆಗಳಿಗೆ ನೀರು ನುಗ್ಗಿದೆ. ಚಂಡ ಮಾರುತದಿಂದ ಎಲೆಗಳು ಉದುರಿದ್ದು 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬಂದಿದೆ. ಹಾಗಾಗಿ ಎಲೆಗಳು ಉದುರಿ ಅಂಡರ್ ಪಾಸ್ ನಲ್ಲಿ ನೀರುಹೋಗುವ ಸ್ಥಳಗಳು ಬಂದ್ ಆಗಿ ಅನಾಹುತ ನಡೆದಿದೆ ಎಂದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!