Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಎಚ್ಚೆತ್ತುಕೊಂಡ ಬಿಬಿಎಂಪಿ, ಸಂಚಾರಕ್ಕೆ ಸೂಕ್ತವಿಲ್ಲದಿರುವ ಅಂಡರ್ ಪಾಸ್ ಬಂದ್​ ಮಾಡಲು ತೀರ್ಮಾನಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಿನ್ನೆ ಮಧ್ಯಾಹ್ನ 3.15ರಿಂದ 4 ಗಂಟೆ ವೇಳೆಗೆ 50 ಮಿ.ಮೀ ಮಳೆ ಆಗಿದೆ. 45 ನಿಮಿಷದ ಅವಧಿಯಲ್ಲಿ ಭಾರಿ ಮಳೆ ಬಂದಿದ್ದರಿಂದ ಸಮಸ್ಯೆ ಆಗಿದೆ.

Bengaluru Rain: ಎಚ್ಚೆತ್ತುಕೊಂಡ ಬಿಬಿಎಂಪಿ, ಸಂಚಾರಕ್ಕೆ ಸೂಕ್ತವಿಲ್ಲದಿರುವ ಅಂಡರ್ ಪಾಸ್ ಬಂದ್​ ಮಾಡಲು ತೀರ್ಮಾನಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
Follow us
ಆಯೇಷಾ ಬಾನು
|

Updated on: May 22, 2023 | 1:11 PM

ಬೆಂಗಳೂರು: ನಗರದಲ್ಲಿ ನಿನ್ನೆ(ಮೇ 21) ಸುರಿದ ಮಳೆ ಭಾರೀ ಅವಾಂತರಗಳನ್ನು ಸೃಷ್ಟಿಸಿದೆ(Bengaluru Rain). ರಣ ಮಳೆಗೆ ಬೆಂಗಳೂರಿನಲ್ಲಿ ಇಬ್ಬರು ಬಲಿಯಾಗಿದ್ದಾರೆ(Death). ಅನೇಕ ಏರಿಯಾಗಳಲ್ಲಿ ಮರಗಳು, ಲೈಟ್ ಕಂಬಗಳು ಧರೆಗುರುಳಿದ್ದು ಕಗ್ಗತ್ತಲು ಆವರಿಸಿದೆ. ನಗರದ ಅವ್ಯವಸ್ಥೆ, ಅವೈಜ್ಞಾನಿಕ ರಸ್ತೆ, ಅಂಡರ್​ ಪಾಸ್​ಗಳಿಗಾಗಿ ಜನ ಬಿಬಿಎಂಪಿ(BBMP) ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಬೆಂಗಳೂರಿನ ಮಳೆ ಸಂಬಂಧ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಿನ್ನೆ ಮಧ್ಯಾಹ್ನ 3.15ರಿಂದ 4 ಗಂಟೆ ವೇಳೆಗೆ 50 ಮಿ.ಮೀ ಮಳೆ ಆಗಿದೆ. 45 ನಿಮಿಷದ ಅವಧಿಯಲ್ಲಿ ಭಾರಿ ಮಳೆ ಬಂದಿದ್ದರಿಂದ ಸಮಸ್ಯೆ ಆಗಿದೆ. ಬೆಂಗಳೂರು ನಗರದ ಎಲ್ಲಾ ಅಂಡರ್​ಪಾಸ್​ಗಳ ಸರ್ವೆ ನಡೆಯುತ್ತಿದೆ. ಡ್ರೈನೇಜ್ ಇಲ್ಲದ ಅಂಡರ್ ಪಾಸ್​​ಗಳನ್ನು ಬಂದ್ ಮಾಡಲಾಗುವುದು. ಲೋಪ ಇರೋ ಅಂಡರ್ ಪಾಸ್ ರಿಪೇರಿ ಮಾಡಿಯೇ ರಿ ಓಪನ್ ಮಾಡಲಾಗುವುದು. ಬೆಂಗಳೂರಿನಲ್ಲಿ 18 ಅಂಡರ್ ಪಾಸ್​ಗಳಿವೆ. ನಿನ್ನೆ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಭಾರೀ ಮಳೆಗೆ ಬೆಂಗಳೂರಿನಲ್ಲಿ ಅವಘಡ; ನೂತನ ಮುಖ್ಯಮಂತ್ರಿಗೆ ಮಾಜಿ ಸಿಎಂ ಬೊಮ್ಮಾಯಿ ಮಹತ್ವದ ಸಲಹೆ

ಇನ್ನು ಇದೇ ವೇಳೆ ಬೆಂಗಳೂರು ನಗರದಲ್ಲಿ ನಿನ್ನೆ 20 ಮನೆಗಳಿಗೆ ಮಳೆ ನೀರು ನುಗ್ಗಿದೆ.  ಸಂಚಾರಕ್ಕೆ ಸೂಕ್ತವಿಲ್ಲದಿರುವ ಅಂಡರ್ ಪಾಸ್ ಬಂದ್​ ಮಾಡುತ್ತೇವೆ. ಮಹಾಲಕ್ಷ್ಮಿ ಲೇಔಟ್​ನಲ್ಲಿ ರಾಜಕಾಲುವೆ ಕೆಲಸ ನಡೆಯುತ್ತಿದ್ದ ಹಿನ್ನೆಲೆ ಅತೀವ ಮಳೆಯಾಗಿ 20 ಮನೆಗಳಿಗೆ ನೀರು ನುಗ್ಗಿದೆ. ಚಂಡ ಮಾರುತದಿಂದ ಎಲೆಗಳು ಉದುರಿದ್ದು 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬಂದಿದೆ. ಹಾಗಾಗಿ ಎಲೆಗಳು ಉದುರಿ ಅಂಡರ್ ಪಾಸ್ ನಲ್ಲಿ ನೀರುಹೋಗುವ ಸ್ಥಳಗಳು ಬಂದ್ ಆಗಿ ಅನಾಹುತ ನಡೆದಿದೆ ಎಂದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ