AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬೂಸ್ಟರ್ ಡೋಸ್ ನೀಡಲು ಕೋವಿಶಿಲ್ಡ್ ಕೊರತೆ ಇದೆ ಎಂದ ಬಿಬಿಎಂಪಿ ಆಯುಕ್ತ, ಕೊರತೆ ಇಲ್ಲ ಎಂದ ಸಚಿವ

ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಮಾತನಾಡಿ, ನಮ್ಮಲ್ಲಿ ಹೆಚ್ಚಿನ ಜನರಿಗೆ ಬೂಸ್ಟರ್ ಡೋಸ್ ನೀಡಲು ಕೋವಿಶಿಲ್ಡ್ ಕೋವಿಡ್ 19 ಲಸಿಕೆ ಕೊರೆತೆಯಿದೆ. ಹೀಗಾಗಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಶಿಲ್ಡ್ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಬೂಸ್ಟರ್ ಡೋಸ್ ನೀಡಲು ಕೋವಿಶಿಲ್ಡ್ ಕೊರತೆ ಇದೆ ಎಂದ ಬಿಬಿಎಂಪಿ ಆಯುಕ್ತ, ಕೊರತೆ ಇಲ್ಲ ಎಂದ ಸಚಿವ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಸಚಿವ ಡಾ.ಕೆ. ಸುಧಾಕರ್
TV9 Web
| Edited By: |

Updated on:Dec 23, 2022 | 3:01 PM

Share

ಬೆಂಗಳೂರು: ನೆರೆ ರಾಷ್ಟ್ರಗಳಲ್ಲಿ ಮಾಹಾಮಾರಿ ಕೊರೊನಾ(Coronavirus) ನರ್ತನ ಹೆಚ್ಚಾಗಿದ್ದು ರಾಜ್ಯದಲ್ಲೂ ಕೊರೊನಾ ಆತಂಕ ಹುಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ಸಿಎಂ ಬೊಮ್ಮಾಯಿ(Basavaraj Bommai) ಸಭೆ ನಡೆಸಿ ಚರ್ಚೆಗಳನ್ನು ಮಾಡುತ್ತಿದ್ದಾರೆ. ಆದ್ರೆ ಒಂದು ಕಡೆ ಜನರಿಗೆ ಬೂಸ್ಟರ್ ಡೋಸ್ ನೀಡಲು ಕೋವಿಶಿಲ್ಡ್ ಲಸಿಕೆ ಕೊರೆತೆಯಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.  ಮತ್ತೊಂದೆಡೆ ನಮ್ಮಲ್ಲಿ ಲಸಿಕೆ ಸ್ಟಾಕ್ ಇದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್(Dr K Sudhakar) ತಿಳಿಸಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಮಾತನಾಡಿ, ನಮ್ಮಲ್ಲಿ ಹೆಚ್ಚಿನ ಜನರಿಗೆ ಬೂಸ್ಟರ್ ಡೋಸ್ ನೀಡಲು ಕೋವಿಶಿಲ್ಡ್ ಕೋವಿಡ್ 19 ಲಸಿಕೆ ಕೊರೆತೆಯಿದೆ. ಹೀಗಾಗಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಶಿಲ್ಡ್ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. “ನಮ್ಮಲ್ಲಿ ಕೋವಾಕ್ಸಿನ್ ಸ್ಟಾಕ್ ಇದೆ ಆದರೆ ಕೋವಿಶೀಲ್ಡ್ ಸ್ಟಾಕ್ ಇಲ್ಲ. ನಮ್ಮ ಹಿಂದಿನ ವ್ಯಾಕ್ಸಿನೇಷನ್ ಡ್ರೈವ್ ಸಮಯದಲ್ಲಿ, ಬೆಂಗಳೂರಿನಲ್ಲಿ ಶೇಕಡಾ 90 ರಷ್ಟು ಜನರು ಕೋವಿಶೀಲ್ಡ್ ಅನ್ನು ಪಡೆದಿದ್ದರೆ, ಕೇವಲ 10 ಪ್ರತಿಶತದಷ್ಟು ಜನರು ಮಾತ್ರ ಕೋವಾಕ್ಸಿನ್ ಲಸಿಕೆಯನ್ನು ಪಡೆದಿದ್ದಾರೆ. ಸದ್ಯ ಈಗ ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಅರ್ಹರಾದವರನ್ನು ಸಂಪರ್ಕಿಸಿ ಅವರಿಗೆ ಬೂಸ್ಟರ್ ಡೋಸ್ ಪಡೆಯಲು ವಿನಂತಿಸುತ್ತೇವೆ ಎಂದು ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಹಾಗೂ ಅವರು ಜನರಿಗೆ ಕೊರೊನಾದಿಂದ ತಮ್ಮನ್ನು ಕಾಪಾಡಿಕೊಳ್ಳಲು ಫೇಸ್ ಮಾಸ್ಕನ್ನು ಬಳಸಿ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Bengaluru Covid Guidelines: ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಮಾಸ್ಕ್​ ಕಡ್ಡಾಯಗೊಳಿಸಿ ಆದೇಶ

ರಾಜ್ಯದಲ್ಲಿ ಕೊವಿಡ್ ಲಸಿಕೆಯ ಕೊರತೆ ಇಲ್ಲ ಎಂದ ಸುಧಾಕರ್

ಬೆಂಗಳೂರಿನ ಕೆಂಪೇಗೌಡ ಏರ್​​ಪೋರ್ಟ್​​ನಲ್ಲಿ ಮಾತನಾಡಿದ ಸಚಿವ ಡಾ.ಸುಧಾಕರ್​​​, ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಡೋಸ್​​​ ಇದೆ. ಕೊವಿಶೀಲ್ಡ್​, ಕೊವ್ಯಾಕ್ಸಿನ್​, ನೇಸಲ್​ ಲಸಿಕೆ ಇದೆ. ಇಂದು ಕೇಂದ್ರ ಆರೋಗ್ಯ ಸಚಿವರ ನೇತೃತ್ವದಲ್ಲಿ ಸಭೆ ಇದೆ. ರಾಜ್ಯದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತೇವೆ. ಸದ್ಯಕ್ಕೆ ಮಾಸ್ಕ್, ಕೊವಿಡ್ ಪಾಲನೆಗೆ ಸಲಹೆ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಅಗತ್ಯಬಿದ್ದರೆ ಕಠಿಣ ಕ್ರಮ ಜಾರಿ ಮಾಡುತ್ತೇವೆ. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಒಳ್ಳೆಯದು ಎಂದಿದ್ದಾರೆ.

ಆದ್ರೆ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಆರೋಗ್ಯ ಸಚಿವರ ಹೇಳಿಕೆಗಳಲ್ಲಿ ವ್ಯತ್ಯಾಸ ಕಂಡು ಬಂದಿದ್ದು ಸಂಪರ್ಗ ಕೊರತೆ ಎದ್ದು ಕಾಣುತ್ತಿದೆ.

ಈ ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:50 pm, Fri, 23 December 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು