AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿಯಿಂದ ಗುತ್ತಿಗೆದಾರಿಗೆ ಆತಂಕ: ಬಾಕಿ ಹಣ ಪಾವತಿಸುವಂತೆ ಬಿಬಿಎಂಪಿಗೆ ಡೆಡ್ ಲೈನ್

ಗ್ಯಾರಂಟಿಯಿಂದ ಗುತ್ತಿಗರದಾರಿಗೆ ಆತಂಕ ಶುರುವಾಗಿದ್ದು, ಬಾಕಿ ಹಣ ಪಾವತಿಸುವಂತೆ ಬಿಬಿಎಂಪಿಗೆ ಬೆಂಗಳೂರು ಗುತ್ತಿಗೆದಾರರ ಸಂಘ ಡೆಡ್ ಲೈನ್ ನೀಡಿದೆ.

ಗ್ಯಾರಂಟಿಯಿಂದ ಗುತ್ತಿಗೆದಾರಿಗೆ ಆತಂಕ: ಬಾಕಿ ಹಣ ಪಾವತಿಸುವಂತೆ ಬಿಬಿಎಂಪಿಗೆ ಡೆಡ್ ಲೈನ್
ಬೆಂಗಳೂರು ಗುತ್ತಿಗೆದಾರರ ಸಂಘ
ರಮೇಶ್ ಬಿ. ಜವಳಗೇರಾ
|

Updated on: Jun 01, 2023 | 11:11 AM

Share

ಮುಖ್ಯಾಂಶಗಳು

  • ಸರ್ಕಾರಕ್ಕೆ ಬಿಗ್ ಶಾಕ್ ಕೊಟ್ಟ ಬೆಂಗಳೂರು ಗುತ್ತಿಗೆದಾರ ಸಂಘ
  • 2,500 ಕೋಟಿ ಬಾಕಿ ಬಿಲ್‌ಗಳನ್ನು ಜೂನ್ 5 ರೊಳಗೆ ತೆರವುಗೊಳಿಸದಿದ್ದರೆ ಕಾಮಗಾರಿ ಸ್ಥಗಿತಗೊಳಿಸುವುದಾಗಿ
  • ಬೆಂಗಳೂರು ಗುತ್ತಿಗೆದಾರರ ಸಂಘದಿಂದ ಬಿಬಿಎಂಪಿಗೆ ಡೆಡ್ ಲೈನ್

ಬೆಂಗಳೂರು: ಸರ್ಕಾರದ ಗ್ಯಾರಂಟಿಯಿಂದ ಗುತ್ತಿಗರದಾರಿಗೆ ಆತಂಕ ಶುರುವಾಗಿದ್ದು, ಜೂನ್ 5ರೊಳಗೆ ಬಾಕಿ ಇರುವ ಸುಮಾರು 2500 ಕೋಟಿ ರೂ. ಬಿಲ್ ಬಾಕಿ ಕ್ಲಿಯರ್ ಮಾಡುವಂತೆ ಬಿಬಿಎಂಪಿಗೆ ಬೆಂಗಳೂರು ಗುತ್ತಿಗೆದಾರರ ಸಂಘ ಡೆಡ್ ಲೈನ್ ನೀಡಿದೆ. ಒಂದು ವೇಳೆ ಬಿಲ್ ಕ್ಲಿಯರ್ ಮಾಡದಿದ್ದಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸುವುದಾಗಿ ಎಚ‌ರಿಕೆ ನೀಡಿದೆ. ಐದು ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಖಜಾನೆ ಖಾಲಿಯಾದ್ರೆ ಕಾಮಗಾರಿಯ ಬಾಕಿ ಕ್ಲಿಯರ್ ಆಗುತ್ತೋ ಇಲ್ವೊ ಎನ್ನುವ ಆತಂಕ ಶುರುವಾಗಿದೆ. ಹೀಗಾಗಿ ಪಾಲಿಕೆಗೆ ಜೂನ್ 5 ರೊಳಗೆ ಹಣ ಕ್ಲೀಯರ್ ಮಾಡದೇ ಇದ್ದರೆ ಬೆಂಗಳೂರು ವ್ಯಾಪ್ತಿಯಲ್ಲಿ ಎಲ್ಲ ಕಾಮಗಾರಿ ಸ್ಥಗಿತ ಮಾಡುವುದಾಗಿ ಬೆಂಗಳೂರು ಗುತ್ತಿಗೆದಾರರ ಸಂಘ ಎಚ್ಚರಿಸಿದೆ. ಈ ಬಗ್ಗೆ ಬೆಂಗಳೂರು ಗುತ್ತಿಗೆದಾರರ ಸಂಘವು ಬಿಬಿಎಂಪಿ ಆಯುಕ್ತರನ್ನ ಭೇಟಿ ಮಾಡಿ ಬಾಕಿ ಬಿಲ್ ಕ್ಲೀಯರ್​ ಮಾಡುವಂತೆ ಮನವಿ ಮಾಡಿದೆ. ಇದೀಗ ಗುತ್ತೆಗೆದಾರರ ಡೆಡ್ ಲೈನ್ ನಿಂದ ಪಾಲಿಕೆಗೆ ಹೊಸ ಟೆನ್ಷನ್ ಶುರುವಾದಂತಾಗಿದೆ.

ಅನ್ನಭಾಗ್ಯ, ಗೃಹಲಕ್ಷ್ಮೀ, ಸೇರಿದಂತೆ ಸರ್ಕಾರ ಐದು ಗ್ಯಾರಂಟಿಗಳ ಜಾರಿಗೆಗೆ ಹಣ ಕ್ರೂಢಿಕರಣಕ್ಕೆ ಮುಂದಾಗಿದೆ. ಫ್ರೀಂ ಸ್ಕೀಂನಿಂದ ಬಾಕಿ ಉಳದಿರುವ ಸಾವಿರಾರು ಕೋಟಿ ರೂ. ಸಮಯಕ್ಕೆ ಸರಿಯಾಗಿ ಸಿಗುತ್ತೋ ಇಲ್ವೋ ಎನ್ನುವ ಟೆನ್ಷನ್​ನಲ್ಲಿ ಗುತ್ತಿಗೆದಾರರು ಇದ್ದಾರೆ. ಹೀಗಾಗಿ ಬಾಕಿ ಹಣ ಪಾವತಿ ಮಾಡುವಂತೆ ಬಿಬಿಎಂಪಿಯಲ್ಲಿ ಗುತ್ತಿಗೆದಾರರ ಫೈಟ್ ಶುರುವಾಗಿದೆ.

ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರ್ತಿದ್ದಂತೆ ಕಳೆದ ಸರ್ಕಾರದ ಕಾಮಗಾರಿ ಹಾಗೂ ಬಿಲ್ ಪಾವತಿಗೆ ಬ್ರೇಕ್ ಹಾಕಿದೆ. ಹೀಗಾಗಿ ಪಾಲಿಕೆಯ ಅನುದಾನದಲ್ಲಿ ಪೂರ್ಣಗೊಂಡಿರುವ ಕಾಮಗಾರಿಗೆ ಹಣ ಪಾವತಿ ತಡೆಹಿಡಯಲಾಗಿದೆ. ಕಳೆದ ಎರಡು ವರ್ಷದ ಸುಮಾರು ಎರಡು ಸಾವಿರ ಕೋಟಿ ಬಿಲ್ ಬಾಕಿ ಇದೆ. ಸದ್ಯ ಬಿಬಿಎಂಪಿ ವ್ಯಾಪ್ತಿಯಲ್ಲಿನ 2400 ಕೋಟಿ ರೂ. ಅಧಿಕ ಬಿಲ್ ಪಾವತಿ ಕ್ಲೀಯರ್ ಮಾಡಬೇಕಿದೆ.

ಮೇ 26 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಆಡಳಿತದಲ್ಲಿ ಪ್ರಾರಂಭಿಸಲಾದ ಯೋಜನೆಗಳನ್ನು ನಿಲ್ಲಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದರು. ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಹಣ ಪಾವತಿಯಲ್ಲಿ ಮತ್ತಷ್ಟು ವಿಳಂಬಕ್ಕೆ ಕಾರಣವಾಗಿದ್ದು, ಇದು ಗುತ್ತಿಗೆದಾರರ ಸಂಘದ ಅಸಮಾಧಾನಕ್ಕೆ ಕಾರಣವಾಗಿದೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!