Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕುಪ್ರಾಣಿ ಪರವಾನಗಿ: ಹೊಸ ಕರಡು ರಚಿಸಿಲು ನಿರ್ಧರಿಸಿದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊಸದಾಗಿ ಸಾಕುಪ್ರಾಣಿ ಪರವಾನಗಿ ಕರಡು ಅನ್ನು ಸಿದ್ದಪಡಿಸಲು ನಿರ್ಧರಿಸಿದೆ.

ಸಾಕುಪ್ರಾಣಿ ಪರವಾನಗಿ: ಹೊಸ ಕರಡು ರಚಿಸಿಲು ನಿರ್ಧರಿಸಿದ ಬಿಬಿಎಂಪಿ
ಬಿಬಿಎಂಪಿ
Follow us
ವಿವೇಕ ಬಿರಾದಾರ
|

Updated on: Aug 06, 2023 | 2:42 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಹೊಸದಾಗಿ ಸಾಕುಪ್ರಾಣಿ ಪರವಾನಗಿ ಕರಡು ಅನ್ನು ಸಿದ್ದಪಡಿಸಲು ನಿರ್ಧರಿಸಿದೆ. ಈ ಮೂಲಕ 2021 ರಲ್ಲಿ ರೂಪಗೊಂಡಿದ್ದ ಹಳೆಯ ಕರಡು ರದ್ದುಗೊಳ್ಳಲಿದೆ. 2021ರ ಕರಡನ್ನು ಎರಡು ವರ್ಷಗಳ ಹಿಂದೆಯೇ ಅನುಮೋದನೆ ಮತ್ತು ಅಧಿಸೂಚನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಆದರೆ ಇದನ್ನು ಅನುಮೋದಿಸಿಲ್ಲ ಎಂದು ಬಿಬಿಎಂಪಿಯ ಪಶುಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕ ಕೆ.ಪಿ.ರವಿಕುಮಾರ್ ತಿಳಿಸಿದರು.

ಇನ್ನು ಕರಡಲ್ಲಿ ಉಲ್ಲೇಖಿಸಿರುವ ಕೆಲವು ಷರತ್ತುಗಳನ್ನು ಸರಳಗೊಳಿಸಬೇಕಾಗಿದೆ. ಹೀಗಾಗಿ ಹೊಸ ಕರಡು ರೂಪಿಸಲು ನಿರ್ಧರಿಸಿದ್ದೇವೆ. ನಾಯಿ ಸಾಕಲು ಪಡೆಯಬೇಕಾದ ಪರವಾನಿಗೆಯನ್ನು ಸರಳೀಕರಿಸಿ, ಶೀಘ್ರದಲ್ಲೇ ಅದನ್ನು ಸಿದ್ಧಪಡಿಸಿ ಅನುಮೋದನೆಗಾಗಿ ಸರ್ಕಾರಕ್ಕೆ ಕಳುಹಿಸುತ್ತೇವೆ ಎಂದರು.

ಸದ್ಯ ಅಸ್ತಿತ್ವದಲ್ಲಿರುವ ಕರಡಲ್ಲಿ ಮಾನ್ಯವಾಗಿಲ್ಲದ ಕೆಲವು ಅಂಶಗಳಿವೆ. ಬಿಬಿಎಂಪಿ ಸರ್ಕಾರದ ಸಮಯವನ್ನು ಹಾಳು ಮಾಡುತ್ತಿದೆ, ಕೂಡಲೇ ಹಿಂದಿನ ಕರಡನ್ನು ಹಿಂಪಡೆದು ಹೊಸ ಕರಡು ಸಿದ್ಧಪಡಿಸಬೇಕು ಎಂದು ಪ್ರಾಣಿ ಪ್ರಿಯ ಅರುಣ್ ಪ್ರಸಾದ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಮೇಲೆ ಡಿಕೆ ಶಿವಕುಮಾರ್​ ಮತ್ತಷ್ಟು ಹಿಡಿತ; 2019-2023ರ ನಡುವಿನ ಕಾಮಗಾರಿಗಳ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ

ಸರ್ಕಾರವು ಖಾಸಗಿ ಕ್ಲಬ್‌ಗಳ ನಿಯಮಗಳನ್ನು ಪರಿಗಣಿಸಬಾರು. ಶಾಸನಬದ್ಧ ಸಂಸ್ಥೆಗಳ ನಿಯಮಗಳನ್ನು ಪರಿಗಣಿಸಬೇಕು. ಸಾಕುಪ್ರಾಣಿಗಳ ವಿಷಯದಲ್ಲಿ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ (AWBI) ಶಾಸನಬದ್ಧ ಸಂಸ್ಥೆಯಾಗಿದೆ. ಇದು ನಿಬಂಧನೆಗಳನ್ನು ಘೋಷಿಸುವ ಅಧಿಕಾರವನ್ನು ಹೊಂದಿದೆ ಎಂದು ಹೇಳಿದರು.

ಪ್ರತಿ ಕುಟುಂಬಕ್ಕೆ ನಾಯಿಗಳ ಸಂಖ್ಯೆಯನ್ನು ನಿರ್ಬಂಧಿಸುವ ಯಾವುದೇ ಮಾರ್ಗಸೂಚಿಗಳನ್ನು AWBI ನೀಡಿಲ್ಲ. ಆದರೆ ಬಿಬಿಎಂಪಿಯ ಕರಡು ಪ್ರಕಾರ ಮನೆಗೆ ಮೂರು ನಾಯಿಗಳನ್ನು ಸಾಕಲು ಮಾತ್ರ ಅವಕಾಶ ನೀಡಲಾಗಿದೆ.

ನಾಯಿಗಳ ನಡವಳಿಕೆಯ ಆಧಾರದ ಮೇಲೆ ಯಾವುದೇ ಕಾನೂನು ವರ್ಗೀಕರಣವಿಲ್ಲದಿದ್ದರೂ, ಜರ್ಮನ್ ಶೆಫರ್ಡ್, ರಾಟ್‌ವೀಲರ್, ಡೋಬರ್‌ಮನ್ ಮತ್ತು ಹೌಂಡ್‌ ತಳಿಯ ನಾಯಿಗಳನ್ನು ಉಘ್ರ ನಾಯಿಗಳೆಂದು ಬಿಬಿಎಂಪಿ ಗುರುತಿಸಿದೆ. ಮತ್ತು ಅವುಗಳನ್ನು ಫ್ಲಾಟ್‌ಗಳು ಅಥವಾ ಬಹು ಮನೆಗಳನ್ನು ಹೊಂದಿರುವ ಬಿಲ್ಡಿಂಗ್​ಗಳಲ್ಲಿ ಸಾಕುವುದನ್ನು ನಿರ್ಬಂಧಿಸಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!