AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕುಪ್ರಾಣಿ ಪರವಾನಗಿ: ಹೊಸ ಕರಡು ರಚಿಸಿಲು ನಿರ್ಧರಿಸಿದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊಸದಾಗಿ ಸಾಕುಪ್ರಾಣಿ ಪರವಾನಗಿ ಕರಡು ಅನ್ನು ಸಿದ್ದಪಡಿಸಲು ನಿರ್ಧರಿಸಿದೆ.

ಸಾಕುಪ್ರಾಣಿ ಪರವಾನಗಿ: ಹೊಸ ಕರಡು ರಚಿಸಿಲು ನಿರ್ಧರಿಸಿದ ಬಿಬಿಎಂಪಿ
ಬಿಬಿಎಂಪಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Aug 06, 2023 | 2:42 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಹೊಸದಾಗಿ ಸಾಕುಪ್ರಾಣಿ ಪರವಾನಗಿ ಕರಡು ಅನ್ನು ಸಿದ್ದಪಡಿಸಲು ನಿರ್ಧರಿಸಿದೆ. ಈ ಮೂಲಕ 2021 ರಲ್ಲಿ ರೂಪಗೊಂಡಿದ್ದ ಹಳೆಯ ಕರಡು ರದ್ದುಗೊಳ್ಳಲಿದೆ. 2021ರ ಕರಡನ್ನು ಎರಡು ವರ್ಷಗಳ ಹಿಂದೆಯೇ ಅನುಮೋದನೆ ಮತ್ತು ಅಧಿಸೂಚನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಆದರೆ ಇದನ್ನು ಅನುಮೋದಿಸಿಲ್ಲ ಎಂದು ಬಿಬಿಎಂಪಿಯ ಪಶುಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕ ಕೆ.ಪಿ.ರವಿಕುಮಾರ್ ತಿಳಿಸಿದರು.

ಇನ್ನು ಕರಡಲ್ಲಿ ಉಲ್ಲೇಖಿಸಿರುವ ಕೆಲವು ಷರತ್ತುಗಳನ್ನು ಸರಳಗೊಳಿಸಬೇಕಾಗಿದೆ. ಹೀಗಾಗಿ ಹೊಸ ಕರಡು ರೂಪಿಸಲು ನಿರ್ಧರಿಸಿದ್ದೇವೆ. ನಾಯಿ ಸಾಕಲು ಪಡೆಯಬೇಕಾದ ಪರವಾನಿಗೆಯನ್ನು ಸರಳೀಕರಿಸಿ, ಶೀಘ್ರದಲ್ಲೇ ಅದನ್ನು ಸಿದ್ಧಪಡಿಸಿ ಅನುಮೋದನೆಗಾಗಿ ಸರ್ಕಾರಕ್ಕೆ ಕಳುಹಿಸುತ್ತೇವೆ ಎಂದರು.

ಸದ್ಯ ಅಸ್ತಿತ್ವದಲ್ಲಿರುವ ಕರಡಲ್ಲಿ ಮಾನ್ಯವಾಗಿಲ್ಲದ ಕೆಲವು ಅಂಶಗಳಿವೆ. ಬಿಬಿಎಂಪಿ ಸರ್ಕಾರದ ಸಮಯವನ್ನು ಹಾಳು ಮಾಡುತ್ತಿದೆ, ಕೂಡಲೇ ಹಿಂದಿನ ಕರಡನ್ನು ಹಿಂಪಡೆದು ಹೊಸ ಕರಡು ಸಿದ್ಧಪಡಿಸಬೇಕು ಎಂದು ಪ್ರಾಣಿ ಪ್ರಿಯ ಅರುಣ್ ಪ್ರಸಾದ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಮೇಲೆ ಡಿಕೆ ಶಿವಕುಮಾರ್​ ಮತ್ತಷ್ಟು ಹಿಡಿತ; 2019-2023ರ ನಡುವಿನ ಕಾಮಗಾರಿಗಳ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ

ಸರ್ಕಾರವು ಖಾಸಗಿ ಕ್ಲಬ್‌ಗಳ ನಿಯಮಗಳನ್ನು ಪರಿಗಣಿಸಬಾರು. ಶಾಸನಬದ್ಧ ಸಂಸ್ಥೆಗಳ ನಿಯಮಗಳನ್ನು ಪರಿಗಣಿಸಬೇಕು. ಸಾಕುಪ್ರಾಣಿಗಳ ವಿಷಯದಲ್ಲಿ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ (AWBI) ಶಾಸನಬದ್ಧ ಸಂಸ್ಥೆಯಾಗಿದೆ. ಇದು ನಿಬಂಧನೆಗಳನ್ನು ಘೋಷಿಸುವ ಅಧಿಕಾರವನ್ನು ಹೊಂದಿದೆ ಎಂದು ಹೇಳಿದರು.

ಪ್ರತಿ ಕುಟುಂಬಕ್ಕೆ ನಾಯಿಗಳ ಸಂಖ್ಯೆಯನ್ನು ನಿರ್ಬಂಧಿಸುವ ಯಾವುದೇ ಮಾರ್ಗಸೂಚಿಗಳನ್ನು AWBI ನೀಡಿಲ್ಲ. ಆದರೆ ಬಿಬಿಎಂಪಿಯ ಕರಡು ಪ್ರಕಾರ ಮನೆಗೆ ಮೂರು ನಾಯಿಗಳನ್ನು ಸಾಕಲು ಮಾತ್ರ ಅವಕಾಶ ನೀಡಲಾಗಿದೆ.

ನಾಯಿಗಳ ನಡವಳಿಕೆಯ ಆಧಾರದ ಮೇಲೆ ಯಾವುದೇ ಕಾನೂನು ವರ್ಗೀಕರಣವಿಲ್ಲದಿದ್ದರೂ, ಜರ್ಮನ್ ಶೆಫರ್ಡ್, ರಾಟ್‌ವೀಲರ್, ಡೋಬರ್‌ಮನ್ ಮತ್ತು ಹೌಂಡ್‌ ತಳಿಯ ನಾಯಿಗಳನ್ನು ಉಘ್ರ ನಾಯಿಗಳೆಂದು ಬಿಬಿಎಂಪಿ ಗುರುತಿಸಿದೆ. ಮತ್ತು ಅವುಗಳನ್ನು ಫ್ಲಾಟ್‌ಗಳು ಅಥವಾ ಬಹು ಮನೆಗಳನ್ನು ಹೊಂದಿರುವ ಬಿಲ್ಡಿಂಗ್​ಗಳಲ್ಲಿ ಸಾಕುವುದನ್ನು ನಿರ್ಬಂಧಿಸಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ