AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಇಟಿ ಪಾಸ್ ಮಾಡದ ಹೊರಗುತ್ತಿಗೆ ಶಿಕ್ಷಕರಿಗೆ ಗೇಟ್ ಪಾಸ್; ಬಿಬಿಎಂಪಿ ನಿರ್ಧಾರಕ್ಕೆ ಶಿಕ್ಷಕರು ಕಂಗಾಲು

ಪಾಠ ಮಾಡಲು ಬೇಕಾದ ಅರ್ಹತೆಯಿಲ್ಲದ 200ಕ್ಕೂ ಹೆಚ್ಚು ಹೊರ ಗುತ್ತಿಗೆ ಶಿಕ್ಷಕರಿಗೆ ಗೇಟ್ ಪಾಸ್ ನೀಡಲು ಮುಂದಾಗಿದೆ. ಬಿಬಿಎಂಪಿ ಸೂಚನೆ ನೀಡಿದರೂ ಕೂಡ ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಪಾಸ್ ಮಾಡದ ಹೊರ ಗುತ್ತಿಗೆ ಶಿಕ್ಷಕರಿಗೆ ಕೊಕ್ ನೀಡಲಿದೆ.

ಟಿಇಟಿ ಪಾಸ್ ಮಾಡದ ಹೊರಗುತ್ತಿಗೆ ಶಿಕ್ಷಕರಿಗೆ ಗೇಟ್ ಪಾಸ್; ಬಿಬಿಎಂಪಿ ನಿರ್ಧಾರಕ್ಕೆ ಶಿಕ್ಷಕರು ಕಂಗಾಲು
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:May 17, 2023 | 2:57 PM

ಬೆಂಗಳೂರು: ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕ್ಷೀಣಿಸುತ್ತಿರುವುದನ್ನು ಮನಗಂಡ ಪಾಲಿಕೆ ಈ ಬಗ್ಗೆ ಒಂದು ನಿರ್ಧಾರಕ್ಕೆ ಬಂದಿದೆ. ಪಾಠ ಮಾಡಲು ಬೇಕಾದ ಅರ್ಹತೆಯಿಲ್ಲದ 200ಕ್ಕೂ ಹೆಚ್ಚು ಹೊರ ಗುತ್ತಿಗೆ ಶಿಕ್ಷಕರಿಗೆ ಗೇಟ್ ಪಾಸ್ ನೀಡಲು ಮುಂದಾಗಿದೆ. ಬಿಬಿಎಂಪಿ ಸೂಚನೆ ನೀಡಿದರೂ ಕೂಡ ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಪಾಸ್ ಮಾಡದ ಹೊರ ಗುತ್ತಿಗೆ ಶಿಕ್ಷಕರಿಗೆ ಕೊಕ್ ನೀಡಲಿದೆ.

ಕಳೆದ ವರ್ಷವೇ ಅನರ್ಹ ಹೊರ ಗುತ್ತಿಗೆ ಶಿಕ್ಷಕರಿಗೆ ಗೇಟ್ ಪಾಸ್ ನೀಡಲು ಬಿಬಿಎಂಪಿ ಮುಂದಾಗಿತ್ತು. ಆದ್ರೆ ಹೊರ ಗುತ್ತಿಗೆ ಶಿಕ್ಷಕರು ಕಾಲಾವಕಾಶ ಕೇಳಿದ ಕಾರಣ ಒಂದು ವರ್ಷ ಮುಂದೂಡಲಾಗಿತ್ತು. ಸದ್ಯ ಬಿಬಿಎಂಪಿಯ ಶಾಲೆ ಹಾಗೂ ಪಿಯು ಕಾಲೇಜುಗಳು ಜೂನ್ ತಿಂಗಳಲ್ಲಿ ಪುನಾರಂಭ ಆಗಲಿವೆ. ಪಾಲಿಕೆಯ 163 ಶಾಲಾ ಕಾಲೇಜುಗಳಲ್ಲಿ 728 ಹೊರ ಗುತ್ತಿಗೆ ಶಿಕ್ಷಕರಿದ್ದಾರೆ. ಈ ಪೈಕಿ 200ಕ್ಕೂ ಹೆಚ್ಚು ಬೋಧಕರು ಅರ್ಹತೆ ಹೊಂದಿಲ್ಲ. ಹೀಗಾಗಿ ದಾಖಲಾತಿ ಪರಿಶೀಲನೆಗೆ ಬಿಬಿಎಂಪಿ ಮುಂದಾಗಿದ್ದು 15 ದಿನ ದಾಖಲೆ ಪರಿಶೀಲನೆ ನಡೆಸಿ, ಅರ್ಹತೆಯಿಲ್ಲದವರಿಗೆ ಗೇಟ್ ಪಾಸ್ ನೀಡಲು ನಿರ್ಧರಿಸಿದೆ. ನೇಮಕಾತಿ ಪರಿಶೀಲನೆ ವೇಳೆ ಟಿಇಟಿ ಸರ್ಟಿಫಿಕೇಟ್ ಪರಿಶೀಲನೆ ಮಾಡಲಾಗುತ್ತೆ. ಪ್ರೌಡ ಶಾಲೆ ಹಾಗೂ ಕಾಲೇಜಿಗೂ ಕೂಡ ಬೇಕಾದ ಅರ್ಹತೆಯಿಲ್ಲದಿದ್ದರು ಗೇಟ್ ಪಾಸ್ ಮಾಡಲಾಗುತ್ತೆ. ಸದ್ಯ ಬಿಬಿಎಂಪಿ ನಿರ್ಧಾರಕ್ಕೆ ಶಿಕ್ಷಕರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲಾ ಶಿಕ್ಷಕನಿಂದ 18 ವಿದ್ಯಾರ್ಥಿನಿಯರಿಗೆ ಕಿರುಕುಳ, ಪ್ರಾಂಶುಪಾಲರ ಸಪೋರ್ಟ್​, ಬಂಧನ

ಅಕ್ರಮವಾಗಿ ಬಿ ಖಾತ ಟೂ ಎ ಖಾತ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Elections 2023) ಹಿನ್ನೆಲೆ ಜಾರಿಯಾಗಿದ್ದ ನೀತಿ ಸಂಹಿತೆ(Code of Conduct) ಮುಗಿಯುತ್ತಿದ್ದಂತೆ ಅಧಿಕಾರಿಗಳಿಗೆ ಬಿಬಿಎಂಪಿ(BBMP) ಚಾಟಿ ಬೀಸಿದೆ. ಹೀಗಾಗಿ ಈಗ ಅಕ್ರಮವಾಗಿ ಎ ಖಾತ ಮಾಡಿ ಕೊಟ್ಟ ಅಧಿಕಾರಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ. ಮಾರ್ಚ್ 29ರಂದು ಜಾರಿಯಾದ ನೀತಿ ಸಂಹಿತೆ ಮೇ 16ರಂದು ಮುಗಿಯುತ್ತಿದ್ದಂತೆ ಬಿಬಿಎಂಪಿ ಅಧಿಕಾರಿಗಳು ತಮ್ಮ ರೆಗ್ಯುಲರ್ ಕೆಲಸಗಳಿಗೆ ಮರಳಿದ್ದಾರೆ. ಸದ್ಯ ಅಕ್ರಮವಾಗಿ ಎ ಖಾತಗಳ ವಿಚಾರದಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಲು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್(Tushar Girinath) ಮುಂದಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:48 pm, Wed, 17 May 23

ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ