AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ದುರ್ಘಟನೆ ಬಳಿಕ ಎಚ್ಚೆತ್ತುಕೊಳ್ಳದ ಬಿಬಿಎಂಪಿ; ಬೆಂಗಳೂರಿನಲ್ಲೂ ಬಲಿಗಾಗಿ ಕಾದು ಕುಂತಿವೆ ಬೃಹತ್ ಹೋರ್ಡಿಂಗ್ಸ್‌

ಇದೇ ಮೇ.13 ರಂದು ಮುಂಬೈ ನಗರದಲ್ಲಿ ಬೃಹತ್ ಜಾಹೀರಾತು ಹೋರ್ಡಿಂಗ್ ಕುಸಿತವಾಗಿ (Hoarding Collapse) 14 ಜನ ಸಾವನ್ನಪ್ಪಿದ್ದು, 74 ಜನರಿಗೆ ಗಾಯವಾಗಿತ್ತು. ಇತ್ತ ಬೆಂಗಳೂರಿನಲ್ಲೂ ಇಂತಹ ಅನಧಿಕೃತ ಹೋರ್ಡಿಂಗ್ಸ್​ಗಳು ಇದ್ದು, ಮುಂಬೈ ದುರ್ಘಟನೆ ಬಳಿಕವೂ ಈ ಕುರಿತು ಬಿಬಿಎಂಪಿ(BBMP) ಎಚ್ಚೆತ್ತುಕೊಂಡಿಲ್ಲ. ಈ ಕುರಿತು ಸಾಮಾಜಿಕ ಕಾರ್ಯಕರ್ತ ಅಮರೇಶ್ ಎಂಬುವವರು ಸಿಎಂ ಗೆ ದೂರು ಸಲ್ಲಿಸಿದ್ದಾರೆ.

ಮುಂಬೈ ದುರ್ಘಟನೆ ಬಳಿಕ ಎಚ್ಚೆತ್ತುಕೊಳ್ಳದ ಬಿಬಿಎಂಪಿ; ಬೆಂಗಳೂರಿನಲ್ಲೂ ಬಲಿಗಾಗಿ ಕಾದು ಕುಂತಿವೆ ಬೃಹತ್ ಹೋರ್ಡಿಂಗ್ಸ್‌
; ಬೆಂಗಳೂರಿನಲ್ಲೂ ಬಲಿಗಾಗಿ ಕಾದು ಕುಂತಿವೆ ಬೃಹತ್ ಹೋರ್ಡಿಂಗ್ಸ್‌; ಬಿಬಿಎಂಪಿ ಡೋಂಟ್​ಕೇರ್​
Shivaraj
| Updated By: ಕಿರಣ್ ಹನುಮಂತ್​ ಮಾದಾರ್|

Updated on: May 15, 2024 | 5:20 PM

Share

ಬೆಂಗಳೂರು, ಮೇ.15: ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ಸೋಮವಾರ(ಮೇ.13)ದಂದು ಬೃಹತ್ ಜಾಹೀರಾತು ಹೋರ್ಡಿಂಗ್ ಕುಸಿತವಾಗಿ (Hoarding Collapse) 14 ಜನ ಸಾವನ್ನಪ್ಪಿದ್ದು, 74 ಜನರಿಗೆ ಗಾಯವಾಗಿತ್ತು. ಇತ್ತ ಬೆಂಗಳೂರಿನಲ್ಲೂ ಅನಧಿಕೃತ ಫ್ಲೆಕ್ಸ್ ಹೋರ್ಡಿಂಗ್ಸ್‌ಗಳು ತಲೆಎತ್ತಿದ್ದು, ಮುಂಬೈ ದುರ್ಘಟನೆ ಬಳಿಕವೂ ಈ ಕುರಿತು ಬಿಬಿಎಂಪಿ(BBMP) ಎಚ್ಚೆತ್ತುಕೊಂಡಿಲ್ಲ. ಈಗಾಗಲೇ ನಗರದಲ್ಲಿ ಅನಧಿಕೃತ ಹೋರ್ಡಿಂಗ್ಸ್‌ಗಳ ಹಾವಳಿ ಹೆಚ್ಚಾಗಿದ್ದು, ಹೆಬ್ಬಾಳ ರಸ್ತೆ ಸೇರಿದಂತೆ ನಗರದಲ್ಲಿ ಬೃಹತ್ ಹೋರ್ಡಿಂಗ್ಸ್‌ಗಳು ಬಲಿಗಾಗಿ ಕಾದು ಕುಂತಿವೆ.

ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಕೆ ಆರೋಪ

ಇನ್ನು ಕೆಲವೆಡೆ ಒಂದಕ್ಕೆ ಅನುಮತಿ ಪಡೆದು ಬೇರೆ ಕಡೆಗಳಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಕೆ ಆರೋಪ ಕೂಡ ಕೇಳಿಬಂದಿದ್ದು, ಈ ಕುರಿತು ಸಾಮಾಜಿಕ ಕಾರ್ಯಕರ್ತ ಅಮರೇಶ್ ಸಿಎಂ ಗೆ ದೂರು ಸಲ್ಲಿಸಿದ್ದಾರೆ. ಪತ್ರದಲ್ಲಿ‘ ಮಳೆ, ಗಾಳಿಯಿಂದ ಈಗಾಗಲೇ ಹಲವೆಡೆ ಮರಗಳು ಬಿದ್ದಿದ್ದರಿಂದ ಜನರಿಗೆ ಆತಂಕ ಹೆಚ್ಚಾಗಿದೆ. ಹೆಬ್ಬಾಳ ರಸ್ತೆ ಸೇರಿದಂತೆ ಹಲವೆಡೆ ಇರೋ ಬೃಹತ್ ಫ್ಲೆಕ್ಸ್​ಗಳ ಗಾತ್ರಗಳನ್ನು ಕುಗ್ಗಿಸಬೇಕು. ಕೂಡಲೇ ಅನಧಿಕೃತವಾಗಿ ಅಳವಡಿಕೆ ಮಾಡಿರುವ ಹೋರ್ಡಿಂಗ್ಸ್‌ಗಳನ್ನ ತೆರವುಗೊಳಿಸುವಂತೆ ಅಮರೇಶ್‌ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಮುಂಬೈನಲ್ಲಿ ಹೋರ್ಡಿಂಗ್ ಕುಸಿತ; ಮೃತರ ಸಂಖ್ಯೆ 14ಕ್ಕೆ ಏರಿಕೆ, ಸಿಎಂ ಏಕನಾಥ್ ಶಿಂಧೆ ಪರಿಹಾರ ಘೋಷಣೆ

ಜೊತೆಗೆ ಬೃಹತ್ ಫ್ಲೆಕ್ಸ್​​ಗಳಿಂದ ಎನಾದರೂ ಅನಾಹುತಗಳಾದರೆ ಜಿಲ್ಲಾಧಿಕಾರಿ, ಪಾಲಿಕೆಯೇ ನೇರ ಹೊಣೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್‌ಗಳು ಹೈಕೋರ್ಟ್ ಸೂಚನೆ ಮೇರೆಗೆ ಬ್ಯಾನ್ ಆಗಿತ್ತು. ಅದ್ರೆ, ಕಳೆದ ಒಂದು ವರ್ಷದಿಂದ ಮತ್ತೆ ಹೋಲ್ಡಿಂಗ್​​ಗಳು ನಗರದ ಸುತ್ತ ತಲೆ ಎತ್ತಿವೆ.

ಅಕ್ರಮ ಬ್ಯಾನರ್​​ ​ಕಂಡರೆ ಬಿಬಿಎಂಪಿಯ ಈ ನಂಬರ್​ಗೆ ವಾಟ್ಸಪ್​ ಮಾಡಿ

ಅನಧಿಕೃತವಾಗಿ ನಗರದಲ್ಲಿ ಹೋರ್ಡಿಂಗ್ಸ್​, ಫ್ಲೆಕ್ಸ್​, ಬ್ಯಾನರ್​ ಹಾಕುವುದನ್ನು ಬಿಬಿಎಂಪಿ ನಿಷೇಧಿಸಿದೆ. ಆದರೂ ಕೂಡ ನಮ್ಮ ಕಣ್ಣು ತಪ್ಪಿಸಿ ಅಕ್ರಮವಾಗಿ ಹೋರ್ಡಿಂಗ್ಸ್​, ಫ್ಲೆಕ್ಸ್​, ಬ್ಯಾನರ್ ಹಾಕಿದರೇ, ಆ ಸ್ಥಳ ಮತ್ತು ಜಾಹಿರಾತು ಫೋಟೋ ತೆಗೆದು ನಮಗೆ ಕಳುಹಿಸಿ ಎಂದು ಬಿಬಿಎಂಪಿ ಕೆಳ ದಿನಗಳ ಹಿಂದೆ 94806 85700 ವಾಟ್ಸಪ್​ ಸಂಖ್ಯೆ ನೀಡಿತ್ತು. ಅನಧಿಕೃತವಾಗಿ ಬ್ಯಾನರ್‌ಗಳನ್ನು ಹಾಕಿ ಸಾರ್ವಜನಿಕರಿಗೆ ದಕ್ಕೆ ತರುವುದು ಬಿಬಿಎಂಪಿ ಕಾಯ್ದೆಯ ಉಲ್ಲಂಘನೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಿಯಾದರೂ ಇಂತಹ ಅನಧಿಕೃತ ಪೋಸ್ಟರ್ ಅಥವಾ ಬ್ಯಾನರ್‌ಗಳನ್ನು ಹಾಕಿದರೆ ಎಫ್‌ಐಆರ್‌ ದಾಖಲಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು