ಮುಂಬೈ ದುರ್ಘಟನೆ ಬಳಿಕ ಎಚ್ಚೆತ್ತುಕೊಳ್ಳದ ಬಿಬಿಎಂಪಿ; ಬೆಂಗಳೂರಿನಲ್ಲೂ ಬಲಿಗಾಗಿ ಕಾದು ಕುಂತಿವೆ ಬೃಹತ್ ಹೋರ್ಡಿಂಗ್ಸ್‌

ಇದೇ ಮೇ.13 ರಂದು ಮುಂಬೈ ನಗರದಲ್ಲಿ ಬೃಹತ್ ಜಾಹೀರಾತು ಹೋರ್ಡಿಂಗ್ ಕುಸಿತವಾಗಿ (Hoarding Collapse) 14 ಜನ ಸಾವನ್ನಪ್ಪಿದ್ದು, 74 ಜನರಿಗೆ ಗಾಯವಾಗಿತ್ತು. ಇತ್ತ ಬೆಂಗಳೂರಿನಲ್ಲೂ ಇಂತಹ ಅನಧಿಕೃತ ಹೋರ್ಡಿಂಗ್ಸ್​ಗಳು ಇದ್ದು, ಮುಂಬೈ ದುರ್ಘಟನೆ ಬಳಿಕವೂ ಈ ಕುರಿತು ಬಿಬಿಎಂಪಿ(BBMP) ಎಚ್ಚೆತ್ತುಕೊಂಡಿಲ್ಲ. ಈ ಕುರಿತು ಸಾಮಾಜಿಕ ಕಾರ್ಯಕರ್ತ ಅಮರೇಶ್ ಎಂಬುವವರು ಸಿಎಂ ಗೆ ದೂರು ಸಲ್ಲಿಸಿದ್ದಾರೆ.

ಮುಂಬೈ ದುರ್ಘಟನೆ ಬಳಿಕ ಎಚ್ಚೆತ್ತುಕೊಳ್ಳದ ಬಿಬಿಎಂಪಿ; ಬೆಂಗಳೂರಿನಲ್ಲೂ ಬಲಿಗಾಗಿ ಕಾದು ಕುಂತಿವೆ ಬೃಹತ್ ಹೋರ್ಡಿಂಗ್ಸ್‌
; ಬೆಂಗಳೂರಿನಲ್ಲೂ ಬಲಿಗಾಗಿ ಕಾದು ಕುಂತಿವೆ ಬೃಹತ್ ಹೋರ್ಡಿಂಗ್ಸ್‌; ಬಿಬಿಎಂಪಿ ಡೋಂಟ್​ಕೇರ್​
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: May 15, 2024 | 5:20 PM

ಬೆಂಗಳೂರು, ಮೇ.15: ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ಸೋಮವಾರ(ಮೇ.13)ದಂದು ಬೃಹತ್ ಜಾಹೀರಾತು ಹೋರ್ಡಿಂಗ್ ಕುಸಿತವಾಗಿ (Hoarding Collapse) 14 ಜನ ಸಾವನ್ನಪ್ಪಿದ್ದು, 74 ಜನರಿಗೆ ಗಾಯವಾಗಿತ್ತು. ಇತ್ತ ಬೆಂಗಳೂರಿನಲ್ಲೂ ಅನಧಿಕೃತ ಫ್ಲೆಕ್ಸ್ ಹೋರ್ಡಿಂಗ್ಸ್‌ಗಳು ತಲೆಎತ್ತಿದ್ದು, ಮುಂಬೈ ದುರ್ಘಟನೆ ಬಳಿಕವೂ ಈ ಕುರಿತು ಬಿಬಿಎಂಪಿ(BBMP) ಎಚ್ಚೆತ್ತುಕೊಂಡಿಲ್ಲ. ಈಗಾಗಲೇ ನಗರದಲ್ಲಿ ಅನಧಿಕೃತ ಹೋರ್ಡಿಂಗ್ಸ್‌ಗಳ ಹಾವಳಿ ಹೆಚ್ಚಾಗಿದ್ದು, ಹೆಬ್ಬಾಳ ರಸ್ತೆ ಸೇರಿದಂತೆ ನಗರದಲ್ಲಿ ಬೃಹತ್ ಹೋರ್ಡಿಂಗ್ಸ್‌ಗಳು ಬಲಿಗಾಗಿ ಕಾದು ಕುಂತಿವೆ.

ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಕೆ ಆರೋಪ

ಇನ್ನು ಕೆಲವೆಡೆ ಒಂದಕ್ಕೆ ಅನುಮತಿ ಪಡೆದು ಬೇರೆ ಕಡೆಗಳಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಕೆ ಆರೋಪ ಕೂಡ ಕೇಳಿಬಂದಿದ್ದು, ಈ ಕುರಿತು ಸಾಮಾಜಿಕ ಕಾರ್ಯಕರ್ತ ಅಮರೇಶ್ ಸಿಎಂ ಗೆ ದೂರು ಸಲ್ಲಿಸಿದ್ದಾರೆ. ಪತ್ರದಲ್ಲಿ‘ ಮಳೆ, ಗಾಳಿಯಿಂದ ಈಗಾಗಲೇ ಹಲವೆಡೆ ಮರಗಳು ಬಿದ್ದಿದ್ದರಿಂದ ಜನರಿಗೆ ಆತಂಕ ಹೆಚ್ಚಾಗಿದೆ. ಹೆಬ್ಬಾಳ ರಸ್ತೆ ಸೇರಿದಂತೆ ಹಲವೆಡೆ ಇರೋ ಬೃಹತ್ ಫ್ಲೆಕ್ಸ್​ಗಳ ಗಾತ್ರಗಳನ್ನು ಕುಗ್ಗಿಸಬೇಕು. ಕೂಡಲೇ ಅನಧಿಕೃತವಾಗಿ ಅಳವಡಿಕೆ ಮಾಡಿರುವ ಹೋರ್ಡಿಂಗ್ಸ್‌ಗಳನ್ನ ತೆರವುಗೊಳಿಸುವಂತೆ ಅಮರೇಶ್‌ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಮುಂಬೈನಲ್ಲಿ ಹೋರ್ಡಿಂಗ್ ಕುಸಿತ; ಮೃತರ ಸಂಖ್ಯೆ 14ಕ್ಕೆ ಏರಿಕೆ, ಸಿಎಂ ಏಕನಾಥ್ ಶಿಂಧೆ ಪರಿಹಾರ ಘೋಷಣೆ

ಜೊತೆಗೆ ಬೃಹತ್ ಫ್ಲೆಕ್ಸ್​​ಗಳಿಂದ ಎನಾದರೂ ಅನಾಹುತಗಳಾದರೆ ಜಿಲ್ಲಾಧಿಕಾರಿ, ಪಾಲಿಕೆಯೇ ನೇರ ಹೊಣೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್‌ಗಳು ಹೈಕೋರ್ಟ್ ಸೂಚನೆ ಮೇರೆಗೆ ಬ್ಯಾನ್ ಆಗಿತ್ತು. ಅದ್ರೆ, ಕಳೆದ ಒಂದು ವರ್ಷದಿಂದ ಮತ್ತೆ ಹೋಲ್ಡಿಂಗ್​​ಗಳು ನಗರದ ಸುತ್ತ ತಲೆ ಎತ್ತಿವೆ.

ಅಕ್ರಮ ಬ್ಯಾನರ್​​ ​ಕಂಡರೆ ಬಿಬಿಎಂಪಿಯ ಈ ನಂಬರ್​ಗೆ ವಾಟ್ಸಪ್​ ಮಾಡಿ

ಅನಧಿಕೃತವಾಗಿ ನಗರದಲ್ಲಿ ಹೋರ್ಡಿಂಗ್ಸ್​, ಫ್ಲೆಕ್ಸ್​, ಬ್ಯಾನರ್​ ಹಾಕುವುದನ್ನು ಬಿಬಿಎಂಪಿ ನಿಷೇಧಿಸಿದೆ. ಆದರೂ ಕೂಡ ನಮ್ಮ ಕಣ್ಣು ತಪ್ಪಿಸಿ ಅಕ್ರಮವಾಗಿ ಹೋರ್ಡಿಂಗ್ಸ್​, ಫ್ಲೆಕ್ಸ್​, ಬ್ಯಾನರ್ ಹಾಕಿದರೇ, ಆ ಸ್ಥಳ ಮತ್ತು ಜಾಹಿರಾತು ಫೋಟೋ ತೆಗೆದು ನಮಗೆ ಕಳುಹಿಸಿ ಎಂದು ಬಿಬಿಎಂಪಿ ಕೆಳ ದಿನಗಳ ಹಿಂದೆ 94806 85700 ವಾಟ್ಸಪ್​ ಸಂಖ್ಯೆ ನೀಡಿತ್ತು. ಅನಧಿಕೃತವಾಗಿ ಬ್ಯಾನರ್‌ಗಳನ್ನು ಹಾಕಿ ಸಾರ್ವಜನಿಕರಿಗೆ ದಕ್ಕೆ ತರುವುದು ಬಿಬಿಎಂಪಿ ಕಾಯ್ದೆಯ ಉಲ್ಲಂಘನೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಿಯಾದರೂ ಇಂತಹ ಅನಧಿಕೃತ ಪೋಸ್ಟರ್ ಅಥವಾ ಬ್ಯಾನರ್‌ಗಳನ್ನು ಹಾಕಿದರೆ ಎಫ್‌ಐಆರ್‌ ದಾಖಲಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು