AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Election: ಬಿಬಿಎಂಪಿ ವಾರ್ಡ್​ ಮರು ವಿಂಗಡಣೆ, ರಾಮಲಿಂಗಾ ರೆಡ್ಡಿ ನೇತೃತ್ವದ ಸಮಿತಿಯ ವರದಿಯಲ್ಲಿ ಏನಿದೆ? ಚುನಾವಣೆ ಯಾವಾಗ? ಇಲ್ಲಿದೆ ವಿವರ

ಬಿಬಿಎಂಪಿ ವಾರ್ಡ್​ಗಳ ಸಂಖ್ಯೆಯನ್ನು 250 ಕ್ಕೇರಿಸಲು ಕಾಂಗ್ರೆಸ್ ಸರ್ಕಾರ ಮಾಸ್ಟರ್ ಪ್ಲಾನ್ ರೂಪಿಸಿದೆ. ಈ ಸಂಬಂಧ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದ ಸಮಿತಿ ರಚನೆಯಾಗಿದ್ದು, ನಾಳೆ (ಜೂ.10) ಅಥವಾ ಸೋಮವಾರ ವಾರ್ಡ್ ಮರುವಿಂಗಡಣೆ ವರದಿ ಸಲ್ಲಿಕೆಯಾಗಲಿದೆ.

BBMP Election: ಬಿಬಿಎಂಪಿ ವಾರ್ಡ್​ ಮರು ವಿಂಗಡಣೆ, ರಾಮಲಿಂಗಾ ರೆಡ್ಡಿ ನೇತೃತ್ವದ ಸಮಿತಿಯ ವರದಿಯಲ್ಲಿ ಏನಿದೆ? ಚುನಾವಣೆ ಯಾವಾಗ? ಇಲ್ಲಿದೆ ವಿವರ
ಬಿಬಿಎಂಪಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 09, 2023 | 9:03 AM

Share

ಬೆಂಗಳೂರು: ಬಿಜೆಪಿ ಆಡಳಿತದಲ್ಲಿದ್ದಾಗ ಬೃಹತ್​​ ಬೆಂಗಳೂರು ಮಹಾನಗರ ಪಾಲಿಕೆಯ (BBMP) ವಾರ್ಡ್​​ಗಳನ್ನು (Ward) ಅನಕ್ಕೂಲಕ್ಕೆ ತಕ್ಕಂತೆ ವಿಗಂಡಿಸಿ, 198 ವಾರ್ಡ್​​​ಗಳನ್ನು 243 ಕ್ಕೆ ಏರಿಸಿತ್ತು. ಈಗ ಕಾಂಗ್ರೆಸ್ (Congress) ಅಧಿಕಾರಕ್ಕೆ ಬರುತ್ತಿದ್ದಂತೆ ಮರುವಿಂಗಡಣೆಗೆ ಯೋಜನೆ ರೂಪಿಸಿದೆ ಎನ್ನಲಾಗಿದೆ. ಬಿಬಿಎಂಪಿ ವಾರ್ಡ್​ಗಳ ಸಂಖ್ಯೆಯನ್ನು 250 ಕ್ಕೇರಿಸಲು ಕಾಂಗ್ರೆಸ್ ಸರ್ಕಾರ ಮಾಸ್ಟರ್ ಪ್ಲಾನ್ ರೂಪಿಸಿದೆ. ಈ ಸಂಬಂಧ ಸಚಿವ ರಾಮಲಿಂಗಾ ರೆಡ್ಡಿ (Ramlinga Reddy) ನೇತೃತ್ವದ ಸಮಿತಿ ರಚನೆಯಾಗಿದ್ದು, ನಾಳೆ (ಜೂ.10) ಅಥವಾ ಸೋಮವಾರ ವಾರ್ಡ್ ಮರುವಿಂಗಡಣೆ ವರದಿ ಸಲ್ಲಿಕೆಯಾಗಲಿದೆ.

ಈ ವರದಿಯನ್ನು ಸರ್ಕಾರ ಒಪ್ಪಿದರೇ ಮುಂದಿನ ಮೂರು ತಿಂಗಳಲ್ಲಿಯೇ ಪಾಲಿಕೆ ಚುನಾವಣೆ ನಡೆಯುವುದು ಪಕ್ಕಾ ಎನ್ನಲಾಗುತ್ತಿದೆ. ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದ ಪೂರ್ವ ಚುನಾವಣಾ ಸಮಿತಿ ಬಿಬಿಎಂಪಿ ವಾರ್ಡ್‌ ಮರು ವಿಂಗಡಣೆ ಕುರಿತು ಮಾಹಿತಿ ಸಂಗ್ರಹಿಸಿ ವರದಿ ಸಿದ್ಧಪಡಿಸಿದೆ. ಸಮಿತಿ ಬೆಂಗಳೂರಿನ ಸಚಿವರು, ಶಾಸಕರು, ಕಾಂಗ್ರೆಸ್ ಮಾಜಿ ಮೇಯರ್​​ ಹಾಗೂ ಸದಸ್ಯರಿಂದ ಅಭಿಪ್ರಾಯ ಸಂಗ್ರಹಿಸಿ ಸರ್ಕಾರ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ವರದಿ ಸಲ್ಲಿಸಲಾಗುತ್ತದೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಠಕ್ಕರ್ ನೀಡಲು ಕಾಂಗ್ರೆಸ್ ಹೊಸ ತಂತ್ರ; ಏನದು?

ವರದಿಯಲ್ಲಿ ಏನಿದೆ..?

ಬಿಬಿಎಂಪಿ ವಾರ್ಡ್‌ ಮರು ವಿಂಗಡಣೆಗೆ ಮತ್ತೆ ಕೈಹಾಕದಿರುವ ನಿರ್ಧಾರ ಸಾಧ್ಯತೆ ಇದ್ದು, 243 ವಾರ್ಡ್‌ಗಳಿಗೆ ಚುನಾವಣೆ ನಡೆಸಲು ಚಿಂತನೆ ನಡೆಸಲಾಗಿದೆ. ಅಲ್ಲದೇ 198 ವಾರ್ಡ್‌ಗಳಿಗೆ ಚುನಾವಣೆ ನಡೆಸಲು ಬಿಬಿಎಂಪಿ ಮಾಜಿ ಸದಸ್ಯರು ಮನವಿ ಮಾಡಿದ್ದಾರೆ. ಆದರೆ ಕಾಯ್ದೆ ತಿದ್ದುಪಡಿ ಮಾಡಿ 243 ವಾರ್ಡ್‌ಗಳ ಅಧಿಸೂಚನೆ ಹೊರಡಿಸುವುದು ಕಷ್ಟವಾಗಿದೆ. ಕಾನೂನಾತ್ಮಕ ಹೋರಾಟಕ್ಕೆ ಮುಂದಾದರೇ ಚುನಾವಣೆಗೆ ತುಂಬಾ ಸಮಯ ಹಿಡಯುತ್ತೆ ಹೀಗಾಗಿ 243 ವಾರ್ಡ್​​​ಗಳಿಗೆಯೇ ಚುನಾವಣೆ ನಡೆಸುವ ಸಾಧ್ಯತೆ ಇದೆ.

ವಾರ್ಡ್ ವಿಗಂಡನೆಯಲ್ಲಿನ ಸಮಸ್ಯೆಯನ್ನು ಮೀಸಲಾತಿಯಲ್ಲಿ ಸರಿಪಡಿಸಿಕೊಳ್ಳುವ ತಂತ್ರ ರೂಪಿಸಲಾಗಿದೆ. ಈ ವರ್ಷದ ಅಂತ್ಯಕ್ಕೆ ಚುನಾವಣೆ ಪ್ರಕ್ರಿಯೆ ಮುಗಿಸುವಂತೆ ಸಲಹೆ ನೀಡಲಾಗಿದೆ. ಮುಂದಿನ ಮೂರು ತಿಂಗಳದೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ಮನವಿ ಮಾಡಲಾಗಿದೆ. ಕಾಂಗ್ರೆಸ್‌ ಪರ ಅಲೆ ಇದೆ ಕೂಡಲೇ ಚುನಾವಣೆ ನಡಿಸಿದರೇ ಅಧಿಕಾರ ಪಡೆಯಬಹುದು ಅಂತ ಸದಸ್ಯರು ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್