AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Elections: ಬಿಬಿಎಂಪಿ ಚುನಾವಣೆ ಮುಂದೂಡಲು ಹೈಕೋರ್ಟ್​ಗೆ ಸರ್ಕಾರದ ಮನವಿ, ವಿಧಾನಸಭೆ ಚುನಾವಣೆಯೇ ಮೊದಲು ನಡೆಯುವ ಸಾಧ್ಯತೆ

ಚುನಾವಣೆ ಮುಂದೂಡಬೇಕೆಂಬ ಕರ್ನಾಟಕ ಸರ್ಕಾರದ ಅರ್ಜಿಗೆ ಚುನಾವಣಾ ಆಯೋಗವು ಆಕ್ಷೇಪ ವ್ಯಕ್ತಪಡಿಸಿತು.

BBMP Elections: ಬಿಬಿಎಂಪಿ ಚುನಾವಣೆ ಮುಂದೂಡಲು ಹೈಕೋರ್ಟ್​ಗೆ ಸರ್ಕಾರದ ಮನವಿ, ವಿಧಾನಸಭೆ ಚುನಾವಣೆಯೇ ಮೊದಲು ನಡೆಯುವ ಸಾಧ್ಯತೆ
ಬಿಬಿಎಂಪಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 01, 2022 | 7:23 AM

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ (BBMP Elections) 3 ತಿಂಗಳು ಕಾಲಾವಕಾಶ ಬೇಕು ಎಂದು ಕರ್ನಾಟಕ ಸರ್ಕಾರವು ಹೈಕೋರ್ಟ್​ಗೆ (Karnataka High Court) ವಿನಂತಿಸಿದೆ. ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿಯಿಂದ ಹಿಂದುಳಿದ ವರ್ಗಗಳ ಮೀಸಲಾತಿ ಹಾಗೂ ರಾಜಕೀಯ ಹಿಂದುಳಿದಿರುವಿಕೆ ಸಂಬಂಧ ಮಾಹಿತಿ ಕೇಳಲಾಗಿದೆ. ಮಾಹಿತಿ ನೀಡಲು ಭಕ್ತವತ್ಸಲ ಸಮಿತಿ ಕಾಲಾವಕಾಶ ಕೇಳಿರುವುದರಿಂದ ಬಿಬಿಎಂಪಿ ಚುನಾವಣೆಗೆ 3 ತಿಂಗಳು ಕಾಲಾವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಹಾಯಕ ಅಡ್ವೊಕೇಟ್​ ಜನರಲ್ (ಎಎಜಿ) ಧ್ಯಾನ್ ಚಿನ್ನಪ್ಪ ಮನವಿ ಮಾಡಿದರು.

ಸುಪ್ರೀಂಕೋರ್ಟ್​​​​ನಲ್ಲೂ ಚುನಾವಣೆಗೆ ನಿರ್ದೇಶನ ಕೋರಲಾಗಿದೆ. ಸುಪ್ರೀಂಕೋರ್ಟ್​​​ನಲ್ಲಿ ಇಂದು (ಡಿ 1) ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗದ ಪರ ವಕೀಲ ಕೆ.ಎನ್.ಫಣೀಂದ್ರ ಹೈಕೋರ್ಟ್​ ಗಮನಕ್ಕೆ ತಂದರು. ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್​ ವಿಚಾರಣೆಯನ್ನು ಡಿಸೆಂಬರ್​​ 6ಕ್ಕೆ ಮುಂದೂಡಿತು.

ಬಿಬಿಎಂಪಿ ಚುನಾವಣೆಗೆ ಆಗಸ್ಟ್ 3ರಂದು ಮೀಸಲಾತಿ ಪಟ್ಟಿಯನ್ನು ಹೊರಡಿಸಲಾಗಿತ್ತು. ಆದರೆ ಈ ಪಟ್ಟಿಯನ್ನು ಹೈಕೋರ್ಟ್​ ಸೆಪ್ಟೆಂಬರ್​ನಲ್ಲಿ ರದ್ದುಪಡಿಸಿ, ನವೆಂಬರ್ 30ರ ಒಳಗೆ ಹೊಸದಾಗಿ ಮೀಸಲಾತಿ ಪ್ರಕಟಿಸಬೇಕು ಹಾಗೂ ಡಿಸೆಂಬರ್ 31ರ ಒಳಗೆ ಚುನಾವಣೆ ನಡೆಸಬೇಕು ಎಂದು ಸೂಚಿಸಿತ್ತು. ಈ ಆದೇಶವನ್ನೂ ಸರ್ಕಾರವು ಪ್ರಶ್ನಿಸಿದ್ದು, ಮೇಲ್ಮನವಿ ಸಲ್ಲಿಸಿದೆ.

ಕರ್ನಾಟಕದ ವಿಧಾನಸಭೆ ಚುನಾವಣೆಯು ಮುಂದಿನ ವರ್ಷ, ಅಂದರೆ 2023ರ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದೆ. ವಿಧಾನಸಭೆ ಚುನಾವಣೆಯ ನಂತರವೇ ಬಿಬಿಎಂಪಿ ಚುನಾವಣೆ ನಡೆಯಬಹುದು. ಆಡಳಿತಾರೂಢ ಬಿಜೆಪಿಯ ಮುಂಚೂಣಿ ನಾಯಕರು ಇದೇ ಅಭಿಪ್ರಾಯ ಹೊಂದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಶೀಘ್ರ ಚುನಾವಣೆ ನಡೆಯಬೇಕು ಎಂಬ ಅಭಿಪ್ರಾಯವನ್ನು ಚುನಾವಣಾ ಆಯೋಗ ಹೊಂದಿದೆ. ಇದೀಗ ಸರ್ಕಾರವು ಭಕ್ತವತ್ಸವ ಆಯೋಗವನ್ನು ತನ್ನ ವಾದಕ್ಕೆ ಪೂರಕವಾಗಿ ಬಳಸಿಕೊಳ್ಳುತ್ತಿದ್ದು, ಅದನ್ನೇ ಮುಂದೊಡ್ಡಿ ಕಾಲಮಿತಿ ವಿಸ್ತರಿಸಲು ಮನವಿ ಮಾಡಿಕೊಂಡಿದೆ.

ವಾರ್ಡ್ ಪುನರ್​ವಿಂಗಡನೆ: ಸರ್ಕಾರಕ್ಕೆ ನೊಟೀಸ್​

ಬಿಬಿಎಂಪಿ ವಾರ್ಡ್​ಗಳ ಪುನರ್​ವಿಂಗಡನೆ ಬಗ್ಗೆಯೂ ಹಲವು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರವೂ ಇದೀಗ ಹೈಕೋರ್ಟ್​ ಮೆಟ್ಟಿಲೇರಿದೆ. ಒಂದೇ ವಾರ್ಡ್​ನ ಮತದಾರರನ್ನು ಎರಡು ಪ್ರತ್ಯೇಕ ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆಯೂ ಹೈಕೋರ್ಟ್​ ಕರ್ನಾಟಕ ಸರ್ಕಾರಕ್ಕೆ ನೊಟೀಸ್ ಜಾರಿಮಾಡಿದೆ. ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರ್ಲೆ ಅವರಿದ್ದ ವಿಭಾಗೀಯಪೀಠವು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್​ರೆಡ್ಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿತು. ಚುನಾವಣಾ ಆಯೋಗ, ಬಿಬಿಎಂಪಿ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಪೀಠವು ನೊಟೀಸ್ ಜಾರಿ ಮಾಡಿದೆ.

ಹೈಕೋರ್ಟ್​ನಲ್ಲಿ ಅರ್ಜಿದಾರರ ಪರ ವಾದಿಸಿದ ವಕೀಲ ರವಿವರ್ಮಕುಮಾರ್, ‘ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹುಳಿಮಾವು ವಾರ್ಡ್​ಗೆ (236) ಹೆಚ್ಚುವರಿಯಾಗಿ 6 (14+6=20) ವಾರ್ಡ್​ಗಳನ್ನು ಸೇರಿಸಲಾಗಿದೆ. ಇದರಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್​ಗಳೂ ಇವೆ. ಇದು ಕರ್ನಾಟಕ ಮುನಿಸಿಪಲ್ ಕಾರ್ಪೊರೇಷನ್ ಕಾಯ್ದೆಯ 7ನೇ ಸೆಕ್ಷನ್​ಗೆ ವ್ಯತಿರಿಕ್ತ ಕ್ರಮ. ಇದರಿಂದ ಮತದಾರರದಲ್ಲಿ ಗೊಂದಲ ಉಂಟಾಗಿದೆ. ಹೀಗಾಗಿ ಕ್ಷೇತ್ರ ಪುನರ್​ವಿಂಗಡನೆ ಅಧಿಸೂಚನೆಯನ್ನೇ ರದ್ದುಪಡಿಸಬೇಕು. ಮರುಪರಿಶೀಲನೆಗೆ ಸೂಚಿಸಬೇಕು’ ಎಂದು ಮನವಿ ಮಾಡಿದರು. ಈ ಮನವಿ ಆಧರಿಸಿ ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆಗೆ ಮತದಾರರ ಕರಡುಪಟ್ಟಿ ಬಿಡುಗಡೆ: ನಿಮ್ಮ ಹೆಸರು, ವಿವರ ಸರಿಯಿದೆಯಾ ಚೆಕ್​ ಮಾಡಿಕೊಳ್ಳಿ!

Published On - 7:20 am, Thu, 1 December 22

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!