AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಚುನಾವಣೆ: ಸರ್ಕಾರದ ವೈಫಲ್ಯಗಳ ಚಾರ್ಜ್​​ಶೀಟ್ ಸಿದ್ಧಪಡಿಸಲು ಕೆಪಿಸಿಸಿ ನಿರ್ಧಾರ

ಬಿಬಿಎಂಪಿ  ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದ ವೈಫಲ್ಯಗಳ ಚಾರ್ಜ್​​ಶೀಟ್ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್ ನಿರ್ಧರಿಸಿದೆ.

ಬಿಬಿಎಂಪಿ ಚುನಾವಣೆ: ಸರ್ಕಾರದ ವೈಫಲ್ಯಗಳ ಚಾರ್ಜ್​​ಶೀಟ್ ಸಿದ್ಧಪಡಿಸಲು ಕೆಪಿಸಿಸಿ ನಿರ್ಧಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Aug 28, 2022 | 6:21 PM

Share

ಬೆಂಗಳೂರು: ಬಿಬಿಎಂಪಿ  ಚುನಾವಣೆ (BBMP Election) ಹಿನ್ನೆಲೆಯಲ್ಲಿ ಸರ್ಕಾರದ ವೈಫಲ್ಯಗಳ ಚಾರ್ಜ್​​ಶೀಟ್ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್ (Congress) ನಿರ್ಧರಿಸಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಕೆಪಿಸಿಸಿ (KPCC) ಕಚೇರಿಯಲ್ಲಿ ಪ್ರಣಾಳಿಕೆ ಸಮಿತಿ ಸಭೆ ನಡೆಸಿದ್ದು, ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) , ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಭಾಗಿಯಾಗಿದ್ದರು.

ಸಭೆಯಲ್ಲಿ ಬೆಂಗಳೂರಿಗೆ ಸಂಬಂಧಿಸಿದಂತೆ ರಸ್ತೆಗುಂಡಿ, ಆರೋಗ್ಯ ಸಮಸ್ಯೆ, ಬಿಜೆಪಿ ಸರ್ಕಾರದ ವೈಫಲ್ಯಗಳ ಬಗ್ಗೆ ಚಾರ್ಜ್​​ಶೀಟ್ ಸಿದ್ಧಪಡಿಸಿ ಮನೆ ಮನೆಗೆ ತಲುಪಿಸಲು ನಿರ್ಧರಿಸಿದ್ದಾರೆ. ಚಾರ್ಜ್​​ಶೀಟ್ ಬಳಿಕ ಮಹಾಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ, ಬೆಂಗಳೂರಿಗೆ ನೀಡಬಹುದಾದ ಕೊಡುಗೆಗಳ ಬಗ್ಗೆ ಪ್ರತ್ಯೇಕ ಪ್ರಣಾಳಿಕೆ ತಯಾರಿಸಲು ನಿರ್ಧರಿಸಿದ್ದಾರೆ.

ಸಭೆ ಬಳಿಕ ರಣದೀಪ್ ಸಿಂಗ್ ಸುರ್ಜೇವಾಲ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಅವರ ಮನೆ ಭೇಟಿ ನೀಡಿದರು. ಭೇಟಿ ಬಳಿಕ ಮಾತನಾಡಿದ ಅವರು ಕೆ.ಹೆಚ್.ಮುನಿಯಪ್ಪನವರು ನನ್ನ ಹಿರಿಯ ಸಹೋದರ ಇದ್ದಂತೆ. ಕೆ.ಹೆಚ್.ಮುನಿಯಪ್ಪನವರ ಮನೆ ನೋಡಬೇಕೆಂದು ಆಸೆಪಟ್ಟಿದ್ದೆ. ಹಾಗಾಗಿ ಮುನಿಯಪ್ಪ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದ್ದೇನೆ ಎಂದರು.

ಕೆ.ಹೆಚ್.ಮುನಿಯಪ್ಪ ಟ್ರಬಲ್​ಗೆ ಟ್ರಬಲ್ ಕೊಡುವಂತಹ ನಾಯಕ. ಎಐಸಿಸಿ ಸೂಚನೆ ಮೇರೆಗೆ ಕೆ.ಹೆಚ್.ಮುನಿಯಪ್ಪ ಭೇಟಿಗೆ ಬಂದಿಲ್ಲ. ಮುನಿಯಪ್ಪನವರ ಕುಟುಂಬ ಸದಸ್ಯನಾಗಿ ಬಂದಿದ್ದೇನೆ ಅಷ್ಟೇ. ನನ್ನ ತಂದೆ ಕಾಲದಿಂದಲೂ ನನಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಭಾರತ್ ಜೋಡೋ ಯಾತ್ರೆ ಸಂಬಂಧ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದರು.

ಬಳಿಕ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿ ರಣದೀಪ್ ಸುರ್ಜೇವಾಲ ನಮ್ಮ ಕುಟುಂಬದ ಸದಸ್ಯರಾಗಿ ಬಂದಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸುರ್ಜೇವಾಲ ಇಲ್ಲಿಗೆ ಬಂದಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಸುರ್ಜೇವಾಲ ತಂದೆಯ ಕಾಲದಿಂದ ನನ್ನ, ಅವರ ನಡುವೆ ವಿಶ್ವಾವಿದೆ ಎಂದು ಹೇಳಿದ್ದಾರೆ.

ನನ್ನ ಎಲ್ಲಾ ವಿಚಾರಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್​ಗೆ ತಿಳಿಸಿದ್ದೇನೆ. ನಾನು ಇನ್ನೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ, ಮುಂದೆಯೂ ಇರುತ್ತೇನೆ. ಎಲ್ಲವೂ ಸಮಾಧಾನವಾಗಿ ನಡೆಯುತ್ತಿದೆ, ಬೇರೆ ಚರ್ಚೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:21 pm, Sun, 28 August 22

Follow Us
TV9 Web
TV9 Web

TV9 Kannada

Read More
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ