AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP: ಮಾರ್ಚ್​​ 1ರಿಂದ ಬಿಬಿಎಂಪಿ ನೌಕರರ ಪ್ರತಿಭಟನೆ: 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹ

ಬಿಬಿಎಂಪಿ ನೌಕರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಾರ್ಚ್ 1 ರಿಂದ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆ ಮಾಡಲಿದ್ದಾರೆ.

BBMP: ಮಾರ್ಚ್​​ 1ರಿಂದ ಬಿಬಿಎಂಪಿ ನೌಕರರ ಪ್ರತಿಭಟನೆ: 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹ
ಬಿಬಿಎಂಪಿ
ವಿವೇಕ ಬಿರಾದಾರ
|

Updated on:Feb 25, 2023 | 10:16 AM

Share

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸುಗಳು (7th Pay Commission) ಜಾರಿಯಾಗಬೇಕೆಂದು ರಾಜ್ಯ ಸರ್ಕಾರಿ ನೌಕರರು ಮಾರ್ಚ 1 ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಪ್ರತಿಭಟನೆ ಮಾಡಲು ಮುಂದಾಗಿದ್ದು, ಇದಕ್ಕೆ ಬೃಹತ್​ ಬೆಂಗಳೂರು ಮಹಾನಗರ ಪಾಲೀಕೆ (BBMP) ನೌಕರಸ್ಥರು ಕೂಡ ಕೈ ಜೋಡಿಸಿದ್ದಾರೆ. ಬಿಬಿಎಂಪಿ ನೌಕರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಾರ್ಚ್ 1 ರಿಂದ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆ ಮಾಡಲಿದ್ದಾರೆ.

ಬಿಬಿಎಂಪಿ ನೌಕರರ ಬೇಡಿಕೆಗಳು

1. ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೆ ಪಡೆಯಬೇಕು.

2. ಚುನಾವಣೆ ನೀತಿ ಸಂಹಿತೆಗಿಂತ ಮೊದಲು ಶೇ.40ರಷ್ಟು ಫಿಟ್‌ಮೆಂಟ್ ಸೌಲಭ್ಯವನ್ನು ಓದಗಿಸಬೇಕು.

3. ಅದು ದಿನಾಂಕ 01- 07-2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು.

4. ಎನ್.ಪಿ.ಎಸ್ ನೌಕರರನ್ನು ಓ.ಪಿ.ಎಸ್ ವ್ಯಾಪ್ತಿಗೆ ತರಬೇಕು.

5. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣೆ ಯೋಜನೆಯನ್ನು ಜಾರಿಗೆ ಬಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು.

 ಮಧ್ಯಂತರ ವರದಿ ಕೇಳಿದ ಸಿಎಂ ಬೊಮ್ಮಾಯಿ

ಗುರುವಾರ ನಡೆದ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  7 ನೇ ವೇತನ ಆಯೋಗದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ವೇತನ ಆಯೋಗದ ಮಧ್ಯಂತರ ವರದಿಯನ್ನು ಕೇಳಿದ್ದೇನೆ. ಈ ವರದಿ ಸಲ್ಲಿಕೆಯಾದ ಬಳಿಕ ಅದರ ಆಧಾರದ ಮೇಲೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಿದ್ದೇವೆ  ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:35 am, Sat, 25 February 23

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​