AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದ ಹೆಸರಲ್ಲಿ ಬಿಬಿಎಂಪಿ ದುಂದುವೆಚ್ಚ: ಬ್ಯಾರಿಕೇಡ್, ಲೈಟಿಂಗ್​​ಗೆ ಬರೋಬ್ಬರಿ 25 ಲಕ್ಷ ಬಿಲ್!

ಎಂಜಿ ರಸ್ತೆ, ಇಂದಿರಾನಗರದ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿಸೋದು, ಪೆಂಡಾಲ್ ಹಾಕೋದು, ಟೇಬಲ್, ಕುರ್ಚಿ ಹಾಕೋ ಜವಾಬ್ದಾರಿಯನ್ನ ಪಾಲಿಕೆಗೆ ನೀಡಿತ್ತು. ಜೊತೆಗೆ ಹೆಚ್ಚುವರಿಯಾಗಿ ಬ್ಯಾರಿಕೇಡ್, ಲೈಟ್ ಬೇಕು ಅಂತಾ ಸೂಚಿಸಲಾಗಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಪಾಲಿಕೆ ಬರೋಬ್ಬರಿ 25ಲಕ್ಷ ರೂಪಾಯಿ ಲೆಕ್ಕ ತೋರಿಸಿದೆ.

ಹೊಸ ವರ್ಷದ ಹೆಸರಲ್ಲಿ ಬಿಬಿಎಂಪಿ ದುಂದುವೆಚ್ಚ: ಬ್ಯಾರಿಕೇಡ್, ಲೈಟಿಂಗ್​​ಗೆ ಬರೋಬ್ಬರಿ 25 ಲಕ್ಷ ಬಿಲ್!
ಹೊಸ ವರ್ಷದ ಹೆಸರಲ್ಲಿ ಬಿಬಿಎಂಪಿ ದುಂದುವೆಚ್ಚ: ಬ್ಯಾರಿಕೇಡ್, ಲೈಟಿಂಗ್​​ಗೆ ಬರೋಬ್ಬರಿ 25 ಲಕ್ಷ ಬಿಲ್!
TV9 Web
| Edited By: |

Updated on: Jan 02, 2024 | 6:52 AM

Share

ಬೆಂಗಳೂರು, ಜನವರಿ 2: 2023 ಕಳೆದು ಹೊಸ ವರ್ಷ (New Year) ಆರಂಭವಾದದರೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಕೆಲ ಅಧಿಕಾರಿಗಳು ಮಾತ್ರ ಹಳೇ ಚಾಳಿ ಬಿಟ್ಟಂತೆ ಕಾಣಿಸುತ್ತಿಲ್ಲ. ಒಂದೆಡೆ ಡಿಸೆಂಬರ್ 31ರ ರಾತ್ರಿ ಭರ್ಜರಿಯಾಗಿ ನ್ಯೂ ಇಯರ್ ವೆಲ್ ಕಮ್ ಮಾಡೋ ಮೂಲಕ ಬೆಂಗಳೂರು (Bengaluru) ಗಮನ ಸೆಳೆದರೆ, ಅತ್ತ ನೂತನ ವರ್ಷಾಚಚರಣೆಯಲ್ಲೂ ಪಾಲಿಕೆ ಅಧಿಕಾರಿಗಳು ಬಿಲ್ ಗೋಲ್ ಮಾಲ್ ಮಾಡಿದ್ದಾರೆಯೇ ಎಂಬ ಪ್ರಶ್ನೆ ಮೂಡುವಂತಾಗಿದೆ.

ಡಿಸೆಂಬರ್ 31ರ ರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಿನ ಎಂಜಿ ರೋಡ್, ಬ್ರಿಗೇಡ್ ರೋಡ್, ಇಂದಿರಾನಗರದಲ್ಲಿ ನ್ಯೂ ಇಯರ್ ಆಚರಣೆ ಸಂಭ್ರಮದಿಂದ ನಡೆದಿದೆ. ಅದ್ರೆ ಈ ಆಚರಣೆಗೆ ಪಾಲಿಕೆ ಖರ್ಚು ಮಾಡಿರೋ ಹಣ ಕೇಳಿದ್ರೆ ಶಾಕ್ ಆಗಬೇಕು! ಬರೀ ಒಂದೇ ಒಂದು ರಾತ್ರಿಗೆ ಬ್ಯಾರಿಕೇಡ್, ಲೈಟಿಂಗ್ಸ್​​​ಗೆ ಪಾಲಿಕೆ ಬರೋಬ್ಬರಿ 25 ಲಕ್ಷ ರೂಪಾಯಿ ಹಣ ಖರ್ಚು ಮಾಡಿದ್ದು, ಪಾಲಿಕೆ ಅಧಿಕಾರಿಗಳು ಎಷ್ಟರಮಟ್ಟಿಗೆ ತೆರಿಗೆ ಹಣ ಪೋಲು ಮಾಡಿದ್ದಾರೆ ಅನ್ನೋದನ್ನು ಅನಾವರಣಮಾಡಿದೆ

ಹೊಸ ವರ್ಷಾಚರಣೆಗೆ ನಗರದಲ್ಲಿ ಪೊಲೀಸ್ ಇಲಾಖೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಲ್ಲ ರೀತಿಯ ಸಿದ್ಧತೆ ಮಾಡಿತ್ತು. ಇತ್ತ ಎಂಜಿ ರಸ್ತೆ, ಇಂದಿರಾನಗರದ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿಸೋದು, ಪೆಂಡಾಲ್ ಹಾಕೋದು, ಟೇಬಲ್, ಕುರ್ಚಿ ಹಾಕೋ ಜವಾಬ್ದಾರಿಯನ್ನ ಪಾಲಿಕೆಗೆ ನೀಡಿತ್ತು. ಜೊತೆಗೆ ಹೆಚ್ಚುವರಿಯಾಗಿ ಬ್ಯಾರಿಕೇಡ್, ಲೈಟ್ ಬೇಕು ಅಂತಾ ಸೂಚಿಸಲಾಗಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಪಾಲಿಕೆ ಬರೋಬ್ಬರಿ 25ಲಕ್ಷ ರೂಪಾಯಿ ಲೆಕ್ಕ ತೋರಿಸಿದೆ. ಕೋಳಿಗಿಂತ ಮಸಾಲೆ ರೇಟ್ ಜಾಸ್ತಿಯಾಯ್ತು ಅನ್ನೋ ಹಾಗೇ ಆಗಿದೆ. ಈ ಬಗ್ಗೆ ಬಿಬಿಎಂಪಿ ಕಮಿಷನರ್​​ರನ್ನ ಕೇಳಿದ್ರೆ, ಝೋನಲ್ ಕಮಿಷನರ್​​ಗೆ ಅವಕಾಶ ನೀಡಿದ್ವಿ, ಅಷ್ಟು ಖರ್ಚು ಆಗಿರಬಹುದು ಎಂದಿದ್ದಾರೆ.

ಇದನ್ನೂ ಓದಿ: ಮಾಲ್​ ಆಫ್​ ಏಷ್ಯಾಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ: ಪೊಲೀಸ್ ಕಮಿಷನರ್ ಬಿ ದಯಾನಂದ ಭೇಟಿ

ಒಟ್ಟಿನಲ್ಲಿ ಹೊಸ ವರ್ಷಾಚರಣೆಯಲ್ಲೂ ಪಾಲಿಕೆಯು ಜನರ ತೆರಿಗೆ ಹಣವನ್ನು ಪೋಲು ಮಾಡಿದೆಯಾ ಅನ್ನೋ ಅನುಮಾನ ಉಂಟಾಗಿದೆ. ಜತೆಗೆ, ಪಾಲಿಕೆಯ ದುದುವೆಚ್ಚಗಳಿಗೆ ಯಾವಾಗ ಬ್ರೇಕ್ ಬೀಳುತ್ತೆ ಅಂತಾ ಜನ ಪ್ರಶ್ನಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್