AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದ ಹೆಸರಲ್ಲಿ ಬಿಬಿಎಂಪಿ ದುಂದುವೆಚ್ಚ: ಬ್ಯಾರಿಕೇಡ್, ಲೈಟಿಂಗ್​​ಗೆ ಬರೋಬ್ಬರಿ 25 ಲಕ್ಷ ಬಿಲ್!

ಎಂಜಿ ರಸ್ತೆ, ಇಂದಿರಾನಗರದ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿಸೋದು, ಪೆಂಡಾಲ್ ಹಾಕೋದು, ಟೇಬಲ್, ಕುರ್ಚಿ ಹಾಕೋ ಜವಾಬ್ದಾರಿಯನ್ನ ಪಾಲಿಕೆಗೆ ನೀಡಿತ್ತು. ಜೊತೆಗೆ ಹೆಚ್ಚುವರಿಯಾಗಿ ಬ್ಯಾರಿಕೇಡ್, ಲೈಟ್ ಬೇಕು ಅಂತಾ ಸೂಚಿಸಲಾಗಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಪಾಲಿಕೆ ಬರೋಬ್ಬರಿ 25ಲಕ್ಷ ರೂಪಾಯಿ ಲೆಕ್ಕ ತೋರಿಸಿದೆ.

ಹೊಸ ವರ್ಷದ ಹೆಸರಲ್ಲಿ ಬಿಬಿಎಂಪಿ ದುಂದುವೆಚ್ಚ: ಬ್ಯಾರಿಕೇಡ್, ಲೈಟಿಂಗ್​​ಗೆ ಬರೋಬ್ಬರಿ 25 ಲಕ್ಷ ಬಿಲ್!
ಹೊಸ ವರ್ಷದ ಹೆಸರಲ್ಲಿ ಬಿಬಿಎಂಪಿ ದುಂದುವೆಚ್ಚ: ಬ್ಯಾರಿಕೇಡ್, ಲೈಟಿಂಗ್​​ಗೆ ಬರೋಬ್ಬರಿ 25 ಲಕ್ಷ ಬಿಲ್!
TV9 Web
| Edited By: |

Updated on: Jan 02, 2024 | 6:52 AM

Share

ಬೆಂಗಳೂರು, ಜನವರಿ 2: 2023 ಕಳೆದು ಹೊಸ ವರ್ಷ (New Year) ಆರಂಭವಾದದರೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಕೆಲ ಅಧಿಕಾರಿಗಳು ಮಾತ್ರ ಹಳೇ ಚಾಳಿ ಬಿಟ್ಟಂತೆ ಕಾಣಿಸುತ್ತಿಲ್ಲ. ಒಂದೆಡೆ ಡಿಸೆಂಬರ್ 31ರ ರಾತ್ರಿ ಭರ್ಜರಿಯಾಗಿ ನ್ಯೂ ಇಯರ್ ವೆಲ್ ಕಮ್ ಮಾಡೋ ಮೂಲಕ ಬೆಂಗಳೂರು (Bengaluru) ಗಮನ ಸೆಳೆದರೆ, ಅತ್ತ ನೂತನ ವರ್ಷಾಚಚರಣೆಯಲ್ಲೂ ಪಾಲಿಕೆ ಅಧಿಕಾರಿಗಳು ಬಿಲ್ ಗೋಲ್ ಮಾಲ್ ಮಾಡಿದ್ದಾರೆಯೇ ಎಂಬ ಪ್ರಶ್ನೆ ಮೂಡುವಂತಾಗಿದೆ.

ಡಿಸೆಂಬರ್ 31ರ ರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಿನ ಎಂಜಿ ರೋಡ್, ಬ್ರಿಗೇಡ್ ರೋಡ್, ಇಂದಿರಾನಗರದಲ್ಲಿ ನ್ಯೂ ಇಯರ್ ಆಚರಣೆ ಸಂಭ್ರಮದಿಂದ ನಡೆದಿದೆ. ಅದ್ರೆ ಈ ಆಚರಣೆಗೆ ಪಾಲಿಕೆ ಖರ್ಚು ಮಾಡಿರೋ ಹಣ ಕೇಳಿದ್ರೆ ಶಾಕ್ ಆಗಬೇಕು! ಬರೀ ಒಂದೇ ಒಂದು ರಾತ್ರಿಗೆ ಬ್ಯಾರಿಕೇಡ್, ಲೈಟಿಂಗ್ಸ್​​​ಗೆ ಪಾಲಿಕೆ ಬರೋಬ್ಬರಿ 25 ಲಕ್ಷ ರೂಪಾಯಿ ಹಣ ಖರ್ಚು ಮಾಡಿದ್ದು, ಪಾಲಿಕೆ ಅಧಿಕಾರಿಗಳು ಎಷ್ಟರಮಟ್ಟಿಗೆ ತೆರಿಗೆ ಹಣ ಪೋಲು ಮಾಡಿದ್ದಾರೆ ಅನ್ನೋದನ್ನು ಅನಾವರಣಮಾಡಿದೆ

ಹೊಸ ವರ್ಷಾಚರಣೆಗೆ ನಗರದಲ್ಲಿ ಪೊಲೀಸ್ ಇಲಾಖೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಲ್ಲ ರೀತಿಯ ಸಿದ್ಧತೆ ಮಾಡಿತ್ತು. ಇತ್ತ ಎಂಜಿ ರಸ್ತೆ, ಇಂದಿರಾನಗರದ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿಸೋದು, ಪೆಂಡಾಲ್ ಹಾಕೋದು, ಟೇಬಲ್, ಕುರ್ಚಿ ಹಾಕೋ ಜವಾಬ್ದಾರಿಯನ್ನ ಪಾಲಿಕೆಗೆ ನೀಡಿತ್ತು. ಜೊತೆಗೆ ಹೆಚ್ಚುವರಿಯಾಗಿ ಬ್ಯಾರಿಕೇಡ್, ಲೈಟ್ ಬೇಕು ಅಂತಾ ಸೂಚಿಸಲಾಗಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಪಾಲಿಕೆ ಬರೋಬ್ಬರಿ 25ಲಕ್ಷ ರೂಪಾಯಿ ಲೆಕ್ಕ ತೋರಿಸಿದೆ. ಕೋಳಿಗಿಂತ ಮಸಾಲೆ ರೇಟ್ ಜಾಸ್ತಿಯಾಯ್ತು ಅನ್ನೋ ಹಾಗೇ ಆಗಿದೆ. ಈ ಬಗ್ಗೆ ಬಿಬಿಎಂಪಿ ಕಮಿಷನರ್​​ರನ್ನ ಕೇಳಿದ್ರೆ, ಝೋನಲ್ ಕಮಿಷನರ್​​ಗೆ ಅವಕಾಶ ನೀಡಿದ್ವಿ, ಅಷ್ಟು ಖರ್ಚು ಆಗಿರಬಹುದು ಎಂದಿದ್ದಾರೆ.

ಇದನ್ನೂ ಓದಿ: ಮಾಲ್​ ಆಫ್​ ಏಷ್ಯಾಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ: ಪೊಲೀಸ್ ಕಮಿಷನರ್ ಬಿ ದಯಾನಂದ ಭೇಟಿ

ಒಟ್ಟಿನಲ್ಲಿ ಹೊಸ ವರ್ಷಾಚರಣೆಯಲ್ಲೂ ಪಾಲಿಕೆಯು ಜನರ ತೆರಿಗೆ ಹಣವನ್ನು ಪೋಲು ಮಾಡಿದೆಯಾ ಅನ್ನೋ ಅನುಮಾನ ಉಂಟಾಗಿದೆ. ಜತೆಗೆ, ಪಾಲಿಕೆಯ ದುದುವೆಚ್ಚಗಳಿಗೆ ಯಾವಾಗ ಬ್ರೇಕ್ ಬೀಳುತ್ತೆ ಅಂತಾ ಜನ ಪ್ರಶ್ನಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?