Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಕಸದ ಲಾರಿ-ಬೈಕ್​ ಅಪಘಾತ: ಚಾಲಕನ ಬಂಧನ

ಟೆಕ್ಕಿಗಳಿಬ್ಬರು ಊಟಕ್ಕೆಂದು ರವಿವಾರ ರಾತ್ರಿ 8:45ರ ಸುಮಾರಿಗೆ ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿ ಮೃತಪಟ್ಟರು. ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟೆಕ್ಕಿಗಳು ಮೃತಪಟ್ಟಿದ್ದಾರೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಯುತ್ತಿದೆ.

ಬಿಬಿಎಂಪಿ ಕಸದ ಲಾರಿ-ಬೈಕ್​ ಅಪಘಾತ: ಚಾಲಕನ ಬಂಧನ
ಬಿಬಿಎಂಪಿ ಲಾರಿ
Follow us
ಶಾಂತಮೂರ್ತಿ
| Updated By: ವಿವೇಕ ಬಿರಾದಾರ

Updated on: Jul 30, 2024 | 10:26 AM

ಬೆಂಗಳೂರು, ಜುಲೈ 30: ಲಾರಿ-ಬೈಕ್ ಅಪಘಾತದಲ್ಲಿ ಇಬ್ಬರು ಟೆಕ್ಕಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿಂತೆ ಬಿಬಿಎಂಪಿ ಕಸದ ಲಾರಿ (BBMP Garbage Lorry) ಚಾಲಕನನ್ನು ಹಲಸೂರು ಗೇಟ್ ಸಂಚಾರ ಪೊಲೀಸರು (Traffic Police) ಬಂಧಿಸಿದ್ದಾರೆ. ಶಿವಶಂಕರ್ (38) ಬಂಧಿತ ಲಾರಿ ಚಾಲಕ. ಅಪಘಾತದ ಬಳಿಕ ಚಾಲಕ ಶಿವಶಂಕರ್ ಪರಾರಿಯಾಗಿದ್ದನು. ಸದ್ಯ ಪೊಲೀಸರು ಚಾಲಕ ಶಿವಶಂಕರ್​ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಚಾಲಕ ಶಿವಶಂಕರ್ ರಕ್ತ ಮಾದರಿಯನ್ನು ಸಂಗ್ರಹಿಸಿ ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಕುಡಿದು ವಾಹನ ಚಾಲನೆ ಮಾಡಿರುವ ಬಗ್ಗೆ ಪರಿಶೀಲನೆ ನಡೆಯಲಿದೆ.

ರವಿವಾರ ರಾತ್ರಿ ಅಪಘಾತ ಸಂಭವಿಸಿ, ಟೆಕ್ಕಿಗಳಿಬ್ಬರು ಮೃತಪಟ್ಟಿದ್ದಾರೆ. ಇದು ದುರದೃಷ್ಟಕರ. ಮೃತರ ಕುಟುಂಬಕ್ಕೆ ಬಿಬಿಎಂಪಿ ನೆರವು ನೀಡುತ್ತೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್​ ಹೇಳಿದರು.

ಘಟನೆಗೆ ಯಾರು ಕಾರಣ ಎನ್ನುವುದು ಬಹಳ ಮುಖ್ಯವಾಗಿರುತ್ತದೆ. ಬೈಕ್​ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದಿದ್ದರೆ ನಾವು ಜವಾಬ್ದಾರಾಗುತ್ತೇವೆ. ಆದರೆ ಈ ಪ್ರಕರಣದಲ್ಲಿ ಲಾರಿಗೆ ಹಿಂದಿನಿಂದ ಬೈಕ್ ಗುದ್ದಿದೆ. ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದವರು ಕಸದ ಲಾರಿ ಹಿಂಭಾಗ ಸಿಲುಕಿದ್ದರು. ಪೊಲೀಸರು ತನಿಖೆ ಮಾಡುತ್ತಿದ್ದಾರೆ, ಸತ್ಯಾಂಶ ತಿಳಿಯುವವರೆಗೆ ಕಾಯೋಣ. ಕಸದ ಲಾರಿ ಚಾಲಕರಿಂದ ತಪ್ಪಾಗಿದ್ದರೆ ನಾವೇ ಜವಾಬ್ಬಾರಿ ಹೊರುತ್ತೇವೆ. ಬಿಬಿಎಂಪಿ ಕಸ ವಿಲೇವಾರಿ ಗುತ್ತಿಗೆದಾರನಿಂದಲೂ ಪರಿಹಾರ ಕೊಡಿಸ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಇದನ್ನೂ ಓದಿ: ಕುಡುಕರ ಅಡ್ಡೆಯಂತಾದ ಬಿಬಿಎಂಪಿ ಆಸ್ಪತ್ರೆ ಆವರಣ; ರಾತ್ರಿಯಾದ್ರೆ ಆಸ್ಪತ್ರೆ ಅಂಗಳವೇ ಬಾರು, ಸುತ್ತಮುತ್ತ ಕಸದ ದರ್ಬಾರು!

ಏನಿದು ಪ್ರಕರಣ

ರವಿವಾರ ರಾತ್ರಿ 8:45ರ ಸುಮಾರಿಗೆ ಬೆಂಗಳೂರಿನ ಕೆಆರ್​ ಸರ್ಕಲ್ ಬಳಿ ಕಸದ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಟಿಸಿಎಸ್ ಕಂಪನಿ ಉದ್ಯೋಗಿಗಳಾದ ಪ್ರಶಾಂತ್, ಶಿಲ್ಪಾ ಮೃತಪಟ್ಟಿದ್ದಾರೆ. ಟೆಕ್ಕಿ ಪ್ರಶಾಂತ್ ಬೆಂಗಳೂರಿನ ಬಾಣಸವಾಡಿ ನಿವಾಸಿಯಾಗಿದ್ದಾನೆ.

ಟೆಕ್ಕಿ ಶಿಲ್ಪಾ ಆಂಧ್ರಪ್ರದೇಶದ ಹಿಂದೂಪುರ ನಿವಾಸಿಯಾಗಿದ್ದಳು. ಟೆಕ್ಕಿ ಶಿಲ್ಪಾ ಬೆಂಗಳೂರಿನ ನಾಗವಾರದ ಪಿಜಿಯಲ್ಲಿ ನೆಲೆಸಿದ್ದಳು. ಪ್ರಶಾಂತ್, ಶಿಲ್ಪಾ ಬೈಕ್​ನಲ್ಲಿ ಊಟಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಹಲಸೂರು ಗೇಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ