AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಕಸದ ಲಾರಿ ಹರಿದು ಡೆಲಿವರಿ ಬಾಯ್ ಸಾವು ಪ್ರಕರಣ; ಲಾರಿ ಓಡಿಸಲು ಅರ್ಹತೆ ಇಲ್ಲದಿದ್ದರೂ ಡ್ರೈವಿಂಗ್, ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಜೀವ ಬಲಿ

ಲಾರಿ ಓಡಿಸಲು ಅರ್ಹತೆ ಇಲ್ಲದಿದ್ದರೂ ಡ್ರೈವಿಂಗ್ ಮಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ. ಚಾಲಕ ದಿನೇಶ್ ನಾಯ್ಕ್ ಕೇವಲ ಬೈಕ್, ಕಾರು ಮತ್ತು ಟ್ರಾಕ್ಟರ್ ಓಡಿಸಬಹುದು. ಎಲ್ಎಂವಿ & ಟ್ರ್ಯಾಕ್ಟರ್ ಚಾಲನೆ ಲೈಸೆನ್ಸ್ ಮಾತ್ರ ಹೊಂದಿದ್ದಾನೆ.

BBMP ಕಸದ ಲಾರಿ ಹರಿದು ಡೆಲಿವರಿ ಬಾಯ್ ಸಾವು ಪ್ರಕರಣ; ಲಾರಿ ಓಡಿಸಲು ಅರ್ಹತೆ ಇಲ್ಲದಿದ್ದರೂ ಡ್ರೈವಿಂಗ್, ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಜೀವ ಬಲಿ
BBMP ಕಸದ ಲಾರಿ ಹರಿದು ಡೆಲಿವರಿ ಬಾಯ್ ಸಾವು
TV9 Web
| Edited By: ಆಯೇಷಾ ಬಾನು|

Updated on:May 15, 2022 | 5:40 PM

Share

ಬೆಂಗಳೂರು: BBMP ಕಸದ ಲಾರಿ ಹರಿದು ಡೆಲಿವರಿ ಬಾಯ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಲಾರಿ ಚಾಲಕ ದಿನೇಶ್ ನಾಯ್ಕ್ ಪರವಾನಿಗೆಯನ್ನೇ ಹೊಂದಿಲ್ಲ. ಲಾರಿ ಓಡಿಸಲು ಅರ್ಹತೆ ಇಲ್ಲದಿದ್ದರೂ ಡ್ರೈವಿಂಗ್ ಮಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ. ಚಾಲಕ ದಿನೇಶ್ ನಾಯ್ಕ್ ಕೇವಲ ಬೈಕ್, ಕಾರು ಮತ್ತು ಟ್ರಾಕ್ಟರ್ ಓಡಿಸಬಹುದು. ಎಲ್ಎಂವಿ & ಟ್ರ್ಯಾಕ್ಟರ್ ಚಾಲನೆ ಲೈಸೆನ್ಸ್ ಮಾತ್ರ ಹೊಂದಿದ್ದಾನೆ. ಹೆವಿ ಮೋಟಾರ್ ವೆಹಿಕಲ್ ಲೈಸೆನ್ಸ್ ಇಲ್ಲ. ಆದರೂ BBMP ಕಸದ ಲಾರಿ ಓಡಿಸಿ ಒಂದು ಜೀವವನ್ನು ತೆಗೆದಿದ್ದಾನೆ. ಪರಿಶೀಲನೆ ವೇಳೆ ದಿನೇಶ್ ಲೈಸೆನ್ಸ್ ಹೊಂದಿರದ ಕುರಿತು ಪತ್ತೆ‌ಯಾಗಿದೆ.

ಘಟನೆ ಹಿನ್ನೆಲೆ ಶನಿವಾರ(ಮೇ 14) ಸಂಜೆ ಬಿಬಿಎಂಪಿ ಕಸದ ಲಾರಿ ಥಣಿಸಂದ್ರದ ರೇಲ್ವೇ ಮೇಲ್ಸೇತುವೆ ಬಳಿ 25 ವರ್ಷದ ಸ್ವಿಗ್ಗಿ ಡೆಲಿವರಿ ಬಾಯ್ ಒಬ್ಬನ ಮೇಲೆ ಹರಿದು ಯುವಕನನ್ನು ಕ್ಷಣಾರ್ಧದಲ್ಲಿ ಬಲಿ ಪಡೆದಿದೆ. ಯುವಕನನ್ನು ಯಾದಗಿರಿ ಜಿಲ್ಲೆ ಸುರಪುರದ ದೇವಣ್ಣ (Devanna) ಎಂದು ಗುರುತಿಸಲಾಗಿದೆ. ಲಾರಿಯ ಚಾಲಕ 40 ವರ್ಷ ವಯಸ್ಸಿನ ದಿನೇಶ್ ನಾಯ್ಕ್ ನನ್ನು ಬಂಧಿಸಿರುವ ಚಿಕ್ಕಜಾಲ ಟ್ರಾಫಿಕ್ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಲಾರಿ ಬಹಳ ವೇಗದಿಂದ ಚಲಿಸುತಿತ್ತು ಮತ್ತು ದೇವಣ್ಣ ನಾಗವಾರ ಸರ್ಕಲ್ ನಿಂದ ಹೆಗಡೆ ನಗರದ ಕಡೆ ಬೈಕಲ್ಲಿ ಹೋಗುತ್ತಿದ್ದರು. ದೇವಣ್ಣ ಮೇಲ್ಸೇತುವೆ ಹತ್ತಿರದ ರಸ್ತೆಯಿಂದ ಮುಖ್ಯರಸ್ತೆಗೆ ತಿರುಗುತ್ತಿದ್ದ ಸಮಯದಲ್ಲಿ ವೇಗವಾಗಿ ಬರುತ್ತಿದ್ದ ಕಸದ ಲಾರಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ದೇವಣ್ಣ ಡಿವೈಡರ್ ಮೇಲಿಂದ ರಸ್ತೆಯ ಆ ಬದಿಗೆ ಹೋಗಿ ಬಿದಿದ್ದಾರೆ. ಹೆಲ್ಮೆಟ್ ಧರಿಸಿದ್ದರೂ ಅವರು ತಲೆ ಒಡೆದುಹೋಗಿತ್ತು ಅಂತ ಪ್ರತ್ಯಕ್ಷದರ್ಶಿ ಹೇಳಿದ್ದಾರೆ.

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:40 pm, Sun, 15 May 22

Follow Us
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ