AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಕಸದ ಲಾರಿ ಹರಿದು ಡೆಲಿವರಿ ಬಾಯ್ ಸಾವು ಪ್ರಕರಣ; ಲಾರಿ ಓಡಿಸಲು ಅರ್ಹತೆ ಇಲ್ಲದಿದ್ದರೂ ಡ್ರೈವಿಂಗ್, ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಜೀವ ಬಲಿ

ಲಾರಿ ಓಡಿಸಲು ಅರ್ಹತೆ ಇಲ್ಲದಿದ್ದರೂ ಡ್ರೈವಿಂಗ್ ಮಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ. ಚಾಲಕ ದಿನೇಶ್ ನಾಯ್ಕ್ ಕೇವಲ ಬೈಕ್, ಕಾರು ಮತ್ತು ಟ್ರಾಕ್ಟರ್ ಓಡಿಸಬಹುದು. ಎಲ್ಎಂವಿ & ಟ್ರ್ಯಾಕ್ಟರ್ ಚಾಲನೆ ಲೈಸೆನ್ಸ್ ಮಾತ್ರ ಹೊಂದಿದ್ದಾನೆ.

BBMP ಕಸದ ಲಾರಿ ಹರಿದು ಡೆಲಿವರಿ ಬಾಯ್ ಸಾವು ಪ್ರಕರಣ; ಲಾರಿ ಓಡಿಸಲು ಅರ್ಹತೆ ಇಲ್ಲದಿದ್ದರೂ ಡ್ರೈವಿಂಗ್, ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಜೀವ ಬಲಿ
BBMP ಕಸದ ಲಾರಿ ಹರಿದು ಡೆಲಿವರಿ ಬಾಯ್ ಸಾವು
TV9 Web
| Edited By: ಆಯೇಷಾ ಬಾನು|

Updated on:May 15, 2022 | 5:40 PM

Share

ಬೆಂಗಳೂರು: BBMP ಕಸದ ಲಾರಿ ಹರಿದು ಡೆಲಿವರಿ ಬಾಯ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಲಾರಿ ಚಾಲಕ ದಿನೇಶ್ ನಾಯ್ಕ್ ಪರವಾನಿಗೆಯನ್ನೇ ಹೊಂದಿಲ್ಲ. ಲಾರಿ ಓಡಿಸಲು ಅರ್ಹತೆ ಇಲ್ಲದಿದ್ದರೂ ಡ್ರೈವಿಂಗ್ ಮಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ. ಚಾಲಕ ದಿನೇಶ್ ನಾಯ್ಕ್ ಕೇವಲ ಬೈಕ್, ಕಾರು ಮತ್ತು ಟ್ರಾಕ್ಟರ್ ಓಡಿಸಬಹುದು. ಎಲ್ಎಂವಿ & ಟ್ರ್ಯಾಕ್ಟರ್ ಚಾಲನೆ ಲೈಸೆನ್ಸ್ ಮಾತ್ರ ಹೊಂದಿದ್ದಾನೆ. ಹೆವಿ ಮೋಟಾರ್ ವೆಹಿಕಲ್ ಲೈಸೆನ್ಸ್ ಇಲ್ಲ. ಆದರೂ BBMP ಕಸದ ಲಾರಿ ಓಡಿಸಿ ಒಂದು ಜೀವವನ್ನು ತೆಗೆದಿದ್ದಾನೆ. ಪರಿಶೀಲನೆ ವೇಳೆ ದಿನೇಶ್ ಲೈಸೆನ್ಸ್ ಹೊಂದಿರದ ಕುರಿತು ಪತ್ತೆ‌ಯಾಗಿದೆ.

ಘಟನೆ ಹಿನ್ನೆಲೆ ಶನಿವಾರ(ಮೇ 14) ಸಂಜೆ ಬಿಬಿಎಂಪಿ ಕಸದ ಲಾರಿ ಥಣಿಸಂದ್ರದ ರೇಲ್ವೇ ಮೇಲ್ಸೇತುವೆ ಬಳಿ 25 ವರ್ಷದ ಸ್ವಿಗ್ಗಿ ಡೆಲಿವರಿ ಬಾಯ್ ಒಬ್ಬನ ಮೇಲೆ ಹರಿದು ಯುವಕನನ್ನು ಕ್ಷಣಾರ್ಧದಲ್ಲಿ ಬಲಿ ಪಡೆದಿದೆ. ಯುವಕನನ್ನು ಯಾದಗಿರಿ ಜಿಲ್ಲೆ ಸುರಪುರದ ದೇವಣ್ಣ (Devanna) ಎಂದು ಗುರುತಿಸಲಾಗಿದೆ. ಲಾರಿಯ ಚಾಲಕ 40 ವರ್ಷ ವಯಸ್ಸಿನ ದಿನೇಶ್ ನಾಯ್ಕ್ ನನ್ನು ಬಂಧಿಸಿರುವ ಚಿಕ್ಕಜಾಲ ಟ್ರಾಫಿಕ್ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಲಾರಿ ಬಹಳ ವೇಗದಿಂದ ಚಲಿಸುತಿತ್ತು ಮತ್ತು ದೇವಣ್ಣ ನಾಗವಾರ ಸರ್ಕಲ್ ನಿಂದ ಹೆಗಡೆ ನಗರದ ಕಡೆ ಬೈಕಲ್ಲಿ ಹೋಗುತ್ತಿದ್ದರು. ದೇವಣ್ಣ ಮೇಲ್ಸೇತುವೆ ಹತ್ತಿರದ ರಸ್ತೆಯಿಂದ ಮುಖ್ಯರಸ್ತೆಗೆ ತಿರುಗುತ್ತಿದ್ದ ಸಮಯದಲ್ಲಿ ವೇಗವಾಗಿ ಬರುತ್ತಿದ್ದ ಕಸದ ಲಾರಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ದೇವಣ್ಣ ಡಿವೈಡರ್ ಮೇಲಿಂದ ರಸ್ತೆಯ ಆ ಬದಿಗೆ ಹೋಗಿ ಬಿದಿದ್ದಾರೆ. ಹೆಲ್ಮೆಟ್ ಧರಿಸಿದ್ದರೂ ಅವರು ತಲೆ ಒಡೆದುಹೋಗಿತ್ತು ಅಂತ ಪ್ರತ್ಯಕ್ಷದರ್ಶಿ ಹೇಳಿದ್ದಾರೆ.

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:40 pm, Sun, 15 May 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು