AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್ ಬೆಂಗಳೂರು ಮೂಲಕ ಪಾಲಿಕೆ ವಿಭಜನೆಗೆ ಬಿಬಿಎಂಪಿ ಸಜ್ಜು: ಬಿಜೆಪಿ ತೀವ್ರ ವಿರೋಧ

ಗ್ರೇಟರ್ ಬೆಂಗಳೂರು ಯೋಜನೆ ಮೂಲಕ ಬೆಂಗಳೂರು ನಗರವನ್ನು ವಿಭಜಿಸಿ ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಸರ್ಕಾರ ಪ್ಲಾನ್ ಮಾಡುತ್ತಿದೆ. ಆದರೆ, ಇದಕ್ಕೆ ಅತ್ತ ವಿಪಕ್ಷ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಒಂದೆಡೆ, ಚುನಾವಣೆಗೆ ಸಿದ್ಧರಾಗಲು ಡಿಸಿಎಂ ಡಿಕೆ ಶಿವಕುಮಾರ್ ಕರೆ ನೀಡಿದ್ದರೆ ಮತ್ತೊಂದೆಡೆ, ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ, ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರು ಶಾಸಕರ ಸಭೆ ಹಮ್ಮಿಕೊಂಡಿದೆ.

ಗ್ರೇಟರ್ ಬೆಂಗಳೂರು ಮೂಲಕ ಪಾಲಿಕೆ ವಿಭಜನೆಗೆ ಬಿಬಿಎಂಪಿ ಸಜ್ಜು: ಬಿಜೆಪಿ ತೀವ್ರ ವಿರೋಧ
ಬಿಬಿಎಂಪಿ
Follow us
Anil Kalkere
| Updated By: Ganapathi Sharma

Updated on:Feb 22, 2025 | 1:18 PM

ಬೆಂಗಳೂರು, ಫೆಬ್ರವರಿ 22: ಕಳೆದ ಬಾರಿಯ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಿಂತ ಮುನ್ನವೇ ಬಿಬಿಎ‌ಂಪಿ ಚುನಾವಣೆ ನಡೆಯಬೇಕಿತ್ತು. ಆದರೆ ಪಾಲಿಕೆ ಚುನಾವಣೆ ವಿವಾದ ವಿಚಾರ ಕೋರ್ಟ್​ನಲ್ಲಿದೆ. ಸದ್ಯದ ಬೆಳವಣಿಗೆಗಳನ್ನ ಗಮನಿಸಿದರೆ, ಮುಂದಿನ ಎರಡು, ಮೂರು ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆ ನಿರೀಕ್ಷೆ ಇದೆ. ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಕೆಲಸ ಸೇರಿದಂತೆ ಹಲವು ವಿಚಾರಗಳಿಂದ ಬಿಬಿಎಂಪಿ ಚುನಾವಣೆಗೆ ಹಿನ್ನೆಡೆಯಾಗುತ್ತಿದೆ.

ಗ್ರೇಟರ್ ಬೆಂಗಳೂರು ಯೋಜನೆಯಡಿ ಬೆಂಗಳೂರು ನಗರವನ್ನು 5 ಭಾಗಗಳಾಗಿ ವಿಂಗಡಿಸಲು ಸರ್ಕಾರ ಮುಂದಾಗಿದೆ. ಬಿಬಿಎಂಪಿ ವಿಚಾರವಾಗಿ ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ ಸಮಿತಿ ಮಾಡಿ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಸದ್ಯ ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. ಮಹಿಳೆಯರಿಗೆ ಶೇ 50 ಮೀಸಲಾತಿ ನೀಡಲಾಗುವ ವಿಚಾರ ಪ್ರಸ್ತಾಪಿಸಿದ್ದಾರೆ. ನಾವು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ನ್ಯಾಯಾಲಯಕ್ಕೆ ನಾವು ಅಫಿಡವಿಟ್ ಸಲ್ಲಿಕೆ ಮಾಡಿದ್ದೇವೆ ಎಂದಿದ್ದಾರೆ.

ಈ ಮಧ್ಯೆ, ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯ ಸಾಧಕಬಾಧಕಗಳನ್ನು ಚರ್ಚಿಸಲು ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಶುಕ್ರವಾರ ಸಭೆ ನಡೆಸಲಾಗಿದೆ. ಸಭೆಯಲ್ಲಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ಡಾ.ಸಿ.ಎನ್ ಅಶ್ವಥ್ ನಾರಾಯಣ, ಶಾಸಕ‌ ಮುನಿರತ್ನ ಸೇರಿದಂತೆ ಮಾಜಿ ಪಾಲಿಕೆ ಸದಸ್ಯರು ಭಾಗಿಯಾಗಿದ್ದರು. ಈ‌ ಮಸೂದೆ ವಿರೋಧಿಸಿ ಹೋರಾಟ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಯಾವುದೇ ಕಾರಣಕ್ಕೂ ಬೆಂಗಳೂರು ವಿಭಜನೆ ಬೇಡ ಅಂತ ವಿಪಕ್ಷ ನಾಯಕರು ಆಗ್ರಹಿಸಿದ್ದಾರೆ.

ಹಲವು ಕಾರಣಗಳಿಂದ ವಿಪಕ್ಷ ಬಿಜೆಪಿ‌ ಗ್ರೇಟರ್ ಬೆಂಗಳೂರು ಯೋಜನೆಯನ್ನ ವಿರೋಧ ಮಾಡುತ್ತಿದೆ.

ಬಿಜೆಪಿ ವಿರೋಧಕ್ಕೆ ಕಾರಣವೇನು?

  • ಈಗಿರುವ ವ್ಯಾಪ್ತಿಗಿಂತ ಬೆಂಗಳೂರಿನ ಗಾತ್ರ ಮತ್ತಷ್ಟು ಹಿಗ್ಗಿದಾಗ ನಿರ್ವಹಣೆ ಕಷ್ಟ ಸಾಧ್ಯ.
  • ಅಧಿಕಾರದಲ್ಲಿರುವ ಕಾಂಗ್ರೆಸ್ ಎಲ್ಲ ಭಾಗದಲ್ಲೂ ಮೇಯರ್ ಗಾದಿ ಹಿಡಿಯಬಹುದೆಂಬ ಆತಂಕ.
  • ತ್ಯಾಜ್ಯ ವಿಲೇವಾರಿ, ನೀರು ಪೂರೈಕೆ, ವಿದ್ಯುತ್ ಸರಬರಾಜು ಸೇವೆಗಳು ಬಿಬಿಎಂಪಿ ವ್ಯಾಪ್ತಿಯಿಂದ ಹೊರಗಿವೆ.
  • ಜನರಿಗೂ ಮೂಲಭೂತ ಸೌಕರ್ಯ ಒದಗಿಸುವುದು ಕಷ್ಟ ಸಾಧ್ಯ.
  • ಕೆಂಪೇಗೌಡ ನಿರ್ಮಿಸಿದ ಮೂಲ ಬೆಂಗಳೂರಿನ ಇತಿಹಾಸಕ್ಕೆ ಧಕ್ಕೆ, ಅಪಮಾನ.
  • ಆಡಳಿತ ವ್ಯವಸ್ಥೆ ಹಳಿ ತಪ್ಪುವ ಸಾಧ್ಯತೆ.
  • ಅಭಿವೃದ್ಧಿ ಮತ್ತು ಆರ್ಥಿಕತೆ ಮೇಲೆ ಪ್ರಭಾವ.
  • ಗ್ರೇಟರ್​ ಬೆಂಗಳೂರು ಪ್ರಾಧಿಕಾರದಂತಹ ಪರಿಕಲ್ಪನೆಯು ದೇಶದ ಇತರ ಕಾಸ್ಮೋಪಾಲಿಟನ್ ನಗರಗಳಲ್ಲಿ ವಿಫಲವಾಗಿದೆ.

ಇದನ್ನೂ ಓದಿ: ಬಿಎಂಟಿಸಿಯ ಹೊಸ ಎಲೆಕ್ಟ್ರಿಕ್ ಬಸ್​ಗಳಿಗೆ ಶಾಕ್! ಸಂಚಾರವೇ ಸ್ಥಗಿತ: ಕಾರಣವೇನು ಗೊತ್ತಾ?

ಗ್ರೇಟರ್ ಬೆಂಗಳೂರು ಮೂಲಕ ಬೆಂಗಳೂರು ನಗರವನ್ನ ವಿಭಜಿಸುವುದರ ಜೊತೆಗೆ ಬೆಂಗಳೂರಿ‌ನ ಆಸುಪಾಸಿನ ವಲಯಗೂ ಬೆಂಗಳೂರು ವ್ಯಾಪ್ತಿಗೆ ಬರಲಿದೆ. ಸದ್ಯ ಕಾಂಗ್ರೆಸ್ ಅಧಿಕಾರದಲ್ಲಿರುವ ಕಾರಣ, ಎಲ್ಲ ವಲಯಗಳಲ್ಲೂ ಅವರೇ ಗೆಲುವು ಸಾಧಿಸಬಹುದೆಂಬ ಕಾರಣದಿಂದ ಬಿಜೆಪಿ ವಿರೋಧ ಮಾಡುತ್ತಿದೆ ಎಂಬ ಮಾತು ಹೆಚ್ಚಾಗಿ ಚರ್ಚೆ ಆಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Sat, 22 February 25

ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ