AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ರಸ್ತೆ ಬಗ್ಗೆ ಪ್ರಧಾನಿ ಕಚೇರಿಗೆ ತಪ್ಪು ಮಾಹಿತಿ ಕೊಟ್ಟ ಬಿಬಿಎಂಪಿ: ಗುತ್ತಿಗೆದಾರನ ರಕ್ಷಣೆಗೆ ಯತ್ನಿಸುತ್ತಿರುವ ಆರೋಪ

ಕಳಪೆ ರಸ್ತೆ ಕುರಿತಂತೆ ಪ್ರಧಾನಿ ಕಾರ್ಯಾಲಯಕ್ಕೆ ತಪ್ಪು ಮಾಹಿತಿ ನೀಡಲು ಬಿಬಿಎಂಪಿ ಮುಂದಾಗಿದ್ದು, ಗುತ್ತಿಗೆದಾರನಿಗೆ ದಂಡ ಹಾಕುವ ಪ್ರಸ್ತಾವ ಕೈಬಿಟ್ಟಿದೆ ಎಂದು ಮೂಲಗಳು ಹೇಳಿವೆ.

ಕಳಪೆ ರಸ್ತೆ ಬಗ್ಗೆ ಪ್ರಧಾನಿ ಕಚೇರಿಗೆ ತಪ್ಪು ಮಾಹಿತಿ ಕೊಟ್ಟ ಬಿಬಿಎಂಪಿ: ಗುತ್ತಿಗೆದಾರನ ರಕ್ಷಣೆಗೆ ಯತ್ನಿಸುತ್ತಿರುವ ಆರೋಪ
ಪ್ರಧಾನಿ ನರೇಂದ್ರ ಮೋದಿ ಬಂದಾಗ ತರಾತುರಿಯಲ್ಲಿ ನಿರ್ಮಿಸಿದ್ದ ರಸ್ತೆಗಳು ಕಿತ್ತುಹೋಗಿವೆ.
TV9 Web
| Edited By: |

Updated on:Jun 27, 2022 | 12:41 PM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಕರ್ನಾಟಕ ಭೇಟಿ ವೇಳೆ ಕಳಪೆ ರಸ್ತೆ ನಿರ್ಮಿಸಿದ್ದ ಗುತ್ತಿಗೆದಾರರನ್ನು ರಕ್ಷಿಸಿಕೊಳ್ಳಲು ಬಿಬಿಎಂಪಿ ಯತ್ನಿಸುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಕಳಪೆ ರಸ್ತೆ ಕುರಿತಂತೆ ಪ್ರಧಾನಿ ಕಾರ್ಯಾಲಯಕ್ಕೆ ತಪ್ಪು ಮಾಹಿತಿ ನೀಡಲು ಬಿಬಿಎಂಪಿ ಮುಂದಾಗಿದ್ದು, ಗುತ್ತಿಗೆದಾರನಿಗೆ ದಂಡ ಹಾಕುವ ಪ್ರಸ್ತಾವ ಕೈಬಿಟ್ಟಿದೆ ಎಂದು ಮೂಲಗಳು ಹೇಳಿವೆ. ರಸ್ತೆಯಲ್ಲಿ ಗುಂಡಿಗಳು ಕಾಣಿಸಿಕೊಳ್ಳಲು ಬಿಡಬ್ಲ್ಯೂಎಸ್​ಎಸ್​ಬಿಯ ಪೈಪ್​ಗಳು ಸೋರಿಕೆಯಾಗಿದ್ದು ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮರಿಯಪ್ಪನಪಾಳ್ಯದಲ್ಲಿ ಕಳಪೆ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರನಿಗೆ ದಂಡ ಹಾಕದಿರಲು ಸೂಚನೆ ನೀಡಲಾಗಿದೆ. ಗುತ್ತಿಗೆದಾರನಿಗೆ ದಂಡ ಹಾಕಿದರೆ ಕಳಪೆ ಕಾಮಗಾರಿ ಎಂದು ಒಪ್ಪಿಕೊಂಡಂತೆ ಆಗುತ್ತದೆ. ಹೀಗಾಗಿ ದಂಡ ಹಾಕಬೇಡಿ ಎಂದು ಸ್ಥಳೀಯ ಅಧಿಕಾರಿಗಳು ಉನ್ನತ ಅಧಿಕಾರಿಗಳು ಮೌಖಿಕ ಆದೇಶ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ. ಆದರೆ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ರಸ್ತೆ ಕಾಮಗಾರಿಯು ಉತ್ತಮ ಗುಣಮಟ್ಟದ್ದು ಎಂದೇ ಹೇಳಲಾಗಿದೆ.

ವಿವಾದದ ಕುರಿತು ಪ್ರತಿಕ್ರಿಯಿಸಿರುವ ಬಿಬಿಂಎಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ‘ಈ ಸಂಬಂಧ ಈಗಾಗಲೇ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ವರದಿ ಕಳಿಸಿದ್ದೇವೆ. ಯಾವ ರಸ್ತೆ ಹಾಳಾಗಿದೆ ಅಂತ ಟ್ವೀಟ್​ ಮಾಡಲಾಗಿತ್ತೋ ಆ ರಸ್ತೆ ಬಗ್ಗೆ ವರದಿ ಕಳಿಸಿದ್ದೇವೆ. ಈ ರಸ್ತೆಯಲ್ಲಿ ಪ್ರಧಾನಮಂತ್ರಿ ಓಡಾಡಿಲ್ಲ. 2021ರಲ್ಲಿ ನವೆಂಬರ್​​​​ನಲ್ಲಿ ಆ ರಸ್ತೆ ನಿರ್ಮಿಸಲಾಗಿತ್ತು. ನಂತರ ಅಲ್ಲಿ ಒಳಚರಂಡಿ ಮಾರ್ಗ (ಸೀವೇಜ್), ಹಳೇ ಕಾಲದ ವಾಟರ್​ ಪೈಪ್​​ ಪತ್ತೆಯಾಗಿತ್ತು. ಪ್ರಧಾನಿಗಳ ಭೇಟಿ ವೇಳೆ ಈ ರಸ್ತೆಯಲ್ಲಿ ಕಾಮಗಾರಿ ನಡೆಸಿಲ್ಲ. ಪ್ರಧಾನಿಗಳು ಓಡಾಡಿದ ಪಕ್ಕದ ರಸ್ತೆಯಲ್ಲಿ ನೀರು ಜಿನುಗುತ್ತದೆ ಎನ್ನುವ ಕಾರಣಕ್ಕೆ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು ಎಂದು ಹೇಳಿದರು.

ವರದಿ ನೀಡುವಂತೆ ಬಿಬಿಎಂಪಿಗೆ ಸೂಚನೆ

ಇದನ್ನೂ ಓದಿ
Image
ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ ಮಾಡಿದ್ದ ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
Image
ಕಳಪೆ ರಸ್ತೆ ಕಾಮಗಾರಿ ಹಿನ್ನೆಲೆ: ಮೂವರು ಬಿಬಿಎಂಪಿ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ
Image
ಮೋದಿ ಬರ್ತಾರೆಂದು 23 ಕೋಟಿ ರೂ ಖರ್ಚು ಮಾಡಿ ನಿರ್ಮಿಸಿದ್ದ ರಸ್ತೆ ಅಧೋಗತಿಗೆ! ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ ಪ್ರಧಾನಿ ಕಚೇರಿ
Image
ಕಿತ್ತು ಹೋಗುತ್ತಿದೆ ಪ್ರಧಾನಿ ಬಂದಾಗ ನಿರ್ಮಿಸಿದ್ದ ರಸ್ತೆ! ಬಿಬಿಎಂಪಿ ಕಳಪೆ ಕಾಮಗಾರಿಯ ಕರಾಳ ಮುಖ ಬಯಲು

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20ರಂದು ಬೆಂಗಳೂರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ 23 ಕೋಟಿ ರೂಪಾಯಿ ಖರ್ಚು ಮಾಡಿ ನಿರ್ಮಾಣ ಮಾಡಿದ ರಸ್ತೆಗಳು ಹಾಳಾಗಿದ್ದವು. ಕಳಪೆ ಕಾಮಗಾರಿಯು ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ, ಪ್ರಧಾನಿ ಕಾರ್ಯಾಲಯ ವರದಿ ಕೇಳಿತ್ತು. ಪ್ರಧಾನಿ ಕಚೇರಿ ಕೇಳಿದ್ದ ವರದಿ ನೀಡುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಕಚೇರಿ ಸೂಚನೆ ನೀಡಿತ್ತು.

ಬೆಂಗಳೂರಿನ ವಿವಿಯಿಂದ ಮರಿಯಪ್ಪನಪಾಳ್ಯದ ಕಡೆ ಹೋಗುವ ರಸ್ತೆ, ಅಂಬೇಡ್ಕರ್ ಎಕನಾಮಿಕ್ ಕಾಲೇಜಿನ ರಸ್ತೆಗಳಲ್ಲಿ ಕಾಮಗಾರಿ ನಿರ್ವಹಿಸಲಾಗಿತ್ತು. ಆದರೆ ಎರಡೂ ರಸ್ತೆಗಳು ಹಾಳಾಗಿದ್ದವು. ಈ ಕುರಿತು ಈ ಮೊದಲು ಪ್ರತಿಕ್ರಿಯಿಸಿದ್ದ ಬಿಬಿಎಂಪಿ ಮುಖ್ಯ ಆಯುಕ್ತರು, ಮಳೆ ಬಂದ ಕಾರಣ ಹೀಗಾಗಿದೆ, ಸರಿಪಡಿಸುತ್ತೇವೆ ಎಂದು ಹೇಳಿದ್ದರು.

Published On - 12:36 pm, Mon, 27 June 22

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್