AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಾ! ಕೊನೆಗೂ ಬೆಂಗಳೂರು ಕರಗ ಉತ್ಸವಕ್ಕೆ ಬಿಬಿಎಂಪಿ ಹಸಿರು ನಿಶಾನೆ, ತಗ್ಗಿದ ಕೊರೊನಾ ಅಬ್ಬರ

ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ(Bengaluru Karaga) ಈ ಬಾರಿ ಬಿಬಿಎಂಪಿ(BBMP) ಗ್ರೀನ್ ಸಿಗ್ನಲ್ ಕೊಟ್ಟಿದೆ. ಬೆಂಗಳೂರು ಕರಗ ಉತ್ಸವಕ್ಕೆ ಪಾಲಿಕೆ ಷರತ್ತು ಬದ್ಧ ಅನುಮತಿ ನೀಡಿದೆ. ಇದೆ ಮಾರ್ಚ್ 8 ರಂದು ದ್ರೌಪದಮ್ಮ ಕರಗ ಉತ್ಸವ ನಡೆಯಲಿದೆ.

ಅಬ್ಬಾ! ಕೊನೆಗೂ ಬೆಂಗಳೂರು ಕರಗ ಉತ್ಸವಕ್ಕೆ ಬಿಬಿಎಂಪಿ ಹಸಿರು ನಿಶಾನೆ, ತಗ್ಗಿದ ಕೊರೊನಾ ಅಬ್ಬರ
ಬೆಂಗಳೂರು ಕರಗ ಉತ್ಸವ (ಸಂಗ್ರಹ ಚಿತ್ರ)
TV9 Web
| Updated By: ಆಯೇಷಾ ಬಾನು|

Updated on: Feb 11, 2022 | 12:18 PM

Share

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ(Bengaluru Karaga) ಈ ಬಾರಿ ಬಿಬಿಎಂಪಿ(BBMP) ಗ್ರೀನ್ ಸಿಗ್ನಲ್ ಕೊಟ್ಟಿದೆ. ಮಹಾಮಾರಿ ಕೊರೊನಾ(Coronavirus)ದಿಂದಾಗಿ ಕಳೆದ ಎರಡು ವರ್ಷದಿಂದ ಬೆಂಗಳೂರು ಕರಗ ಉತ್ಸವಕ್ಕೆ ಬ್ರೇಕ್ ಬಿದ್ದಿತ್ತು. ಕೇವಲ ಧಾರ್ಮಿಕ ಆಚರಣೆಗಳಿಗೆ ಮಾತ್ರ ಅನುಮತಿ ಕೊಡಲಾಗಿತ್ತು. ಸದ್ಯ ಕೊರೊನಾ ಕಡಿಮೆಯಾಗಿ ಪರಿಸ್ಥಿತಿ ಸುಧಾರಿಸಿದ್ದು ಬೆಂಗಳೂರು ಕರಗ ಉತ್ಸವಕ್ಕೆ ಬಿಬಿಎಂಪಿ ಗ್ರೀನ್ ಸಿಗ್ನಲ್ ಕೊಟ್ಟಿದೆ. ಎರಡು ವರ್ಷಗಳ ಬಳಿಕ ಮತ್ತೆ ದ್ರೌಪದಮ್ಮ ದೇವಿಯ ಸಂಚಾರ ರಸ್ತೆಗಳಲ್ಲಿ ಸಾಗಲಿದೆ.

ಬೆಂಗಳೂರು ಕರಗ ಉತ್ಸವಕ್ಕೆ ಪಾಲಿಕೆ ಷರತ್ತು ಬದ್ಧ ಅನುಮತಿ ನೀಡಿದೆ. ಇದೆ ಮಾರ್ಚ್ 8 ರಂದು ದ್ರೌಪದಮ್ಮ ಕರಗ ಉತ್ಸವ ನಡೆಯಲಿದೆ. ಮಹಾಮಾರಿ ಕೊರೊನಾ ಕಡಿಮೆಯಾಗಿದೆ. ಈ ಬಾರಿಯಾದ್ರು ಉತ್ಸವಕ್ಕೆ ಅನುಮತಿ ನೀಡುವಂತೆ ಕರಗ ಉತ್ಸವ ಸಮಿತಿಯ ಅಧ್ಯಕ್ಷ ಪಿ, ಅರ್ ರಮೇಶ ಸರ್ಕಾರಕ್ಕೆ ಹಾಗೂ ಪಾಲಿಕೆಗೆ ಪತ್ರ ಬರೆದಿದ್ದರು. ಸದ್ಯ ಇವರ ಮನವಿಗೆ ಸ್ಪಂದಿಸಿದ ಪಾಲಿಕೆ ಕರಗ ಸಮಿತಿಗೆ ಈಗಾಗ್ಲೆ ಮೌಖಿಕವಾಗಿ ಒಪ್ಪಿಗೆ ನೀಡಿದೆ. ನಾಡಪ್ರಭು ಕೆಂಪೇಗೌಡರ ಕಾಲದಿಂದಲೂ ಸುಮಾರು 800 ವರ್ಷಗಳ ಇತಿಹಾಸವಿರೋ ಕರಗ ಉತ್ಸವ ಬೆಂಗಳೂರಿನಲ್ಲಿ ಆಚರಿಸುವ ಐತಿಹಾಸಿಕ ದೊಡ್ಡ ಉತ್ಸವವಾಗಿದೆ. ಎರಡು ವರ್ಷಗಳ ಬಳಿಕ ಬೆಂಗಳೂರು ಕರಗ ಉತ್ಸವಕ್ಕೆ ಅನುಮತಿ ಸಿಕ್ಕಿದ್ದು ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ವಿದೇಶದಿಂದಲು ಭಕ್ತರು ಉತ್ಸವಕ್ಕೆ ಬರುವ ಸಾಧ್ಯತೆ ಇದೆ. ಈ ಬಾರಿ ಕರಗ ಉತ್ಸವಕ್ಕೆ ಬಿಬಿಎಂಪಿಯಿಂದ ಒಂದೂವರೆ ಕೋಟಿ ಬಜೆಟ್ನಲ್ಲಿ ಅನುದಾನ ನೀಡಲಾಗಿದೆ. ಕರಗ ಜಾತ್ರೆಯಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಮಂದಿ ಭಾಗಿ ಆಗುವ ಸಾಧ್ಯತೆ ಇದೆ.

ಕರಗ ಉತ್ಸವಕ್ಕೆ ಸಿದ್ಧತೆ ಹೇಗಿದೆ? ಬಿಬಿಎಂಪಿ ಈಗಾಗ್ಲೆ ಮೌಖಿಕವಾಗಿ ಒಪ್ಪಿಗೆ ನೀಡಿದ್ದು ಸಿಲಿಕಾನ್ ಸಿಟಿಯ ತಿಗಳರ ಪೇಟೆಯಲ್ಲಿರೋ ಧರ್ಮರಾಯಸ್ವಾಮಿ ದ್ರೌಪದಮ್ಮ ದೇವಸ್ಥಾನದಲ್ಲಿ ಸಿದ್ಧತೆಗಳು ಶುರುವಾಗಿವೆ. ದೇವಸ್ಥಾನದ ಅಡಳಿತ ಮಂಡಳಿ ಉತ್ಸವಕ್ಕೆ ಸಿದ್ದತೆ ನಡೆಸುತ್ತಿದೆ. ದೇವಸ್ಥಾನದಲ್ಲಿ ಸ್ವಚ್ಚತೆ ಹಾಗೂ ಸುಣ್ಣ, ಬಣ್ಣ ಬಳಿಯಲಾಗುತ್ತಿದೆ. 7 ಬಾರಿ ಕರಗ ಹೊತ್ತ ಖ್ಯಾತಿ ಇರುವ ಜ್ನಾನೇಂದ್ರ ಈ ಬಾರಿಯೂ ಕರಗ ಹೊರಲಿದ್ದಾರೆ. ವಹ್ನೀ ಕುಲ ಕ್ಷತ್ರೀಯರ ಮನೆಗಳಲ್ಲಿ ಸಂತಸ ಮನೆ ಮಾಡಿದೆ.

ಇದನ್ನೂ ಓದಿ: ಇಂಜಿನಿಯರ್​ಗಳು ಜನರ ಜೀವನದ ಜೊತೆ ಆಟವಾಡುತ್ತಿದ್ದಾರೆ; ಬಿಬಿಎಂಪಿ ನಿರ್ಮಿಸಿದ ರಸ್ತೆಗಳಲ್ಲಿ ಗುಂಡಿ: ಹೈಕೋರ್ಟ್ ತರಾಟೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!