AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ವಿವಾದ ಹಿನ್ನೆಲೆ ಬಿಬಿಎಂಪಿ ಶಾಲೆಗಳು ಅಲರ್ಟ್; ಮಕ್ಕಳಿಗೆ ಸಮವಸ್ತ್ರ, ಪುಸ್ತಕ, ಶೂ ವಿತರಿಸಲು ಮುಂದಾದ ಪಾಲಿಕೆ

ಜಿಲ್ಲೆಗಳಲ್ಲಿ ಶುರುವಾಗಿರುವ ಹಿಜಾಬ್ ಮತ್ತು ಕೇಸರಿ ಶಾಲುಗಳ ಕಿರಿಕ್ಗೆ ಬಿಬಿಎಂಪಿ ಫುಲ್ ಅಲರ್ಟ್ ಆಗಿದೆ. ಪಾಲಿಕೆಯ ಶಾಲೆಯಲ್ಲಿ ಕಿರಿಕ್ ಆಗದಿರಲಿ ಅಂತಾ ಎಚ್ಚೆತ್ತುಗೊಂಡ ಪಾಲಿಕೆ ಶಾಲಾ ಕಾಲೇಜುಗಳಿಗೆ ಉಚಿತ ಯೂನಿಫಾರ್ಮ್, ಶೂ, ಸ್ವೇಟರ್ ಹಾಗೂ ಬುಕ್ಸ್ ನೀಡಲು ಮುಂದಾಗಿದೆ.

ಹಿಜಾಬ್ ವಿವಾದ ಹಿನ್ನೆಲೆ ಬಿಬಿಎಂಪಿ ಶಾಲೆಗಳು ಅಲರ್ಟ್; ಮಕ್ಕಳಿಗೆ ಸಮವಸ್ತ್ರ, ಪುಸ್ತಕ, ಶೂ ವಿತರಿಸಲು ಮುಂದಾದ ಪಾಲಿಕೆ
ಬಿಬಿಎಂಪಿ
TV9 Web
| Edited By: |

Updated on: Feb 07, 2022 | 9:48 AM

Share

ಬೆಂಗಳೂರು: ರಾಜ್ಯದಲ್ಲಿ ತಲೆ ಎತ್ತಿದ ಹಿಜಾಬ್ ವಿವಾದ ಹಿನ್ನೆಲೆ ಬಿಬಿಎಂಪಿ(BBMP) ಶಾಲೆಗಳು ಅಲರ್ಟ್ ಆಗಿವೆ. ಹಿಜಾಬ್(Hijab) ವಿವಾದ ಬಿಬಿಎಂಪಿ ಶಾಲೆಗಳಲ್ಲಿ ತಲೆ ಎತ್ತದಂತೆ ಮುಂಜಾಗ್ರತಾ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ. ಈ ಮೊದಲು ಸಮವಸ್ತ್ರ(uniform) ವಿತರಿಸಲು ವಿಳಂಬವಾಗುತ್ತಿತ್ತು. ಆದ್ರೆ ಈಗ ಮಕ್ಕಳಿಗೆ ಸಮವಸ್ತ್ರ, ಪುಸ್ತಕ, ಶೂ ವಿತರಿಸಲಾಗುತ್ತಿದೆ. ಈ ತಿಂಗಳಾಂತ್ಯಕ್ಕೆ ಎಲ್ಲಾ ಶಾಲಾ-ಕಾಲೇಜುಗಳಿಗೆ ವಿತರಣೆ ಮಾಡಲಾಗುತ್ತೆ.

ಜಿಲ್ಲೆಗಳಲ್ಲಿ ಶುರುವಾಗಿರುವ ಹಿಜಾಬ್ ಮತ್ತು ಕೇಸರಿ ಶಾಲುಗಳ ಕಿರಿಕ್ಗೆ ಬಿಬಿಎಂಪಿ ಫುಲ್ ಅಲರ್ಟ್ ಆಗಿದೆ. ಪಾಲಿಕೆಯ ಶಾಲೆಯಲ್ಲಿ ಕಿರಿಕ್ ಆಗದಿರಲಿ ಅಂತಾ ಎಚ್ಚೆತ್ತುಗೊಂಡ ಪಾಲಿಕೆ ಶಾಲಾ ಕಾಲೇಜುಗಳಿಗೆ ಉಚಿತ ಯೂನಿಫಾರ್ಮ್, ಶೂ, ಸ್ವೇಟರ್ ಹಾಗೂ ಬುಕ್ಸ್ ನೀಡಲು ಮುಂದಾಗಿದೆ. ಬಹುತೇಕ ಬಾರಿ ಸಮವಸ್ತ್ರ ನೀಡಲು ಪಾಲಿಕೆ ವಿಳಂಬ ಮಾಡ್ತಿತ್ತು. ಶೈಕ್ಷಣಿಕ ವರ್ಷ ಕೊನೆಯಲ್ಲಿಯೂ ಪಾಲಿಕೆ ವ್ಯಾಪ್ತಿಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಿಗುತ್ತಿರಲಿಲ್ಲ. ಆದ್ರೆ ಸರ್ಕಾರ ಸಮವಸ್ತ್ರ ಆದೇಶದ ಬೆನ್ನಲೆ ಎಚ್ಚರಗೊಂಡ ಬಿಬಿಎಂಪಿ ವಿದ್ಯಾರ್ಥಿಗಳ ಆಯ್ಕೆಯ ವಸ್ತ್ರಕ್ಕೆ ಅವಕಾಶ ನೀಡದೆ ಸಮವಸ್ತ್ರ ನೀಡಲು ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯ 1-12 ನೇ ತರಗತಿವರೆಗಿನ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ನೀಡಲಾಗುತ್ತಿದೆ. ಮುಂದಿನ ತಿಂಗಳ ಕೊನೆಯ ವೇಳೆಗೆ ಎಲ್ಲಾ ಶಾಲಾ ಕಾಲೇಜುಗಳಿಗೆ ಸಮವಸ್ತ್ರ ತಲುಪಿಸಲು ಪಾಲಿಕೆ ಗಮನ ಹರಿಸುತ್ತಿದೆ.

ಹಿಜಾಬ್-ಕೇಸರಿ ಶಾಲು ವಿವಾದ ಕೊನೆಗೊಳಿಸಲು ಏಕರೂಪದ ಸಮವಸ್ತ್ರ ಸಂಹಿತೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ ಹಿಜಾಬ್ ವಿವಾದಕ್ಕೆ ಕೊನೆಹಾಡುವ ಪ್ರಯತ್ನವಾಗಿ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಕುರಿತಂತೆ ಒಂದು ಆದೇಶವನ್ನು ಹೊರಡಿಸಿದೆ. ಸರ್ಕಾರದ ಆದೇಶ ಪ್ರಕಾರ, ರಾಜ್ಯದ ಎಲ್ಲ ಸರ್ಕಾರೀ ಶಾಲಾ ಕಾಲೇಜುಗಳಲ್ಲಿ ಸರ್ಕಾರ ನಿಗದಿಪಡಿಸುವ ಮತ್ತು ಖಾಸಗಿ ಶಾಲೆಗಳಲ್ಲಿ ಅವುಗಳ ಆಡಳಿತ ಮಂಡಳಿಗಳು (school management) ಅಂತಿಮಗೊಳಿಸುವ ಸಮವಸ್ತ್ರಗಳೇ ಅಂತಿಮ. ರಾಜ್ಯದ ಎಲ್ಲ ಸರ್ಕಾರಿ ಕಾಲೇಜುಗಳಲ್ಲಿ ಏಕರೂಪದ ಸಮವಸ್ತ್ರ ಸಂಹಿತೆಯನ್ನು (Uniform Dress Code) ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಪಿಯು ಕಾಲೇಜುಗಳಲ್ಲಿ ಅಲ್ಲಿನ ಆಡಳಿತ ಮಂಡಳಿ ಇಲ್ಲವೇ ಕಾಲೇಜು ಅಭಿವೃದ್ಧಿ ಸಮಿತಿ ನಿರ್ಧರಿಸಿರುವ ನಿಗದಿಪಡಿಸಿದ ಸಮವಸ್ತ್ರವೇ ಕಡ್ಡಾಯ ಎಂದು ಸರ್ಕಾರದ ಆದೇಶದಲ್ಲಿ ಹೇಳಲಾಗಿದೆ. ಕಾಲೇಜು ಸಮವಸ್ತ್ರ ನಿಗದಿಪಡಿಸದಿದ್ದಲ್ಲಿ ಸಮಪರ್ಕ ಉಡುಪು ಧರಿಸಿ ವಿದ್ಯಾರ್ಥಿ-ವಿದ್ಯಾರ್ಥನಿಯರು ತರಗತಿಗಳಿಗೆ ಹೋಗಬೇಕು. ಯಾವುದೇ ಸಮುದಾಯದಿಂದ ಸಮಾನತೆ, ಐಕ್ಯತೆ ಜೊತೆ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯಾಗುವುದು ಬೇಡ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಸಚಿವ ಶ್ರೀರಾಮುಲು ಹಿಜಾಬ್ ವಿವಾದ ಬಗ್ಗೆ ಕಾಮೆಂಟ್​ ಮಾಡುತ್ತಾ ಸಮಯ ವ್ಯರ್ಥ ಮಾಡದೆ, ವಿಮ್ಸ್​​ನಲ್ಲಿ ರೋಗಿಗಳೊಂದಿಗೆ ಮಾತಾಡಿದರು!

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ