AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ವಿವಾದ ಹಿನ್ನೆಲೆ ಬಿಬಿಎಂಪಿ ಶಾಲೆಗಳು ಅಲರ್ಟ್; ಮಕ್ಕಳಿಗೆ ಸಮವಸ್ತ್ರ, ಪುಸ್ತಕ, ಶೂ ವಿತರಿಸಲು ಮುಂದಾದ ಪಾಲಿಕೆ

ಜಿಲ್ಲೆಗಳಲ್ಲಿ ಶುರುವಾಗಿರುವ ಹಿಜಾಬ್ ಮತ್ತು ಕೇಸರಿ ಶಾಲುಗಳ ಕಿರಿಕ್ಗೆ ಬಿಬಿಎಂಪಿ ಫುಲ್ ಅಲರ್ಟ್ ಆಗಿದೆ. ಪಾಲಿಕೆಯ ಶಾಲೆಯಲ್ಲಿ ಕಿರಿಕ್ ಆಗದಿರಲಿ ಅಂತಾ ಎಚ್ಚೆತ್ತುಗೊಂಡ ಪಾಲಿಕೆ ಶಾಲಾ ಕಾಲೇಜುಗಳಿಗೆ ಉಚಿತ ಯೂನಿಫಾರ್ಮ್, ಶೂ, ಸ್ವೇಟರ್ ಹಾಗೂ ಬುಕ್ಸ್ ನೀಡಲು ಮುಂದಾಗಿದೆ.

ಹಿಜಾಬ್ ವಿವಾದ ಹಿನ್ನೆಲೆ ಬಿಬಿಎಂಪಿ ಶಾಲೆಗಳು ಅಲರ್ಟ್; ಮಕ್ಕಳಿಗೆ ಸಮವಸ್ತ್ರ, ಪುಸ್ತಕ, ಶೂ ವಿತರಿಸಲು ಮುಂದಾದ ಪಾಲಿಕೆ
ಬಿಬಿಎಂಪಿ
TV9 Web
| Updated By: ಆಯೇಷಾ ಬಾನು|

Updated on: Feb 07, 2022 | 9:48 AM

Share

ಬೆಂಗಳೂರು: ರಾಜ್ಯದಲ್ಲಿ ತಲೆ ಎತ್ತಿದ ಹಿಜಾಬ್ ವಿವಾದ ಹಿನ್ನೆಲೆ ಬಿಬಿಎಂಪಿ(BBMP) ಶಾಲೆಗಳು ಅಲರ್ಟ್ ಆಗಿವೆ. ಹಿಜಾಬ್(Hijab) ವಿವಾದ ಬಿಬಿಎಂಪಿ ಶಾಲೆಗಳಲ್ಲಿ ತಲೆ ಎತ್ತದಂತೆ ಮುಂಜಾಗ್ರತಾ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ. ಈ ಮೊದಲು ಸಮವಸ್ತ್ರ(uniform) ವಿತರಿಸಲು ವಿಳಂಬವಾಗುತ್ತಿತ್ತು. ಆದ್ರೆ ಈಗ ಮಕ್ಕಳಿಗೆ ಸಮವಸ್ತ್ರ, ಪುಸ್ತಕ, ಶೂ ವಿತರಿಸಲಾಗುತ್ತಿದೆ. ಈ ತಿಂಗಳಾಂತ್ಯಕ್ಕೆ ಎಲ್ಲಾ ಶಾಲಾ-ಕಾಲೇಜುಗಳಿಗೆ ವಿತರಣೆ ಮಾಡಲಾಗುತ್ತೆ.

ಜಿಲ್ಲೆಗಳಲ್ಲಿ ಶುರುವಾಗಿರುವ ಹಿಜಾಬ್ ಮತ್ತು ಕೇಸರಿ ಶಾಲುಗಳ ಕಿರಿಕ್ಗೆ ಬಿಬಿಎಂಪಿ ಫುಲ್ ಅಲರ್ಟ್ ಆಗಿದೆ. ಪಾಲಿಕೆಯ ಶಾಲೆಯಲ್ಲಿ ಕಿರಿಕ್ ಆಗದಿರಲಿ ಅಂತಾ ಎಚ್ಚೆತ್ತುಗೊಂಡ ಪಾಲಿಕೆ ಶಾಲಾ ಕಾಲೇಜುಗಳಿಗೆ ಉಚಿತ ಯೂನಿಫಾರ್ಮ್, ಶೂ, ಸ್ವೇಟರ್ ಹಾಗೂ ಬುಕ್ಸ್ ನೀಡಲು ಮುಂದಾಗಿದೆ. ಬಹುತೇಕ ಬಾರಿ ಸಮವಸ್ತ್ರ ನೀಡಲು ಪಾಲಿಕೆ ವಿಳಂಬ ಮಾಡ್ತಿತ್ತು. ಶೈಕ್ಷಣಿಕ ವರ್ಷ ಕೊನೆಯಲ್ಲಿಯೂ ಪಾಲಿಕೆ ವ್ಯಾಪ್ತಿಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಿಗುತ್ತಿರಲಿಲ್ಲ. ಆದ್ರೆ ಸರ್ಕಾರ ಸಮವಸ್ತ್ರ ಆದೇಶದ ಬೆನ್ನಲೆ ಎಚ್ಚರಗೊಂಡ ಬಿಬಿಎಂಪಿ ವಿದ್ಯಾರ್ಥಿಗಳ ಆಯ್ಕೆಯ ವಸ್ತ್ರಕ್ಕೆ ಅವಕಾಶ ನೀಡದೆ ಸಮವಸ್ತ್ರ ನೀಡಲು ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯ 1-12 ನೇ ತರಗತಿವರೆಗಿನ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ನೀಡಲಾಗುತ್ತಿದೆ. ಮುಂದಿನ ತಿಂಗಳ ಕೊನೆಯ ವೇಳೆಗೆ ಎಲ್ಲಾ ಶಾಲಾ ಕಾಲೇಜುಗಳಿಗೆ ಸಮವಸ್ತ್ರ ತಲುಪಿಸಲು ಪಾಲಿಕೆ ಗಮನ ಹರಿಸುತ್ತಿದೆ.

ಹಿಜಾಬ್-ಕೇಸರಿ ಶಾಲು ವಿವಾದ ಕೊನೆಗೊಳಿಸಲು ಏಕರೂಪದ ಸಮವಸ್ತ್ರ ಸಂಹಿತೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ ಹಿಜಾಬ್ ವಿವಾದಕ್ಕೆ ಕೊನೆಹಾಡುವ ಪ್ರಯತ್ನವಾಗಿ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಕುರಿತಂತೆ ಒಂದು ಆದೇಶವನ್ನು ಹೊರಡಿಸಿದೆ. ಸರ್ಕಾರದ ಆದೇಶ ಪ್ರಕಾರ, ರಾಜ್ಯದ ಎಲ್ಲ ಸರ್ಕಾರೀ ಶಾಲಾ ಕಾಲೇಜುಗಳಲ್ಲಿ ಸರ್ಕಾರ ನಿಗದಿಪಡಿಸುವ ಮತ್ತು ಖಾಸಗಿ ಶಾಲೆಗಳಲ್ಲಿ ಅವುಗಳ ಆಡಳಿತ ಮಂಡಳಿಗಳು (school management) ಅಂತಿಮಗೊಳಿಸುವ ಸಮವಸ್ತ್ರಗಳೇ ಅಂತಿಮ. ರಾಜ್ಯದ ಎಲ್ಲ ಸರ್ಕಾರಿ ಕಾಲೇಜುಗಳಲ್ಲಿ ಏಕರೂಪದ ಸಮವಸ್ತ್ರ ಸಂಹಿತೆಯನ್ನು (Uniform Dress Code) ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಪಿಯು ಕಾಲೇಜುಗಳಲ್ಲಿ ಅಲ್ಲಿನ ಆಡಳಿತ ಮಂಡಳಿ ಇಲ್ಲವೇ ಕಾಲೇಜು ಅಭಿವೃದ್ಧಿ ಸಮಿತಿ ನಿರ್ಧರಿಸಿರುವ ನಿಗದಿಪಡಿಸಿದ ಸಮವಸ್ತ್ರವೇ ಕಡ್ಡಾಯ ಎಂದು ಸರ್ಕಾರದ ಆದೇಶದಲ್ಲಿ ಹೇಳಲಾಗಿದೆ. ಕಾಲೇಜು ಸಮವಸ್ತ್ರ ನಿಗದಿಪಡಿಸದಿದ್ದಲ್ಲಿ ಸಮಪರ್ಕ ಉಡುಪು ಧರಿಸಿ ವಿದ್ಯಾರ್ಥಿ-ವಿದ್ಯಾರ್ಥನಿಯರು ತರಗತಿಗಳಿಗೆ ಹೋಗಬೇಕು. ಯಾವುದೇ ಸಮುದಾಯದಿಂದ ಸಮಾನತೆ, ಐಕ್ಯತೆ ಜೊತೆ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯಾಗುವುದು ಬೇಡ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಸಚಿವ ಶ್ರೀರಾಮುಲು ಹಿಜಾಬ್ ವಿವಾದ ಬಗ್ಗೆ ಕಾಮೆಂಟ್​ ಮಾಡುತ್ತಾ ಸಮಯ ವ್ಯರ್ಥ ಮಾಡದೆ, ವಿಮ್ಸ್​​ನಲ್ಲಿ ರೋಗಿಗಳೊಂದಿಗೆ ಮಾತಾಡಿದರು!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ