ಏ 30 ರೊಳಗೆ ಆಸ್ತಿ ತೆರಿಗೆ ಪಾವತಿಸುವವರಿಗೆ ಬಿಬಿಎಂಪಿ ಶುಭಸುದ್ದಿ: 5% ರಿಯಾಯಿತಿ ನೀಡಿದ ಬಿಬಿಎಂಪಿ

ಬಿಬಿಎಂಪಿ 2025-26ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆ ಏಪ್ರಿಲ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದೆ. ಬಿಬಿಎಂಪಿ 2025-26ರಲ್ಲಿ 6,000 ಕೋಟಿ ರೂ ತೆರಿಗೆ ಸಂಗ್ರಹಿಸುವ ಗುರಿ ಹೊಂದಿದೆ. ಬಿಬಿಎಂಪಿ 2024-25ನೇ ಸಾಲಿನಲ್ಲಿ ಬರೋಬ್ಬರಿ 4,930 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸಿತ್ತು.

ಏ 30 ರೊಳಗೆ ಆಸ್ತಿ ತೆರಿಗೆ ಪಾವತಿಸುವವರಿಗೆ ಬಿಬಿಎಂಪಿ ಶುಭಸುದ್ದಿ: 5% ರಿಯಾಯಿತಿ ನೀಡಿದ ಬಿಬಿಎಂಪಿ
ಸಂಗ್ರಹ ಚಿತ್ರ

Updated on: Apr 17, 2025 | 10:22 AM

ಬೆಂಗಳೂರು, ಏಪ್ರಿಲ್​ 17: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) 2024-25ನೇ ಸಾಲಿನಲ್ಲಿ ಬರೋಬ್ಬರಿ 4,930 ಕೋಟಿ ರೂ. ಆಸ್ತಿ ತೆರಿಗೆ (Property tax) ಸಂಗ್ರಹಿಸಿತ್ತು. ಇದು ಕಳೆದ ವರ್ಷಗಿಂತ ಸರಿಸುಮಾರು ಶೇ. 25 ರಷ್ಟು ಹೆಚ್ಚಳವಾಗಿದೆ. 2023-24ನೇ ಸಾಲಿನಲ್ಲಿ 3,918 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹವಾಗಿತ್ತು. ಇದೀಗ ಮುಂದಿನ ವರ್ಷದ ಅಂದರೆ 2025-26ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆ ಪಾವತಿಸಲು ಬಿಬಿಎಂಪಿ ಅವಕಾಶ ನೀಡಿದ್ದು, ಭರ್ಜರಿ ಆಫರ್ ಕೂಡ ನೀಡಿದೆ.

ಈ ಬಗ್ಗೆ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಬಿಎಂಪಿ, 2025-26ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆಯನ್ನು ಏಪ್ರಿಲ್​​ 30 ರೊಳಗೆ ಪಾವತಿಸಿ, ಶೇ. 5 ರಷ್ಟು ರಿಯಾಯಿತಿ ಪಡಿಯಿರಿ ಎಂದು ತಿಳಿಸಿದೆ. ಆ ಮೂಲಕ ಆಸ್ತಿ ತೆರಿಗೆದಾರರಿಗೆ ಬಿಬಿಎಂಪಿ ಗುಡ್​ ನ್ಯೂಸ್​ ನೀಡಿದೆ. ಬಿಬಿಎಂಪಿ 2025-26ನೇ ಆರ್ಥಿಕ ವರ್ಷದಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಆರು ಸಾವಿರ ಕೋಟಿ ರೂ ದಾಟುವ ಗುರಿ ಹೊಂದಿದೆ.

ಇದನ್ನೂ ಓದಿ
ವಿಜಯಪುರ-ಬೆಂಗಳೂರು ಪ್ರಯಾಣ 10 ಗಂಟೆಗೆ ತಗ್ಗಿಸಲು ಸಚಿವ ಎಂಬಿ ಪಾಟೀಲ್ ಸೂಚನೆ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಗುಡ್ ಫ್ರೈಡೇ, ವಾರಾಂತ್ಯ ರಜೆ ಹಿನ್ನೆಲೆ ಗಗನಕ್ಕೇರಿದ ಖಾಸಗಿ ಬಸ್ ಟಿಕೆಟ್ ದರ
ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ಮಧ್ಯೆ ಹೊಸ ರೈಲು: ಸಚಿವ ಸೋಮಣ್ಣ ಘೋಷಣೆ

ಬಿಬಿಎಂಪಿ ಟ್ವೀಟ್​

2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೋಬ್ಬರಿ 4,930 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿತ್ತು. ಇದು 2023-24ರಲ್ಲಿ ಸಂಗ್ರಹವಾಗಿದ್ದ 3,918 ಕೋಟಿಗಿಂತ ಸರಿಸುಮಾರು ಶೇ.25 ರಷ್ಟು ಹೆಚ್ಚಳವಾಗಿತ್ತು. ಆ ಮೂಲಕ ಬಿಬಿಎಂಪಿ 2024-25ನೇ ಆರ್ಥಿಕ ವರ್ಷದಲ್ಲಿ ಶೇ.94 ರಷ್ಟು ಆದಾಯ ಗುರಿ ಸಾಧಿಸಿತ್ತು.

ಇದನ್ನೂ ಓದಿ: BBMP Property tax: ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹ ಬರೋಬ್ಬರಿ ಸಾವಿರ ಕೋಟಿ ರೂ. ಹೆಚ್ಚಳ

ಬಿಬಿಎಂಪಿಯ ಎಂಟು ವಲಯಗಳ ಪೈಕಿ, ಯಲಹಂಕ 464.66 ಕೋಟಿ ರೂ. ಸಂಗ್ರಹಿಸುವ ಮೂಲಕ ನಿಗದಿತ ಗುರಿಗಿಂತ 19 ಕೋಟಿ ರೂ. ಹೆಚ್ಚು ತೆರಿಗೆ ಸಂಗ್ರಹಿಸಿತ್ತು. ಅದೇ ರೀತಿಯಾಗಿ ಮಹದೇವಪುರ 1,310.58 ಕೋಟಿ ರೂ. ಸಂಗ್ರಹಿಸಿತ್ತು. ಆ ಮೂಲಕ ಯಲಹಂಕ ಮತ್ತು ಮಹದೇವಪುರ ಹೆಚ್ಚು ತೆರಿಗೆ ಸಂಗ್ರಹಿಸಿದ ವಲಯಗಳಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:18 am, Thu, 17 April 25

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us