AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ದಿನದಲ್ಲಿ ಲಕ್ಷ ಲಕ್ಷ ರೂ. ಮಾಸ್ಕ್ ದಂಡ ಸಂಗ್ರಹ; ಬಿಬಿಎಂಪಿ ಈವರೆಗೆ ಸಂಗ್ರಹಿಸಿದ ಒಟ್ಟು ದಂಡದ ಮೊತ್ತ ಎಷ್ಟು ಕೋಟಿ ಗೊತ್ತಾ?

ಮಾಸ್ಕ್ ಧರಿಸದೇ ಓಡಾಡುವವರಿಗೆ ದಂಡ ವಿಧಿಸಿದ ಬಿಬಿಎಂಪಿ, 4 ದಿನದಲ್ಲಿ ಲಕ್ಷ ಲಕ್ಷ ರೂ. ಹಣ ಸಂಗ್ರಹಿಸಿದೆ. ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮಾಸ್ಕ್ ಕಡ್ಡಾಯ ಮಾಡಿದೆ.

4 ದಿನದಲ್ಲಿ ಲಕ್ಷ ಲಕ್ಷ ರೂ. ಮಾಸ್ಕ್ ದಂಡ ಸಂಗ್ರಹ; ಬಿಬಿಎಂಪಿ ಈವರೆಗೆ ಸಂಗ್ರಹಿಸಿದ ಒಟ್ಟು ದಂಡದ ಮೊತ್ತ ಎಷ್ಟು ಕೋಟಿ ಗೊತ್ತಾ?
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:Dec 05, 2021 | 3:35 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ಕೊರೊನಾ ರೂಪಾಂತರಿ ಒಮಿಕ್ರಾನ್ ಬಗ್ಗೆ ಭೀತಿ ಹೆಚ್ಚಾಗುತ್ತಿದೆ. ಈ ನಡುವೆ ಜನರು ಮಾತ್ರ ಯಾವುದೇ ಭಯವಿಲ್ಲದಂತೆ ವರ್ತಿಸುತ್ತಿದ್ದಾರೆ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಓಡಾಡುತ್ತಿದ್ದಾರೆ. ಸರ್ಕಾರ ಜಾರಿಗೊಳಿಸಿದ ನಿಯಮಗಳನ್ನು ಜನರು ಡೋಂಟ್ ಕೇರ್ ಅನ್ನುತ್ತಿದ್ದಾರೆ. ಆದರೆ ಬಿಬಿಎಂಪಿ ಮಾರ್ಷಲ್ಗಳು ಮಾಸ್ಕ್ ಧರಿಸದೆ ನಿರ್ಲಕ್ಷ್ಯ ಮೆರೆಯುವವರಿಗೆ ಬಿಸಿ ಮುಟ್ಟಿಸಿದ್ದಾರೆ.

ಮಾಸ್ಕ್ ಧರಿಸದೇ ಓಡಾಡುವವರಿಗೆ ದಂಡ ವಿಧಿಸಿದ ಬಿಬಿಎಂಪಿ, 4 ದಿನದಲ್ಲಿ ಲಕ್ಷ ಲಕ್ಷ ರೂ. ಹಣ ಸಂಗ್ರಹಿಸಿದೆ. ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮಾಸ್ಕ್ ಕಡ್ಡಾಯ ಮಾಡಿದೆ. ಇನ್ನು ಬಿಬಿಎಂಪಿ ಮಾಸ್ಕ್ ಧರಿಸದವರಿಗೆ ತಕ್ಕ ಪಾಠ ಕಲಿಸಿ, 250 ರೂ. ದಂಡ ಹಾಕುತ್ತಿದೆ. 4 ದಿನದಲ್ಲಿ ಸುಮಾರು 6 ಲಕ್ಷ 31 ಸಾವಿರದ 500 ರೂಪಾಯಿ ಹಣ ಸಂಗ್ರಹಿಸಿದೆ. ಅಂತರ ಪಾಲಿಸದವರಿಂದ 1,17,750 ರೂ. ಹಣ ದಂಡ ವಸೂಲಿ ಮಾಡಿದ್ದಾರೆ. ಒಟ್ಟು 7,49,250 ರೂಪಾಯಿ ವಸೂಲಿ ಮಾಡಿದೆ. ಈವರೆಗೆ ಬಿಬಿಎಂಪಿ ಅಧಿಕಾರಿಗಳು ಒಟ್ಟು 14,82,75,211 ರೂ. ವಸೂಲಿ ಮಾಡಿದ್ದಾರೆ.

ಇಂದು ಕೂಡಾ ಬೆಂಗಳೂರಿನ ಮಾರುಕಟ್ಟೆಗಳಿಗೆ ಮಾಸ್ಕ್ ಹಾಕದೆ ಬರುವ ಜನರಿಗೆ ಬಿಬಿಎಂಪಿ ದಂಡ ವಿಧಿಸುತ್ತಿದೆ. ಬಿಬಿಎಂಪಿ ಮಾರ್ಷಲ್​ಗಳು ಮಾಸ್ಕ್​ ಧರಿಸದವರಿಗೆ 250 ರೂ. ದಂಡ ಹಾಕುತ್ತಿದ್ದಾರೆ.

ಇದನ್ನೂ ಓದಿ

ಪಾದಯಾತ್ರೆ ಮೂಲಕ ಅಪ್ಪು ಸಮಾಧಿ ನೋಡುವ ಹಂಬಲ: ದಾವಣಗೆರೆ ತಲುಪಿದ ದಾಕ್ಷಾಯಣಿ ಪಾಟೀಲ್

ಕೇಜ್ರಿವಾಲ್ ನಿವಾಸದ ಹೊರಗೆ ದೆಹಲಿಯ ಅತಿಥಿ ಶಿಕ್ಷಕರ ಪ್ರತಿಭಟನೆಯಲ್ಲಿ ನವಜೋತ್ ಸಿಂಗ್ ಸಿಧು ಭಾಗಿ

Published On - 3:34 pm, Sun, 5 December 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ