ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ! ಒಂದೇ ಮನೆಯಲ್ಲಿ ಮೂರು ಸೋಂಕಿತರು ಪತ್ತೆಯಾದರೆ ಮನೆ ಸೀಲ್ ಡೌನ್; ಬಿಬಿಎಂಪಿ ನಿರ್ಧಾರ

| Updated By: ಸಾಧು ಶ್ರೀನಾಥ್​

Updated on: Jul 31, 2021 | 3:11 PM

ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ. ಈ ಬಗ್ಗೆ ಟಿವಿ9 ಗೆ ಮಾಹಿತಿ ನೀಡಿದ ಬಿಬಿಎಂಪಿ ವಿಶೇಷ ಆಯುಕ್ತ ಡಿ.ರಂದೀಪ್, ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ! ಒಂದೇ ಮನೆಯಲ್ಲಿ ಮೂರು ಸೋಂಕಿತರು ಪತ್ತೆಯಾದರೆ ಮನೆ ಸೀಲ್ ಡೌನ್; ಬಿಬಿಎಂಪಿ ನಿರ್ಧಾರ
ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಭೀತಿ ಶುರುವಾಗಿದೆ. ಈಗ ತಾನೇ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿದೆ. ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಲಾಕ್​ಡೌನ್​ ಕೂಡಾ ಘೋಷಿಸಿತ್ತು. ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದಂತೆ ಲಾಕ್​ಡೌನ್​ ತೆರವುಗೊಳಿಸಲಾಯಿತು. ಆದರೆ ಇದೀಗ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಅನಿವಾರ್ಯವಾಗಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುವ ಮೊದಲು ಹೆಚ್ಚು ಗಮನಹರಿಸಬೇಕಿದೆ.

ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ. ಈ ಬಗ್ಗೆ ಟಿವಿ9 ಗೆ ಮಾಹಿತಿ ನೀಡಿದ ಬಿಬಿಎಂಪಿ ವಿಶೇಷ ಆಯುಕ್ತ ಡಿ.ರಂದೀಪ್, ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ ಸೀಲ್ ಡೌನ್ ಅಸ್ತ್ರ ಪ್ರಯೋಗ ಮಾಡಲಾಗುವುದು. ಮೂರು ಸೋಂಕಿತರು ಒಂದೇ ಮನೆಯಲ್ಲಿ ಪತ್ತೆಯಾದರೆ ಮನೆಗಳನ್ನ ಸೀಲ್ ಡೌನ್ ಮಾಡುತ್ತೇವೆ ಅಂತ ತಿಳಿಸಿದ್ದಾರೆ.

ಕರ್ಫ್ಯೂ ಜಾರಿ ಸಾಧ್ಯತೆ
ಐದು ಕೇಸ್ಗಳು ಪತ್ತೆಯಾಗುವ ಪ್ರದೇಶವನ್ನ ಸೀಲ್ ಡೌನ್ ಮಾಡಲಾಗುತ್ತದೆ. 10 ಕೇಸ್​ಗಳು ಪತ್ತೆಯಾಗುವ ಸ್ಟ್ರೀಟ್, ರಸ್ತೆಗಳನ್ನೇ ಸೀಲ್ ಡೌನ್ ಮಾಡುತ್ತೇವೆ. ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದೇವೆ. ಮಾರ್ಕೆಟ್​ಗಳಿಗೆ ಹೋಗಿ ಬಂದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಈಗಾಗಲೇ ಸರ್ಕಾರಕ್ಕೆ ನಮ್ಮ ವರದಿ ನೀಡಲಾಗಿದೆ. ಸೋಂಕಿತರ ಸಂಖ್ಯೆ ಏರಿಕೆಯಾದರೆ ಸರ್ಕಾರದ ಹಂತದಲ್ಲಿ ಕರ್ಫ್ಯೂಗಳನ್ನ ಜಾರಿ ಮಾಡುವ ಸಾಧ್ಯತೆಯಿದೆ. ಜೊತೆಗೆ ಬೇರೆ ರೀತಿಯ ಕ್ರಮಕ್ಕೂ ಮುಂದಾಗಬಹುದು. ಅದನ್ನು ಸರ್ಕಾರ ನಿರ್ಧಾರ ಮಾಡುತ್ತದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಡಿ.ರಂದೀಪ್ ಹೇಳಿದ್ದಾರೆ.

72 ಮನೆಗಳು ಸೀಲ್‌ ಡೌನ್​
ಯಲಹಂಕದ ಸುರಭಿ ಲೇಔಟ್‌ನಲ್ಲಿರುವ ಒಂದೇ ಮನೆಯಲ್ಲಿ ಐವರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಸೋಂಕಿತರ ಮನೆಯನ್ನು ಬಿಬಿಎಂಪಿ ಅಧಿಕಾರಿಗಳು ಸೀಲ್‌ ಡೌನ್ ಮಾಡಿದ್ದಾರೆ. ಜೊತೆಗೆ ಯಶವಂತಪುರದ ಬೆಲ್ ಅಪಾರ್ಟ್​ಮೆಂಟ್​​ನಲ್ಲಿ 16 ಕೇಸ್​ಗಳು ಪತ್ತೆಯಾದ ಹಿನ್ನೆಲೆ ಅಪಾರ್ಟ್​ಮೆಂಟ್ ಎ ಬ್ಲಾಕ್​ನ ಸೀಲ್​ ಡೌನ್​ ಮಾಡಿದ್ದಾರೆ. ಧಾರವಾಡ, ದೆಹಲಿಗೆ ಪ್ರಯಾಣ ಮಾಡಿ ವಾಪಸ್ ಆದವರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಎ ಬ್ಲಾಕ್‌ನಲ್ಲಿರುವ ಸುಮಾರು 72 ಮನೆಗಳು ಸೀಲ್‌ ಡೌನ್ ಆಗಿವೆ.

ಇದನ್ನೂ ಓದಿ

ಕೊರೊನಾ ಆತಂಕ: ಕೇರಳ-ಕರ್ನಾಟಕ ಗಡಿಯಲ್ಲಿ ಕಠಿಣ ಕ್ರಮ ಜಾರಿ; ಇಂದು ಸಂಜೆ ಜಿಲ್ಲಾಡಳಿತಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

Exclusive: ದೇಶದಲ್ಲಿ ಕೊರೊನಾ ಲಸಿಕೆ ವಿತರಣೆಯ ವೇಗ ಕುಂಠಿತವಾಗಲು ಕಾರಣವೇನು?

(BBMP has decided to seal the house if three infected people are found in the same house at Bengaluru)

Published On - 1:13 pm, Sat, 31 July 21