AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Encroachment: ಒತ್ತುವರಿ ತರೆವಿಗೆ ಅಡ್ಡಿಪಡಿಸಿದ ಮಾಜಿ ಶಾಸಕನ ವಿರುದ್ಧ ದೂರು ದಾಖಲಿಸಲು ಮುಂದಾದ ಬಿಬಿಎಂಪಿ

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ಆರೋಪದಡಿ ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರು ದಾಖಲಿಸಲು ಬಿಬಿಎಂಪಿ ಮುಂದಾಗಿದೆ.

Bengaluru Encroachment: ಒತ್ತುವರಿ ತರೆವಿಗೆ ಅಡ್ಡಿಪಡಿಸಿದ ಮಾಜಿ ಶಾಸಕನ ವಿರುದ್ಧ ದೂರು ದಾಖಲಿಸಲು ಮುಂದಾದ ಬಿಬಿಎಂಪಿ
ಮಾಜಿ ಶಾಸಕ ನಂದೀಶ್​​ ರೆಡ್ಡಿ (ಎಡಚಿತ್ರ) ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (ಬಲಚಿತ್ರ)
ವಿವೇಕ ಬಿರಾದಾರ
|

Updated on:Jun 20, 2023 | 12:46 PM

Share

ಬೆಂಗಳೂರು: ನಗರದಲ್ಲಿ ರಾಜಕಾಲುವೆ (Rajkaluve) ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ಆರೋಪದಡಿ ಮಾಜಿ ಶಾಸಕ ನಂದೀಶ್ ರೆಡ್ಡಿ (Nandish Reddy) ವಿರುದ್ಧ ದೂರು ದಾಖಲಿಸಲು ಬಿಬಿಎಂಪಿ (BBMP) ಮುಂದಾಗಿದೆ. ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರು ನೀಡಲು ಸೂಚಿಸಿದ್ದೇನೆ. ಮಹದೇವಪುರ ಠಾಣೆಯಲ್ಲಿ ಕ್ರಿಮಿನಲ್ ಕೇಸ್ (Criminal Case) ದಾಖಲಿಸಲು ಸೂಚಿಸಿದ್ದೇನೆ. ಕಾರ್ಯಾಚರಣೆಗೆ ಯಾರೇ ಅಡ್ಡಿಪಡಿಸಿದರೂ ದೂರು ದಾಖಲಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಸೋಮವಾರ (ಜೂ.19) ರಂದು ಮಹದೇವಪುರ ವಲಯ ದೊಡ್ಡನೆಕ್ಕುಂದಿಯ 24/1,3,4 ಫರ್ನ್ ಸಿಟಿ ಬಡಾವಣೆಯ ವಿಲ್ಲಾದಲ್ಲಿ ಒತ್ತುವರಿ ಮಾಡಿಕೊಂಡಿರುವ ಐಶಾರಾಮಿ ಕ್ಲಬ್ ಹೌಸ್ ಮತ್ತು ಈಜುಕೊಳ ತೆರವು ಕಾರ್ಯಚರಣೆ ವೇಳೆ ನಿವಾಸಿಗಳು ಹಾಗೂ ಮಾಜಿ ಶಾಸಕ ನಂದೀಶ್ ರೆಡ್ಡಿ ಜೆಸಿಬಿ ಕೀ ಕಿತ್ತುಕೊಂಡು ತೆರವಿಗೆ ಅಡ್ಡಿಪಡಿಸಿದ್ದರು. ಹೀಗಾಗಿ ಬಿಬಿಂಪಿ ದೂರು ದಾಖಿಸಲು ಮುಂದಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ, ಹಲವಡೆ ಟ್ರಾಫಿಕ್ ಜಾಮ್ ಅಂಡರ್​ ಪಾಸ್​ ಬಂದ್

ಸಿಟಿಯಲ್ಲಿ ಇಂದು ಮುಂದುವರೆಯಲ್ಲಿದೆ ಒತ್ತುವರಿ ತೆರವು

ಇಂದು (ಜೂ.20) ಮತ್ತೆ ಬುಲ್ಡೋಜರ್ ಘರ್ಜಿಸಲಿದೆ. ದೊಡ್ಡನಕುಂದಿ ಹಾಗೂ ಪಣತ್ತೂರು ಎರಡು ಕಡೆ ಅಕ್ರಮ ಒತ್ತುವರಿಯನ್ನು ತೆರುವುಗೊಳಿಸಲಾಗುತ್ತದೆ. ಪಾಲಿಕೆ ಅಕ್ರಮ ಒತ್ತುವರಿ ವರದಿ ಪಡೆದಿದ್ದು, ಪಾಲಿಕೆ ವ್ಯಾಪ್ತಿಯ 8 ವಲಯಗಳ 100ಕ್ಕೂ ಹೆಚ್ಚು ಕಡೆ ಒತ್ತುವರಿಗೆ ಪ್ಲಾನ್ ಮಾಡಲಾಗಿದೆ.

ಇಂದು ಎರಡು ಭಾಗದಲ್ಲಿ ಪಾಲಿಕೆಯಿಂದ ತೆರವು ಕಾರ್ಯಚರಣೆ ನಡೆಯಲಿದೆ. ಪಾಲಿಕೆಯ ಟಾರ್ಗೆಟ್ ನಲ್ಲಿ 600 ಅಕ್ರಮ ಸ್ಥಳಗಳಿವೆ. ಒತ್ತುವರಿ ತೆರವುಗೊಳಿಸಲು ಸರ್ಕಾರ 15 ದಿನಗಳ ಡೆಡ್ ಲೈನ್ ನೀಡಿದೆ. 600 ಪೈಕಿ 110 ಕಡೆ ಕೋರ್ಟ್​​ನಿಂದ ತಡೆ ಆದೇಶ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Tue, 20 June 23

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ