AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ! ವಕ್ಫ್ ಬೋರ್ಡ್​ಗೆ ನೋಟಿಸ್ ನೀಡಿದ ಬಿಬಿಎಂಪಿ

ಮೈದಾನ ವಕ್ಫ್ ಬೋರ್ಡ್​ದು ಆಗಿದ್ದರೆ ಆಸ್ತಿ ದಾಖಲೆ ನೀಡುವಂತೆ ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಆಯುಕ್ತ ನೋಟಿಸ್​ನಲ್ಲಿ ತಿಳಿಸಿದ್ದಾರೆ. ಹಾಗೇ, ಮೂರು ದಿನಗಳಲ್ಲಿ ನೋಟಿಸ್​ಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ.

ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ! ವಕ್ಫ್ ಬೋರ್ಡ್​ಗೆ ನೋಟಿಸ್ ನೀಡಿದ ಬಿಬಿಎಂಪಿ
ಚಾಮರಾಜಪೇಟೆ ಈದ್ಗಾ ಮೈದಾನ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 15, 2022 | 11:20 AM

Share

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ (Idgah Maidan) ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ಮೈದಾನದ ಜಾಗ ನಮ್ಮದು ಎಂದಿರುವ ವಕ್ಫ್ ಬೋರ್ಡ್​ಗೆ ಬಿಬಿಎಂಪಿ (BBMP) ನೋಟಿಸ್ ನೀಡಿದೆ. ಮೈದಾನ ವಕ್ಫ್ ಬೋರ್ಡ್​ದು ಆಗಿದ್ದರೆ ಆಸ್ತಿ ದಾಖಲೆ ನೀಡುವಂತೆ ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಆಯುಕ್ತ ನೋಟಿಸ್​ನಲ್ಲಿ ತಿಳಿಸಿದ್ದಾರೆ. ಹಾಗೇ, ಮೂರು ದಿನಗಳಲ್ಲಿ ನೋಟಿಸ್​ಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ. ವಕ್ಫ್ ಬೋರ್ಡ್ ದಾಖಲೆ ಪರಿಶೀಲಿಸಿದ ನಂತರ ಮೇದಾನ ಯಾರಿಗೆ ಸೇರಿದ್ದ ಎಂದು ನಿರ್ಧಾರ ಮಾಡಲಾಗುತ್ತದೆ.

ಬಿಬಿಎಂಪಿಗೆ ಮನವಿ ಮಾಡಿದ್ದ ಹಿಂದೂಪರ ಸಂಘಟನೆ: ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ವಿಶ್ವ ಯೋಗಾ ದಿನಾಚರಣೆಯನ್ನು ಆಚರಿಸಲು ಅನುಮತಿ ನೀಡುವಂತೆ ಬಿಬಿಎಂಪಿಗೆ ಹಿಂದೂಪರ ಸಂಘಟನೆಗಳು ಮನವಿ ಸಲ್ಲಿಸಿದ್ದವು. ಆದರೆ ಮನವಿಗೆ ಬಿಬಿಎಂಪಿ ಅನುಮತಿ ನೀಡುವುದು ಅನುಮಾನ ಎನ್ನಲಾಗುತ್ತಿದೆ. ಹಿಂದೂಪರ ಸಂಘಟನೆಗಳು ಈಗಾಗಲೆ ಡೆಡ್ ಲೈನ್ ನೀಡಿವೆ ಆದರೂ ಕೂಡಾ ಅನುಮತಿ ಸಿಗೋದು ಕಷ್ಟ ಎನ್ನಲಾಗುತ್ತಿದೆ. ಈ ಸಂಬಂಧ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ಮಾತನಾಡಿ ನಮ್ಮ ದಾಖಲೆಗಳಲ್ಲಿ ಬಿಬಿಎಂಪಿ ಆಟದ ಮೈದಾನ ಅಂತಿದೆ. ಆಟ ಆಡೋಕೆ ಯಾವುದೇ ಅಭ್ಯಂತರ ಇಲ್ಲ. ಆದರೆ ಸಂಘಟನೆಗಳು ಕೇಳಿರೋದು ಸ್ವಾತಂತ್ರ್ಯ, ಯೋಗಾ ದಿನಾಚರಣೆಗೆ ಮಾಡಲು ಅನುಮತಿ ಕೇಳಿವೆ. ಮತ್ತೊಂದು ಕಡೆ ವಕ್ಫ್ ಬೋರ್ಡ್ ನಿಂದ ನಮಗೆ ಪತ್ರ ಬಂದಿದೆ. ಚಾಮರಾಜಪೇಟೆ ಮೈದಾನ ನಮ್ಮ ವ್ಯಾಪ್ತಿಗೆ ಬರುತ್ತೆ ಅಂತಿದ್ದಾರೆ. ಇದನ್ನ ಪರಿಶೀಲನೆ ನಡೆಸಲು ಮುಖ್ಯ ಕಚೇರಿಗೆ ಕಳುಹಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಸುಬ್ರಹ್ಮಣ್ಯನಗರನಲ್ಲಿ ದೊಡ್ಡ ಮರವುರುಳಿ ಬಿದ್ದು ಮೂರು ಕಾರುಗಳು ಜಖಂ

ಇದನ್ನೂ ಓದಿ
Image
Pratap Simha: ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ರಾಜವಂಶಸ್ಥರಿಗೆ ಆಹ್ವಾನ ನಿರಾಕರಣೆ ವಿವಾದ: ಸುಳ್ಳು ಹಬ್ಬಿಸದಿರಿ ಎಂದ ಸಂಸದ ಪ್ರತಾಪ್ ಸಿಂಹ
Image
ಪಠ್ಯಪುಸ್ತಕಗಳಲ್ಲಿ ಬಸವ ಮತ್ತು ಕುವೆಂಪುಗೆ ಆಗಿರುವ ಅವಮಾನಕ್ಕೆ ನಾದಬ್ರಹ್ಮ ಹಂಸಲೇಖ ‘ಕುಪ್ಪಳ್ಳಿ ಕಹಳೆ’ ಮೊಳಗಿಸಿದರು!
Image
ಕರ್ನಾಟಕ ಲೋಕಾಯುಕ್ತರಾಗಿ ನ್ಯಾ. ಭೀಮನಗೌಡ ಸಂಗನಗೌಡ ಪಾಟೀಲ್ ಪ್ರಮಾಣ ವಚನ ಸ್ವೀಕಾರ
Image
Siddhanth Kapoor: ‘ನಾನಾಗಿಯೇ ಡ್ರಗ್ಸ್​ ಸೇವಿಸಿಲ್ಲ, ಫ್ರೆಂಡ್ಸ್​ ಮಿಕ್ಸ್​ ಮಾಡಿ ಕೊಟ್ರು’; ತನಿಖೆ ವೇಳೆ ಸಿದ್ಧಾಂತ್ ಕಪೂರ್​​ ಹೇಳಿಕೆ

ಈದ್ಗಾ ಮೈದಾನ ಯಾರಿಗೆ ಸೇರಿದ್ದು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ಈದ್ಗಾ ಮೈದಾನದಲ್ಲಿ ಆಚರಿಸಲು ನಿರ್ಧಾರ ಮಾಡಲಾಗಿದೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಆದಿ ಟಿವಿ9ಗೆ ಮಾಹಿತಿ ನೀಡಿದ್ದಾರೆ. ವಿವಾದಿತ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲು ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಹಿಂದೂ ಸಂಘಟನೆಗಳ ಸಾಲು ಸಾಲು ಮನವಿ ಬೆನ್ನಲೆ ವಕ್ಫ್ ಬೋರ್ಡ್ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:13 am, Wed, 15 June 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?