AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ರಾಜ್ಯ ಪ್ರವಾಸ ವೇಳೆ ಕಳಪೆ ರಸ್ತೆ ಕಾಮಗಾರಿ ಹಿನ್ನೆಲೆ: ಇಬ್ಬರು ಇಂಜಿನಿಯರ್​ಗಳ ಅಮಾನತು, ಬಿಬಿಎಂಪಿ ಆದೇಶ

ಪ್ರಧಾನಿ ನರೇಂದ್ರ ಮೋದಿ ಜೂನ್ 20ರಂದು ಬೆಂಗಳೂರಿಗೆ ಬಂದಾಗ, ಅವರು ಸಂಚರಿಸುವ ರಸ್ತೆಗಳು ಲಕಲಕ ಅಂತ ಹೊಳೆಯುತ್ತಿದ್ದವು. ಆದರೆ ಮೋದಿ ವಾಪಸ್ ಹೋದ್ಮೇಲೆ ತರಾತುರಿಯಲ್ಲಿ ಮಾಡಿದ್ದ ರಸ್ತೆಗಳು ಅದ್ವಾನ ಎದ್ದುಹೋಗಿದ್ದವು.

ಮೋದಿ ರಾಜ್ಯ ಪ್ರವಾಸ ವೇಳೆ ಕಳಪೆ ರಸ್ತೆ ಕಾಮಗಾರಿ ಹಿನ್ನೆಲೆ: ಇಬ್ಬರು ಇಂಜಿನಿಯರ್​ಗಳ ಅಮಾನತು, ಬಿಬಿಎಂಪಿ ಆದೇಶ
ಕಳಪೆ ಕಾಮಗಾರಿಯಿಂದ ಹಾಳಾದ ರಸ್ತೆ
TV9 Web
| Edited By: |

Updated on: Jul 22, 2022 | 9:57 AM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ವೇಳೆ 23 ಕೋಟಿ ರೂ. ಖರ್ಚು ಮಾಡಿ ನಿರ್ಮಾಣ ಮಾಡಿದ್ದ ರಸ್ತೆ ಕಳಪೆ ಕಾಮಗಾರಿ ಹಿನ್ನೆಲೆ ಇಬ್ಬರು ಎಂಜಿನಿಯರ್​ಗಳನ್ನು ಬಿಬಿಎಂಪಿ ಅಮಾನತು (suspended) ಮಾಡಿದೆ. ಕಳಪೆ ಕಾಮಗಾರಿ ಬಗ್ಗೆ ಟಿವಿ9 ವರದಿ ಮಾಡಿತ್ತು. ಟಿವಿ9 ಸುದ್ದಿ ಆಧಾರದ ಮೇಲೆ ಎಂಜಿನಿಯರ್​ಗಳಿಗೆ ನೋಟೀಸ್ ನೀಡಿದ್ದು, ಬಿಬಿಎಂಪಿ ಹಿರಿಯ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದರು. ಪ್ರಧಾನಿ ಕಚೇರಿಯಿಂದಲೂ ವರದಿ ಕೇಳಿದ್ದ ಹಿನ್ನಲೆ ಸ್ಥಳಕ್ಕೆ ಹೋಗಿ ಗುಣಮಟ್ಟ ಪರಿಶೀಲನೆ ಮಾಡಲಾಗಿದೆ. ಪರಿಶೀಲನೆ ವೇಳೆ ಕಳಪೆ ಕಾಮಗಾರಿ ಮಾಡಿರುವುದು ರೂಜುವಾತಾಗಿದ್ದು, 40 ಎಂ.ಎಂ ಡಾಂಬರೀಕರಣ ಮಾಡಬೇಕಿದ್ದ ಜಾಗದಲ್ಲಿ, 30 ಎಂ.ಎಂ ರಸ್ತೆ ಡಾಂಬರೀಕರಣ ಮಾಡಿದ್ದು, ತನಿಖೆ ವೇಳೆ ಕಳಪೆ ಕಾಮಗಾರಿ ಪತ್ತೆಯಾಗಿದೆ. ತನಿಖೆ ವರದಿ ಆಧರಿಸಿ ಎ.ರವಿ, ಸಹಾಯಕ ಕಾರ್ಯ‌ನಿರ್ವಹಕ ಅಭಿಯಂತರರು ಹಾಗೂ ವಿಶ್ವಾಸ್ ಐ.ಕೆ ಸಹಾಯಕ ಅಭಿಯಂತರರನ್ನ ಸೇವೆಯಿಂದ ಅಮಾನತು ಮಾಡಿ ಬಿಬಿಎಂಪಿ ಆಡಳಿತ ವಿಭಾಗದ ಉಪಯುಕ್ತ ಆದೇಶ ಹೊರಡಿಸಿದೆ.

ಇದನ್ನೂ ಓದಿ: ರಸ್ತೆಗೆ ಸ್ಪೀಡ್ ಬ್ರೇಕರ್ಸ್ ಅಳವಡಿಸಲು ಬಿಬಿಎಂಪಿಗೆ ಡೆಡ್​ಲೈನ್​ ನೀಡಿದ ಬೆಂಗಳೂರು ವಿವಿ ವಿದ್ಯಾರ್ಥಿಗಳು

23 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಾಣ:

ಪ್ರಧಾನಿ ನರೇಂದ್ರ ಮೋದಿ ಜೂನ್ 20ರಂದು ಬೆಂಗಳೂರಿಗೆ ಬಂದಾಗ, ಅವರು ಸಂಚರಿಸುವ ರಸ್ತೆಗಳು ಲಕಲಕ ಅಂತ ಹೊಳೆಯುತ್ತಿದ್ದವು. ಆದರೆ ಮೋದಿ ವಾಪಸ್ ಹೋದ್ಮೇಲೆ ತರಾತುರಿಯಲ್ಲಿ ಮಾಡಿದ್ದ ರಸ್ತೆಗಳು ಅದ್ವಾನ ಎದ್ದುಹೋಗಿದ್ದವು. 23 ಕೋಟಿ ರೂಪಾಯಿ ಖರ್ಚು ಮಾಡಿ ನಿರ್ಮಾಣ ಮಾಡಿದ ರಸ್ತೆಯ ಸ್ಥಿತಿ ನೋಡುವಂತಿಲ್ಲ. ಬಿಬಿಎಂಪಿ(BBMP) ಡಾಂಬರ್ ರಸ್ತೆ ಕಳಪೆ ಕಾಮಗಾರಿ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಹೀಗಾಗಿ ರಾಜ್ಯ ಸರ್ಕಾರಕ್ಕೆ, ಪ್ರಧಾನಿ ಕಾರ್ಯಾಲಯ ವರದಿ ಕೇಳಿದ್ದು ಬಿಬಿಎಂಪಿ ಆಯುಕ್ತರಿಗೆ ವರದಿ ನೀಡುವಂತೆ ಸಿಎಂ ಕಚೇರಿ ಸೂಚನೆ ನೀಡಲಾಗಿತ್ತು.

ಬೆಂಗಳೂರಿನ ವಿವಿಯಿಂದ ಮರಿಯಪ್ಪನಪಾಳ್ಯದ ಕಡೆ ಹೋಗುವ ರಸ್ತೆಯಲ್ಲಿ ಮೋದಿ ಬರ್ತಾರೆ ಅನ್ನೋ ಕಾರಣಕ್ಕೆ ಡಾಂಬರೀಕರಣ ಮಾಡಲಾಗಿತ್ತು. ಆದರೆ ಮೂರೇ ದಿನಕ್ಕೆ ಡಾಂಬರ್ ಕಿತ್ಕೊಂಡು ಬಂದಿದೆ. ಪ್ರಧಾನಿ ಭೇಟಿ ಕೊಟ್ಟ ಅಂಬೇಡ್ಕರ್ ಎಕನಾಮಿಕ್ ಕಾಲೇಜಿನ ರಸ್ತೆಯಲ್ಲೂ ಬೃಹತ್ ಗುಂಡಿ ಬಿದ್ದಿತ್ತು. ಅಂಬೇಡ್ಕರ್ ಕಾಲೇಜಿಗೆ ಮೋದಿ ಭೇಟಿ ಕೊಡ್ತಾರೆ ಅಂತಾ ಗುಂಡಿಗಳನ್ನ ಮುಚ್ಚಲಾಗಿತ್ತು.

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್