AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮದಿನದ ಅಂಗವಾಗಿ ಬಿಬಿಎಂಪಿ ವತಿಯಿಂದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಲೋಕಾರ್ಪಣೆ

ಎಂ.ವಿಶ್ವೇಶ್ವರಯ್ಯನವರ ಪ್ರತಿಮೆಯ ಆವರಣವನ್ನು ಸಾರ್ವಜನಿಕ ಚರ್ಚಾ ಸ್ಥಳವಾಗಿ (public space) ನವೀಕರಿಸಿರುವ ಕಾಮಗಾರಿಗೆ ಲೋಕಾರ್ಪಣೆ ಮಾಡಲಾಗಿದೆ.

ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮದಿನದ ಅಂಗವಾಗಿ ಬಿಬಿಎಂಪಿ ವತಿಯಿಂದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಲೋಕಾರ್ಪಣೆ
ಸರ್ ಎಂ.ವಿಶ್ವೇಶ್ವರಯ್ಯ
TV9 Web
| Updated By: sandhya thejappa|

Updated on: Sep 15, 2021 | 4:34 PM

Share

ಬೆಂಗಳೂರು: ಇಂದು (ಸೆ.15) ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯನವರ (Sir M Vishweshwarayya) 160ನೇ ಜನ್ಮ ದಿನಾಚರಣೆ. ಈ ದಿನವನ್ನು ಅಂದರೆ ಸೆಪ್ಟೆಂಬರ್ 15ಕ್ಕೆ ಪ್ರತಿ ವರ್ಷ ಭಾರತದಲ್ಲಿ ಇಂಜಿನಿಯರ್ಗಳ ದಿನಾಚರಣೆ ಎಂದು ಆಚರಿಸಲಾಗುತ್ತಿದೆ. 1968ನೇ ಇಸವಿಯಿಂದ ಆಚರಣೆ ಪ್ರಾರಂಭವಾಗಿದೆ. ದೇಶಕ್ಕೆ ಸರ್ ಎಂ.ವಿಶ್ವೇಶ್ವರಯ್ಯನವರ ಕೊಡುಗೆ ಅಪಾರ. ರತ್ನ ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆ ಅಂಗವಾಗಿ ಬಿಬಿಎಂಪಿ (BBMP) ವತಿಯಿಂದ ಇಂದು ಕೆ.ಆರ್.ವೃತ್ತದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಲೋಕಾರ್ಪಣೆ ಮಾಡಲಾಗಿದೆ.

ಎಂ.ವಿಶ್ವೇಶ್ವರಯ್ಯನವರ ಪ್ರತಿಮೆಯ ಆವರಣವನ್ನು ಸಾರ್ವಜನಿಕ ಚರ್ಚಾ ಸ್ಥಳವಾಗಿ (public space) ನವೀಕರಿಸಿರುವ ಕಾಮಗಾರಿಗೆ ಲೋಕಾರ್ಪಣೆ ಮಾಡಲಾಗಿದೆ. ಸದರಿ ಸ್ಥಳದಲ್ಲಿ 1970ನೇ ಇಸವಿಯಲ್ಲಿ ವಿಶ್ವೇಶ್ವರಯ್ಯನವರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಸದ್ಯ ಸದರಿ ಪ್ರದೇಶಕ್ಕೆ ಅಳವಡಿಸಲಾದ ಉಕ್ಕಿನ ಬೇಲಿಯನ್ನು ತೆರವುಗೊಳಿಸಿ ವಾಸ್ತು ಶಿಲ್ಪಿಗಳ ಸಹಯೋಗದೊಂದಿಗೆ ಸಾರ್ವಜನಿಕ ಸ್ಥಳವೆಂದು ನವೀಕರಿಸಲಾಗಿದೆ.

ಸಾರ್ವಜನಿಕರ ಉಪಯೋಗಕ್ಕಾಗಿ ಎರಡು ಅಲ್ಮೇರಾಗಳನ್ನು ಅಳವಡಿಸಿ ತಾಂತ್ರಿಕ ಪುಸ್ತಕಗಳನ್ನು ಮತ್ತು ಸರ್ ಎಂ.ವಿಶ್ವೇಶ್ವರಯ್ಯನವರ ಜೀವನ ಜೀವನ ಧ್ಯೇಯವನ್ನು ಪ್ರಚಲಿತ ಪಡಿಸುವ ಫಲಕಗಳನ್ನು ಅಡವಡಿಸಲಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಬೀದಿ ಮತ್ತು ನೃಪತುಂಗ ರಸ್ತೆಗೆ ಸಂಪರ್ಕಿಸುವ ಕೆ.ಆರ್.ವೃತ್ತದಲ್ಲಿ ಪ್ರಥಮ ಬಾರಿಗೆ 160 ಅಡಿ ಉದ್ದದ (52.00 ಮೀಟರ್) ನೀರಿನ ಕಾರಂಜಿಯ ಲೋಕಾರ್ಪಣೆ ಮಾಡಲಾಗಿದೆ. ಕೆ.ಆರ್.ವೃತ್ತದಲ್ಲಿ ಪ್ರಥಮ ಬಾರಿಗೆ 160 ಅಡಿ ಉದ್ದದ ನೀರಿನ ಕಾರಂಜಿಯನ್ನು ಗ್ರಾನೇಟ್ನೊಂದಿಗೆ ವಿನ್ಯಾಸಗೊಳಿಸಲಾಗಿದೆ.

ಇನ್ನು ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮದಿನದ ಅಂಗವಾಗಿ ಬೆಂಗಳೂರು ನಗರದ 30 ಪ್ರತಿಷ್ಠಿತ ಕೂಡು ಸ್ಥಳ (Junction)ಗಳ ಅಭಿವೃದ್ಧಿಯ ಪರಿಚಯ ಪುಸ್ತಕ (Coffee Table Book)ನ ಲೋಕಾರ್ಪಣೆ ಮಾಡಲಾಗಿದೆ.

ಇದನ್ನೂ ಓದಿ

ಆಲಿಬಾಗ್​ನಲ್ಲಿ ಬೃಹತ್ ಮನೆಯನ್ನು ಖರೀದಿಸಿದ ದೀಪಿಕಾ- ರಣವೀರ್; ಅದರ ಬೆಲೆ ಎಷ್ಟು ಗೊತ್ತಾ?

ದಾವಣಗೆರೆ ಕಾಂಗ್ರೆಸ್: ಪ್ರಧಾನಿ ಮೋದಿ ಜನ್ಮದಿನವನ್ನು ನಿರುದ್ಯೋಗಿಗಳ ದಿನವೆಂದು ಆಚರಣೆ; ರಕ್ತದಲ್ಲಿ ಪತ್ರ!

(BBMP have been implemented Various development programs as a part of Sir M Vishweshwaraiah Birthday)

ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಮೂಲಾ ನಕ್ಷತ್ರದಲ್ಲಿ ಚಂದ್ರ ಸಂಚಾರ: ಯಾವ ರಾಶಿಗೆ ಏನು ಕಾದಿದೆ ತಿಳಿಯಿರಿ
ಮೂಲಾ ನಕ್ಷತ್ರದಲ್ಲಿ ಚಂದ್ರ ಸಂಚಾರ: ಯಾವ ರಾಶಿಗೆ ಏನು ಕಾದಿದೆ ತಿಳಿಯಿರಿ
ನಿಜವಾದ ಟಾಮ್ ಆ್ಯಂಡ್ ಜೆರಿ; ಒಟ್ಟಿಗೇ ಊಟ ಮಾಡುವ ಬೆಕ್ಕು-ಇಲಿ ವಿಡಿಯೋ ವೈರಲ್
ನಿಜವಾದ ಟಾಮ್ ಆ್ಯಂಡ್ ಜೆರಿ; ಒಟ್ಟಿಗೇ ಊಟ ಮಾಡುವ ಬೆಕ್ಕು-ಇಲಿ ವಿಡಿಯೋ ವೈರಲ್
ಕೆಳಗಿಂದ ಮೇಲೆ ಹರಿವ ನೀರಿನಲ್ಲಿ ದೋಣಿ ಬಿಟ್ಟ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಕೆಳಗಿಂದ ಮೇಲೆ ಹರಿವ ನೀರಿನಲ್ಲಿ ದೋಣಿ ಬಿಟ್ಟ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ