AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಾಗರಿಕರಿಗೆ ‘ಕೆರೆ ಮಿತ್ರ-ಹಸಿರು ಮಿತ್ರ’ರಾಗಲು ಅವಕಾಶ, ಏನಿದು? ಹೇಗೆ ನೋಂದಣಿ? ಇಲ್ಲಿದೆ ವಿವರ

‘Kere Mitras’ and ‘Hasiru Mitras’: ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿರುವ ಕೆರೆ ಅಥವಾ ಉದ್ಯಾನವನದ ನಿರ್ವಹಣೆಯ ಮೇಲ್ವಿಚಾರಣೆಗೆ ಸ್ವಯಂಸೇವಕರಾಗಲು ನಾಗರಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಬಿಬಿಎಂಪಿ ಪ್ರಾರಂಭಿಸಿರುವ ಹೊಸ ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳುವ ಮೂಲಕ, ಈ ಕಾರ್ಯದಲ್ಲಿ ಪಾಲ್ಗೊಳ್ಳಬಹುದು. ಹೇಗೆ ಅಂತೀರಾ? ಈ ಕೆಳಗಿನಂತಿದೆ ಇಲ್ಲಿದೆ ವಿವರ

ಬೆಂಗಳೂರು ನಾಗರಿಕರಿಗೆ ‘ಕೆರೆ ಮಿತ್ರ-ಹಸಿರು ಮಿತ್ರ’ರಾಗಲು ಅವಕಾಶ, ಏನಿದು? ಹೇಗೆ ನೋಂದಣಿ? ಇಲ್ಲಿದೆ ವಿವರ
ಬಿಬಿಎಂಪಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 24, 2023 | 8:55 AM

ಬೆಂಗಳೂರು, (ಅಕ್ಟೋಬರ್ 24): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕೆರೆ ಹಾಗೂ ಉದ್ಯಾನವನಗಳ ನಿರ್ವಹಣೆಯ ಮೇಲ್ವಿಚಾರಣೆ ನಡೆಸಲು ನಾಗರಿಕರಿಗೆ ಅವಕಾಶ ಕಲ್ಪಿಸಿದ್ದು, ಆಸಕ್ತರು ‘ಕೆರೆ ಮಿತ್ರ’ ಹಾಗೂ ‘ಹಸಿರು ಮಿತ್ರ’ರಾಗಿ (‘Kere Mitras’ and ‘Hasiru Mitras’) ನೋಂದಾಯಿಸಿಕೊಳ್ಳಬಹುದು. ಇತ್ತೀಚೆಗೆ ನಡೆದ ಬ್ರ್ಯಾಂಡ್ ಬೆಂಗಳೂರು ಸಮ್ಮೇಳನದಲ್ಲಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು ನಾಗರಿಕರಿಗೆ ಕೆರೆ, ಉದ್ಯಾನವನಗಳ ನಿರ್ವಹಣೆ ನೀಡುವ ಬಗ್ಗೆ ಹೇಳಿದ್ದರು. ಅವರ ಯೋಜನೆಯಂತೆ ಪ್ರಥಮವಾಗಿ ಕೆರೆ ಮಿತ್ರ ಹಾಗೂ ಹಸಿರು ಮಿತ್ರ ಆರಂಭವಾಗುತ್ತಿದೆ.

ನಾಗರಿಕ ಸಂಸ್ಥೆಯು ತನ್ನ ವೆಬ್‌ಸೈಟ್‌ನಲ್ಲಿ ತನ್ನ ‘ಕೆರೆ’ ಮತ್ತು ‘ಹಸಿರು ಮಿತ್ರ’ ಕಾರ್ಯಕ್ರಮಕ್ಕಾಗಿ ಅರ್ಜಿ ಸಲ್ಲಿಸಲು ನಾಗರಿಕರನ್ನು ಆಹ್ವಾನಿಸಿದೆ. ಅಕ್ಟೋಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಸೀಮಿತ ಮಂದಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. https://bbmp.gov.in/ ವೆಬ್​ಸೈಟ್​ಗೆ ಭೇಟಿ ನೀಡಿ ಅ.30ರೊಳಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಸರು ನೋಂದಾಯಿಸಿದವರಲ್ಲಿ ರ್ಯಾಂಡಮ್ ಆಗಿ 10 ಜನರನ್ನು ಆಯ್ಕೆ ಮಾಡಲಾಗುತ್ತದೆ. ಅವರು ಕೆರೆ ಮಿತ್ರ ಹಾಗೂ ಹಸಿರು ಮಿತ್ರರಾಗಿ ಒಂದು ತಿಂಗಳು ಕೆರೆ ಅಥವಾ ಉದ್ಯಾನವದ ಮೇಲ್ವಿಚಾರಣೆಯನ್ನು ನಿರ್ವಹಿಸಬಹುದು. ಬಳಿಕ ಅವುಗಳ ಅಭಿಪ್ರಾಯಗಳನ್ನು ತಿಳಿಸಬಹುದು ಎಂದು ಬಿಬಿಎಂಪಿ ಕೆರೆಗಳ ವಿಭಾಗದ ಮುಖ್ಯ ಇಂಜಿನಿಯರ್ ವಿಯಯ್ ಕುಮಾರ್ ಹರಿದಾಸ್ ಮಾಹಿತಿ ನೀಡಿದ್ದಾರೆ.

ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಒದಗಿಸಲಾದ ನೋಂದಣಿ ನಮೂನೆಯು ಆಸಕ್ತ ಸ್ವಯಂಸೇವಕರಿಂದ ಹೆಸರು, ಫೋನ್ ಸಂಖ್ಯೆ, ಇಮೇಲ್ ಐಡಿ, ವಸತಿ ವಿಳಾಸ, ಮತದಾರರ ಗುರುತಿನ ಪ್ರತಿ, ವಾರ್ಡ್‌ನ ಹೆಸರು ಮತ್ತು ಆದ್ಯತೆಯ ಕೆರೆ ಅಥವಾ ಉದ್ಯಾನದಂತಹ ವಿವರಗಳನ್ನು ನೀಡಬೇಕಾಗುತ್ತದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಡಿಯಲ್ಲಿ ಬರುವುದರಿಂದ ವರ್ತೂರು ಮತ್ತು ಬೆಳ್ಳಂದೂರು ಕೆರೆಗಳು ಪಟ್ಟಿಯಲ್ಲಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್