AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಳೆಗಾಲಕ್ಕೆ ಸಜ್ಜಾದ ಬಿಬಿಎಂಪಿ, ಸಹಾಯವಾಣಿ ತೆರೆದು ಸಕಲ ಸಿದ್ಧತೆ

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ನೂರಾರು ಅವಾಂತರ ಸೃಷ್ಟಿಸಿದೆ. ರಾಜ್ಯ ರಾಜಧಾನಿಯಲ್ಲೂ ಈ ಬಾರಿ ಮುಂದಿನ ಮೂರು ತಿಂಗಳ ಕಾಲ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತೆ ಅಂತಾ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇತ್ತ ಮಳೆ ತಗ್ಗಿದ್ದರಿಂದ ಸೈಲೆಂಟ್ ಆಗಿದ್ದ ಪಾಲಿಕೆ, ಮಳೆಗಾಲಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಬೆಂಗಳೂರು: ಮಳೆಗಾಲಕ್ಕೆ ಸಜ್ಜಾದ ಬಿಬಿಎಂಪಿ, ಸಹಾಯವಾಣಿ ತೆರೆದು ಸಕಲ ಸಿದ್ಧತೆ
ಬಿಬಿಎಂಪಿ
Follow us
ಶಾಂತಮೂರ್ತಿ
| Updated By: ಆಯೇಷಾ ಬಾನು

Updated on: Jul 21, 2024 | 7:51 AM

ಬೆಂಗಳೂರು, ಜುಲೈ.21: ಮಳೆಗಾಲದ ಆರಂಭದಲ್ಲಿ ಸಿಲಿಕಾನ್ ಸಿಟಿಗೆ ಎಂಟ್ರಿಕೊಟ್ಟು ಅಬ್ಬರಿಸಿದ್ದ ವರುಣ, ಕೆಲಕಾಲ ಬ್ರೇಕ್ ತೆಗೆದುಕೊಂಡ ಬಳಿಕ ಮತ್ತೆ ಎಂಟ್ರಿಯಾಗೋ ಮುನ್ಸೂಚನೆ ಕೊಡ್ತಿದ್ದಾನೆ (Bengaluru Rains). ಸದ್ಯ ಕಳೆದೆರಡು ದಿನಗಳಿಂದ ಅಲ್ಲಲ್ಲಿ ದರ್ಶನ ನೀಡ್ತಿರೋ ವರುಣನ ಎಫೆಕ್ಟ್ ನಿಂದ ರಾಜಧಾನಿ ಕೂಲ್ ಕೂಲ್ ಆಗಿದೆ. ಇತ್ತ ಮಳೆ ದೂರವಾಯ್ತು ಅಂತಾ ಕೊಂಚ ನೆಮ್ಮದಿಯಾಗಿದ್ದ ಪಾಲಿಕೆಗೆ (BBMP) ಮತ್ತೆ ಮಳೆರಾಯನ ಅವಾಂತರಗಳ ಆತಂಕ ಶುರುವಾಗಿದೆ.

ಸದ್ಯ ಮಳೆಗಾಲದ ಆರಂಭದಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿದ್ದ ಮಳೆರಾಯನಿಂದ ಬೆಂಗಳೂರಿನ ಹಲವು ಏರಿಯಾಗಳ ಜನರು ನೀರು ನುಗ್ಗಿ ಸಂಕಷ್ಟ ಅನುಭವಿಸಿದ್ರು, ಅಲ್ಲದೇ 500 ಕ್ಕೂ ಹೆಚ್ಚು ಮರ-ಗಿಡಗಳು ಧರೆಗುರುಳಿ ಅವಾಂತರ ಸೃಷ್ಟಿಸಿತ್ತು. ಇದೆಲ್ಲದರಿಂದ ಎಚ್ಚೆತ್ತ ಪಾಲಿಕೆ ಕೆಲ ಮುಂಜಾಗ್ರತ ಕ್ರಮಗಳನ್ನ ಕೈಗೊಂಡಿದೆ. ಈಗಾಗಲೇ ರಾಜಕಾಲುವೆಗಳ ನೀರಿನ ಮಟ್ಟ ಮಾನಿಟರಿಂಗ್ ಗೆ ಟೆಕ್ನಾಲಜಿ ಬಳಸಿರೋ ಪಾಲಿಕೆ, ಮಳೆ ಅವಾಂತರಗಳ ತಡೆಗೆ ಕೆಲ ಕ್ರಮಗಳನ್ನ ಕೈಗೊಂಡಿದೆ.

ಮಳೆಗಾಲಕ್ಕೆ ಪಾಲಿಕೆ ಸಿದ್ಧತೆಗಳೇನು?

ಸದ್ಯ ಇಷ್ಟೆಲ್ಲ ಕ್ರಮ ಕೈಗೊಂಡಿರೋದಾಗಿ ಪಾಲಿಕೆ ಹೇಳಿಕೊಳ್ತಿದ್ರೂ ಕೂಡ ನಗರದ ಕೆಲವೆಡೆ ರಾಜಕಾಲುವೆಗಳು ಗಬ್ಬೆದ್ದು ನಾರುತ್ತಿವೆ. ಶಾಂತಿನಗರ ಬಸ್ ನಿಲ್ದಾಣದ ಮುಂಭಾಗ ಕೋಟಿ ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರಾಜಕಾಲುವೆ ನಿರ್ವಹಣೆಯಿಲ್ಲದೇ ಗಬ್ಬೆದ್ದು ನಾರ್ತಿದೆ. ಹೂಳು ತುಂಬಿ ನೀರು ಹರಿಯಲು ಅಡೆತಡೆ ಇರೋದು ರಾಜಕಾಲುವೆ ಅಕ್ಕಪಕ್ಕದ ಏರಿಯಾಗಳ ತಗ್ಗು ಪ್ರದೇಶದ ಮೇಲೆ ಎಫೆಕ್ಟ್ ಮಾಡೋ ಸಾಧ್ಯತೆಯಿದೆ.

ಒಟ್ಟಿನಲ್ಲಿ ಪ್ರತಿ ಬಾರೀ ಮಳೆ ಬಂದಾಗ ಒಂದಿಲ್ಲೊಂದು ಅವಾಂತರ ಸೃಷ್ಟಿಯಾಗ್ತಿರೋ ರಾಜಧಾನಿಯಲ್ಲಿ ಈ ಬಾರೀ ಮಳೆಗಾಲದ ಸಿದ್ಧತೆಗೆ 30 ಲಕ್ಷ ರೂಪಾಯಿ ಮೀಸಲಿಟ್ಟಿದ್ದು, ಮಳೆಯ ಅಬ್ಬರವನ್ನ ಪಾಲಿಕೆ ದಿಟ್ಟತನದಿಂದ ನಿರ್ವಹಿಸುತ್ತಾ ಅಥವಾ ಜನರ ಕೆಂಗಣ್ಣಿಗೆ ಗುರಿಯಾಗುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ