AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಳೆಗಾಲಕ್ಕೆ ಸಜ್ಜಾದ ಬಿಬಿಎಂಪಿ, ಸಹಾಯವಾಣಿ ತೆರೆದು ಸಕಲ ಸಿದ್ಧತೆ

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ನೂರಾರು ಅವಾಂತರ ಸೃಷ್ಟಿಸಿದೆ. ರಾಜ್ಯ ರಾಜಧಾನಿಯಲ್ಲೂ ಈ ಬಾರಿ ಮುಂದಿನ ಮೂರು ತಿಂಗಳ ಕಾಲ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತೆ ಅಂತಾ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇತ್ತ ಮಳೆ ತಗ್ಗಿದ್ದರಿಂದ ಸೈಲೆಂಟ್ ಆಗಿದ್ದ ಪಾಲಿಕೆ, ಮಳೆಗಾಲಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಬೆಂಗಳೂರು: ಮಳೆಗಾಲಕ್ಕೆ ಸಜ್ಜಾದ ಬಿಬಿಎಂಪಿ, ಸಹಾಯವಾಣಿ ತೆರೆದು ಸಕಲ ಸಿದ್ಧತೆ
ಬಿಬಿಎಂಪಿ
ಶಾಂತಮೂರ್ತಿ
| Edited By: |

Updated on: Jul 21, 2024 | 7:51 AM

Share

ಬೆಂಗಳೂರು, ಜುಲೈ.21: ಮಳೆಗಾಲದ ಆರಂಭದಲ್ಲಿ ಸಿಲಿಕಾನ್ ಸಿಟಿಗೆ ಎಂಟ್ರಿಕೊಟ್ಟು ಅಬ್ಬರಿಸಿದ್ದ ವರುಣ, ಕೆಲಕಾಲ ಬ್ರೇಕ್ ತೆಗೆದುಕೊಂಡ ಬಳಿಕ ಮತ್ತೆ ಎಂಟ್ರಿಯಾಗೋ ಮುನ್ಸೂಚನೆ ಕೊಡ್ತಿದ್ದಾನೆ (Bengaluru Rains). ಸದ್ಯ ಕಳೆದೆರಡು ದಿನಗಳಿಂದ ಅಲ್ಲಲ್ಲಿ ದರ್ಶನ ನೀಡ್ತಿರೋ ವರುಣನ ಎಫೆಕ್ಟ್ ನಿಂದ ರಾಜಧಾನಿ ಕೂಲ್ ಕೂಲ್ ಆಗಿದೆ. ಇತ್ತ ಮಳೆ ದೂರವಾಯ್ತು ಅಂತಾ ಕೊಂಚ ನೆಮ್ಮದಿಯಾಗಿದ್ದ ಪಾಲಿಕೆಗೆ (BBMP) ಮತ್ತೆ ಮಳೆರಾಯನ ಅವಾಂತರಗಳ ಆತಂಕ ಶುರುವಾಗಿದೆ.

ಸದ್ಯ ಮಳೆಗಾಲದ ಆರಂಭದಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿದ್ದ ಮಳೆರಾಯನಿಂದ ಬೆಂಗಳೂರಿನ ಹಲವು ಏರಿಯಾಗಳ ಜನರು ನೀರು ನುಗ್ಗಿ ಸಂಕಷ್ಟ ಅನುಭವಿಸಿದ್ರು, ಅಲ್ಲದೇ 500 ಕ್ಕೂ ಹೆಚ್ಚು ಮರ-ಗಿಡಗಳು ಧರೆಗುರುಳಿ ಅವಾಂತರ ಸೃಷ್ಟಿಸಿತ್ತು. ಇದೆಲ್ಲದರಿಂದ ಎಚ್ಚೆತ್ತ ಪಾಲಿಕೆ ಕೆಲ ಮುಂಜಾಗ್ರತ ಕ್ರಮಗಳನ್ನ ಕೈಗೊಂಡಿದೆ. ಈಗಾಗಲೇ ರಾಜಕಾಲುವೆಗಳ ನೀರಿನ ಮಟ್ಟ ಮಾನಿಟರಿಂಗ್ ಗೆ ಟೆಕ್ನಾಲಜಿ ಬಳಸಿರೋ ಪಾಲಿಕೆ, ಮಳೆ ಅವಾಂತರಗಳ ತಡೆಗೆ ಕೆಲ ಕ್ರಮಗಳನ್ನ ಕೈಗೊಂಡಿದೆ.

ಮಳೆಗಾಲಕ್ಕೆ ಪಾಲಿಕೆ ಸಿದ್ಧತೆಗಳೇನು?

ಸದ್ಯ ಇಷ್ಟೆಲ್ಲ ಕ್ರಮ ಕೈಗೊಂಡಿರೋದಾಗಿ ಪಾಲಿಕೆ ಹೇಳಿಕೊಳ್ತಿದ್ರೂ ಕೂಡ ನಗರದ ಕೆಲವೆಡೆ ರಾಜಕಾಲುವೆಗಳು ಗಬ್ಬೆದ್ದು ನಾರುತ್ತಿವೆ. ಶಾಂತಿನಗರ ಬಸ್ ನಿಲ್ದಾಣದ ಮುಂಭಾಗ ಕೋಟಿ ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರಾಜಕಾಲುವೆ ನಿರ್ವಹಣೆಯಿಲ್ಲದೇ ಗಬ್ಬೆದ್ದು ನಾರ್ತಿದೆ. ಹೂಳು ತುಂಬಿ ನೀರು ಹರಿಯಲು ಅಡೆತಡೆ ಇರೋದು ರಾಜಕಾಲುವೆ ಅಕ್ಕಪಕ್ಕದ ಏರಿಯಾಗಳ ತಗ್ಗು ಪ್ರದೇಶದ ಮೇಲೆ ಎಫೆಕ್ಟ್ ಮಾಡೋ ಸಾಧ್ಯತೆಯಿದೆ.

ಒಟ್ಟಿನಲ್ಲಿ ಪ್ರತಿ ಬಾರೀ ಮಳೆ ಬಂದಾಗ ಒಂದಿಲ್ಲೊಂದು ಅವಾಂತರ ಸೃಷ್ಟಿಯಾಗ್ತಿರೋ ರಾಜಧಾನಿಯಲ್ಲಿ ಈ ಬಾರೀ ಮಳೆಗಾಲದ ಸಿದ್ಧತೆಗೆ 30 ಲಕ್ಷ ರೂಪಾಯಿ ಮೀಸಲಿಟ್ಟಿದ್ದು, ಮಳೆಯ ಅಬ್ಬರವನ್ನ ಪಾಲಿಕೆ ದಿಟ್ಟತನದಿಂದ ನಿರ್ವಹಿಸುತ್ತಾ ಅಥವಾ ಜನರ ಕೆಂಗಣ್ಣಿಗೆ ಗುರಿಯಾಗುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ