AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಳೆಗಾಲಕ್ಕೆ ಸಜ್ಜಾದ ಬಿಬಿಎಂಪಿ, ಸಹಾಯವಾಣಿ ತೆರೆದು ಸಕಲ ಸಿದ್ಧತೆ

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ನೂರಾರು ಅವಾಂತರ ಸೃಷ್ಟಿಸಿದೆ. ರಾಜ್ಯ ರಾಜಧಾನಿಯಲ್ಲೂ ಈ ಬಾರಿ ಮುಂದಿನ ಮೂರು ತಿಂಗಳ ಕಾಲ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತೆ ಅಂತಾ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇತ್ತ ಮಳೆ ತಗ್ಗಿದ್ದರಿಂದ ಸೈಲೆಂಟ್ ಆಗಿದ್ದ ಪಾಲಿಕೆ, ಮಳೆಗಾಲಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಬೆಂಗಳೂರು: ಮಳೆಗಾಲಕ್ಕೆ ಸಜ್ಜಾದ ಬಿಬಿಎಂಪಿ, ಸಹಾಯವಾಣಿ ತೆರೆದು ಸಕಲ ಸಿದ್ಧತೆ
ಬಿಬಿಎಂಪಿ
ಶಾಂತಮೂರ್ತಿ
| Updated By: ಆಯೇಷಾ ಬಾನು|

Updated on: Jul 21, 2024 | 7:51 AM

Share

ಬೆಂಗಳೂರು, ಜುಲೈ.21: ಮಳೆಗಾಲದ ಆರಂಭದಲ್ಲಿ ಸಿಲಿಕಾನ್ ಸಿಟಿಗೆ ಎಂಟ್ರಿಕೊಟ್ಟು ಅಬ್ಬರಿಸಿದ್ದ ವರುಣ, ಕೆಲಕಾಲ ಬ್ರೇಕ್ ತೆಗೆದುಕೊಂಡ ಬಳಿಕ ಮತ್ತೆ ಎಂಟ್ರಿಯಾಗೋ ಮುನ್ಸೂಚನೆ ಕೊಡ್ತಿದ್ದಾನೆ (Bengaluru Rains). ಸದ್ಯ ಕಳೆದೆರಡು ದಿನಗಳಿಂದ ಅಲ್ಲಲ್ಲಿ ದರ್ಶನ ನೀಡ್ತಿರೋ ವರುಣನ ಎಫೆಕ್ಟ್ ನಿಂದ ರಾಜಧಾನಿ ಕೂಲ್ ಕೂಲ್ ಆಗಿದೆ. ಇತ್ತ ಮಳೆ ದೂರವಾಯ್ತು ಅಂತಾ ಕೊಂಚ ನೆಮ್ಮದಿಯಾಗಿದ್ದ ಪಾಲಿಕೆಗೆ (BBMP) ಮತ್ತೆ ಮಳೆರಾಯನ ಅವಾಂತರಗಳ ಆತಂಕ ಶುರುವಾಗಿದೆ.

ಸದ್ಯ ಮಳೆಗಾಲದ ಆರಂಭದಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿದ್ದ ಮಳೆರಾಯನಿಂದ ಬೆಂಗಳೂರಿನ ಹಲವು ಏರಿಯಾಗಳ ಜನರು ನೀರು ನುಗ್ಗಿ ಸಂಕಷ್ಟ ಅನುಭವಿಸಿದ್ರು, ಅಲ್ಲದೇ 500 ಕ್ಕೂ ಹೆಚ್ಚು ಮರ-ಗಿಡಗಳು ಧರೆಗುರುಳಿ ಅವಾಂತರ ಸೃಷ್ಟಿಸಿತ್ತು. ಇದೆಲ್ಲದರಿಂದ ಎಚ್ಚೆತ್ತ ಪಾಲಿಕೆ ಕೆಲ ಮುಂಜಾಗ್ರತ ಕ್ರಮಗಳನ್ನ ಕೈಗೊಂಡಿದೆ. ಈಗಾಗಲೇ ರಾಜಕಾಲುವೆಗಳ ನೀರಿನ ಮಟ್ಟ ಮಾನಿಟರಿಂಗ್ ಗೆ ಟೆಕ್ನಾಲಜಿ ಬಳಸಿರೋ ಪಾಲಿಕೆ, ಮಳೆ ಅವಾಂತರಗಳ ತಡೆಗೆ ಕೆಲ ಕ್ರಮಗಳನ್ನ ಕೈಗೊಂಡಿದೆ.

ಮಳೆಗಾಲಕ್ಕೆ ಪಾಲಿಕೆ ಸಿದ್ಧತೆಗಳೇನು?

ಸದ್ಯ ಇಷ್ಟೆಲ್ಲ ಕ್ರಮ ಕೈಗೊಂಡಿರೋದಾಗಿ ಪಾಲಿಕೆ ಹೇಳಿಕೊಳ್ತಿದ್ರೂ ಕೂಡ ನಗರದ ಕೆಲವೆಡೆ ರಾಜಕಾಲುವೆಗಳು ಗಬ್ಬೆದ್ದು ನಾರುತ್ತಿವೆ. ಶಾಂತಿನಗರ ಬಸ್ ನಿಲ್ದಾಣದ ಮುಂಭಾಗ ಕೋಟಿ ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರಾಜಕಾಲುವೆ ನಿರ್ವಹಣೆಯಿಲ್ಲದೇ ಗಬ್ಬೆದ್ದು ನಾರ್ತಿದೆ. ಹೂಳು ತುಂಬಿ ನೀರು ಹರಿಯಲು ಅಡೆತಡೆ ಇರೋದು ರಾಜಕಾಲುವೆ ಅಕ್ಕಪಕ್ಕದ ಏರಿಯಾಗಳ ತಗ್ಗು ಪ್ರದೇಶದ ಮೇಲೆ ಎಫೆಕ್ಟ್ ಮಾಡೋ ಸಾಧ್ಯತೆಯಿದೆ.

ಒಟ್ಟಿನಲ್ಲಿ ಪ್ರತಿ ಬಾರೀ ಮಳೆ ಬಂದಾಗ ಒಂದಿಲ್ಲೊಂದು ಅವಾಂತರ ಸೃಷ್ಟಿಯಾಗ್ತಿರೋ ರಾಜಧಾನಿಯಲ್ಲಿ ಈ ಬಾರೀ ಮಳೆಗಾಲದ ಸಿದ್ಧತೆಗೆ 30 ಲಕ್ಷ ರೂಪಾಯಿ ಮೀಸಲಿಟ್ಟಿದ್ದು, ಮಳೆಯ ಅಬ್ಬರವನ್ನ ಪಾಲಿಕೆ ದಿಟ್ಟತನದಿಂದ ನಿರ್ವಹಿಸುತ್ತಾ ಅಥವಾ ಜನರ ಕೆಂಗಣ್ಣಿಗೆ ಗುರಿಯಾಗುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ