AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ವಸತಿ ಗೃಹಗಳಲ್ಲಿ ಅಗ್ನಿ ಅವಘಡ ತಡೆಯಲು ಬಿಬಿಎಂಪಿ ಹೊಸ ಆದೇಶ

ಬಿಬಿಎಂಪಿ ವ್ಯಾಪ್ತಿಯ ವಸತಿ ಸಮುಚ್ಚಯಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.

Big News: ವಸತಿ ಗೃಹಗಳಲ್ಲಿ ಅಗ್ನಿ ಅವಘಡ ತಡೆಯಲು ಬಿಬಿಎಂಪಿ ಹೊಸ ಆದೇಶ
ಹೊತ್ತಿ ಉರಿದ ಫ್ಲಾಟ್
TV9 Web
| Edited By: |

Updated on: Sep 22, 2021 | 6:05 PM

Share

ಬೆಂಗಳೂರು: ದೇವರಚಿಕ್ಕನಹಳ್ಳಿಯ ವಸತಿ ಗೃಹದಲ್ಲಿ ಭೀಕರ ಅಗ್ನಿ ಅವಘಡ ಜರುಗಿದ ಬೆನ್ನಲ್ಲೇ ಅಗ್ನಿ ಅವಘಡಗಳನ್ನು ತಡೆಗಟ್ಟುವ ನಿಟ್ಟನಲ್ಲಿ ಬಿಬಿಎಂಪಿ ಹೊಸ ಆದೇಶ ಪ್ರಕಟಿಸಿದೆ. ಬಿಬಿಎಂಪಿ ವ್ಯಾಪ್ತಿಯ ವಸತಿ ಸಮುಚ್ಚಯಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಕಟ್ಟಡಗಳಿಗೆ ಕಟ್ಟಡ ಉಪವಿಧಿ – 2003, ಪರಿಷ್ಕೃತ ವಲಯ ನಿಯಮಾವಳಿಗಳು -2015 ಮತ್ತು National Building Code of India – 2016 ರ ಅನ್ವಯ ನಕ್ಷೆ ಮಂಜೂರಾತಿ, ಪ್ರಾರಂಭಿಕ ಪ್ರಮಾಣ ಪತ್ರ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರಗಳನ್ನು ಪಡೆದ ನಂತರ ಕಟ್ಟಡಗಳ ಬಾಲ್ಕನಿಗಳನ್ನು ಸಂಪೂರ್ಣವಾಗಿ ಮುಚ್ಚಲು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ನಿರ್ವಹಿಸಲು ನಿಯಮಾನುಸಾರ ಅವಕಾಶವಿರುವುದಿಲ್ಲ. ಆದರೂ ಕಟ್ಟಡ ಮಾಲೀಕರು ನಿಯಮಬಾಹಿರವಾಗಿ ಅಸುರಕ್ಷತೆಗೆ ಕಾರಣವಾಗುವಂತೆ ಕಟ್ಟಡ ಮಾರ್ಪಾಡು ಮಾಡುತ್ತಿರುವುದನ್ನು ಗಮನಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೇಲ್ಕಂಡ ಹಿನ್ನಲೆಯಲ್ಲಿ ನಿಯಮಾನುಸಾರ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ, ಪ್ರಾರಂಭಿಕ ಪ್ರಮಾಣ ಪತ್ರ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರಗಳನ್ನು ಪಡೆದ ನಂತರ ವಸತಿ ಸಮುಚ್ಚಯಗಳಲ್ಲಿ ಅಥವಾ ಇತರೆ ಕಟ್ಟಡಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಸೂಚಿಸಿದೆ. ಒಂದು ವೇಳೆ ವಸತಿ ಸಮುಚ್ಚಯಗಳಲ್ಲಿ/ಇತರೆ ಕಟ್ಟಡಗಳಲ್ಲಿ ಮಾರ್ಪಾಡು ಅವಶ್ಯವಿದ್ದಲ್ಲಿ ಪಾಲಿಕೆಯ ಸಕ್ಷಮ ಪ್ರಾಧಿಕಾರಗಳಿಂದ ಕಡ್ಡಾಯವಾಗಿ ಪೂರ್ವಾನುಮತಿಗಳನ್ನು ಪಡೆಯಲು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: 

ಬೆಂಗಳೂರು ಅಗ್ನಿ ಅವಘಡ: ತಾಯಿ- ಮಗಳು ಸಜೀವ ದಹನ; ನಿನ್ನೆಯಷ್ಟೇ ಅಮೆರಿಕದಿಂದ ಬಂದಿದ್ದರು ಕುಟುಂಬಸ್ಥರು

Bengaluru: ಬೆಂಗಳೂರಿನಲ್ಲಿ ಸಾಲು ಸಾಲು ಬೆಂಕಿ ದುರಂತ; ಅಪಾಯದಲ್ಲಿರುವ 13 ಸಾವಿರಕ್ಕೂ ಹೆಚ್ಚು ಕಟ್ಟಡಗಳ ಕತೆಯೇನು?

(BBMP issues new ordinance to prevent fire in residential quarters)

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?