AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ವಸತಿ ಗೃಹಗಳಲ್ಲಿ ಅಗ್ನಿ ಅವಘಡ ತಡೆಯಲು ಬಿಬಿಎಂಪಿ ಹೊಸ ಆದೇಶ

ಬಿಬಿಎಂಪಿ ವ್ಯಾಪ್ತಿಯ ವಸತಿ ಸಮುಚ್ಚಯಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.

Big News: ವಸತಿ ಗೃಹಗಳಲ್ಲಿ ಅಗ್ನಿ ಅವಘಡ ತಡೆಯಲು ಬಿಬಿಎಂಪಿ ಹೊಸ ಆದೇಶ
ಹೊತ್ತಿ ಉರಿದ ಫ್ಲಾಟ್
TV9 Web
| Edited By: |

Updated on: Sep 22, 2021 | 6:05 PM

Share

ಬೆಂಗಳೂರು: ದೇವರಚಿಕ್ಕನಹಳ್ಳಿಯ ವಸತಿ ಗೃಹದಲ್ಲಿ ಭೀಕರ ಅಗ್ನಿ ಅವಘಡ ಜರುಗಿದ ಬೆನ್ನಲ್ಲೇ ಅಗ್ನಿ ಅವಘಡಗಳನ್ನು ತಡೆಗಟ್ಟುವ ನಿಟ್ಟನಲ್ಲಿ ಬಿಬಿಎಂಪಿ ಹೊಸ ಆದೇಶ ಪ್ರಕಟಿಸಿದೆ. ಬಿಬಿಎಂಪಿ ವ್ಯಾಪ್ತಿಯ ವಸತಿ ಸಮುಚ್ಚಯಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಕಟ್ಟಡಗಳಿಗೆ ಕಟ್ಟಡ ಉಪವಿಧಿ – 2003, ಪರಿಷ್ಕೃತ ವಲಯ ನಿಯಮಾವಳಿಗಳು -2015 ಮತ್ತು National Building Code of India – 2016 ರ ಅನ್ವಯ ನಕ್ಷೆ ಮಂಜೂರಾತಿ, ಪ್ರಾರಂಭಿಕ ಪ್ರಮಾಣ ಪತ್ರ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರಗಳನ್ನು ಪಡೆದ ನಂತರ ಕಟ್ಟಡಗಳ ಬಾಲ್ಕನಿಗಳನ್ನು ಸಂಪೂರ್ಣವಾಗಿ ಮುಚ್ಚಲು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ನಿರ್ವಹಿಸಲು ನಿಯಮಾನುಸಾರ ಅವಕಾಶವಿರುವುದಿಲ್ಲ. ಆದರೂ ಕಟ್ಟಡ ಮಾಲೀಕರು ನಿಯಮಬಾಹಿರವಾಗಿ ಅಸುರಕ್ಷತೆಗೆ ಕಾರಣವಾಗುವಂತೆ ಕಟ್ಟಡ ಮಾರ್ಪಾಡು ಮಾಡುತ್ತಿರುವುದನ್ನು ಗಮನಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೇಲ್ಕಂಡ ಹಿನ್ನಲೆಯಲ್ಲಿ ನಿಯಮಾನುಸಾರ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ, ಪ್ರಾರಂಭಿಕ ಪ್ರಮಾಣ ಪತ್ರ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರಗಳನ್ನು ಪಡೆದ ನಂತರ ವಸತಿ ಸಮುಚ್ಚಯಗಳಲ್ಲಿ ಅಥವಾ ಇತರೆ ಕಟ್ಟಡಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಸೂಚಿಸಿದೆ. ಒಂದು ವೇಳೆ ವಸತಿ ಸಮುಚ್ಚಯಗಳಲ್ಲಿ/ಇತರೆ ಕಟ್ಟಡಗಳಲ್ಲಿ ಮಾರ್ಪಾಡು ಅವಶ್ಯವಿದ್ದಲ್ಲಿ ಪಾಲಿಕೆಯ ಸಕ್ಷಮ ಪ್ರಾಧಿಕಾರಗಳಿಂದ ಕಡ್ಡಾಯವಾಗಿ ಪೂರ್ವಾನುಮತಿಗಳನ್ನು ಪಡೆಯಲು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: 

ಬೆಂಗಳೂರು ಅಗ್ನಿ ಅವಘಡ: ತಾಯಿ- ಮಗಳು ಸಜೀವ ದಹನ; ನಿನ್ನೆಯಷ್ಟೇ ಅಮೆರಿಕದಿಂದ ಬಂದಿದ್ದರು ಕುಟುಂಬಸ್ಥರು

Bengaluru: ಬೆಂಗಳೂರಿನಲ್ಲಿ ಸಾಲು ಸಾಲು ಬೆಂಕಿ ದುರಂತ; ಅಪಾಯದಲ್ಲಿರುವ 13 ಸಾವಿರಕ್ಕೂ ಹೆಚ್ಚು ಕಟ್ಟಡಗಳ ಕತೆಯೇನು?

(BBMP issues new ordinance to prevent fire in residential quarters)

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ