AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಆಸ್ತಿ ತೆರಿಗೆ ಪಾವತಿಸಿಲ್ಲವೇ? ಕಾದಿದೆ ಸಂಕಷ್ಟ: ವಸೂಲಿಗೆ ಮುಂದಿನ ಕ್ರಮಕ್ಕೆ ಮುಂದಾದ ಬಿಬಿಎಂಪಿ

ಬೆಂಗಳೂರು ನಗರದಾದ್ಯಂತ ಆಸ್ತಿ ಮಾಲೀಕರು ಸುಮಾರು 786.86 ಕೋಟಿ ರೂ. ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದು, ಇದೀಗ ಬಿಬಿಎಂಪಿ ಕಠಿಣ ಕ್ರಮದ ಎಚ್ಚರಿಕೆ ನೀಡಿ ನೋಟಿಸ್ ಕಳುಹಿಸಿದೆ. ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು, ತುರ್ತು ಮಾರಾಟ ಮಾಡುವಂಥ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದು, ಆನ್​ಲೈನ್ ಮೂಲಕ ಕೂಡಲೇ ತೆರಿಗೆ ಪಾವತಿಸುವಂತೆ ಸೂಚಿಸಿದೆ.

ಇನ್ನೂ ಆಸ್ತಿ ತೆರಿಗೆ ಪಾವತಿಸಿಲ್ಲವೇ? ಕಾದಿದೆ ಸಂಕಷ್ಟ: ವಸೂಲಿಗೆ ಮುಂದಿನ ಕ್ರಮಕ್ಕೆ ಮುಂದಾದ ಬಿಬಿಎಂಪಿ
ಬಿಬಿಎಂಪಿ ಆಸ್ತಿ ತೆರಿಗೆ ಸುಸ್ತಿದಾರರಿಗೆ ನೋಟಿಸ್
ಶಾಂತಮೂರ್ತಿ
| Edited By: |

Updated on: Sep 02, 2025 | 9:15 AM

Share

ಬೆಂಗಳೂರು, ಸೆಪ್ಟೆಂಬರ್ 2: ಆಸ್ತಿ ತೆರಿಗೆ ಪಾವತಿ ಮಾಡದೇ ಇರುವ ಸುಸ್ತಿದಾರರಿಗೆ ಬಿಬಿಎಂಪಿ (BBMP) ನೋಟಿಸ್ ನೀಡಿದ್ದು, ಕೂಡಲೇ ಪಾವತಿ ಮಾಡುವಂತೆ ಸೂಚಿಸಿದೆ. ಇಲ್ಲವಾದಲ್ಲಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು, ಚರ ಮತ್ತು ಸ್ಥಿರ ಆಸ್ತಿಗಳ ತುರ್ತು ಮಾರಾಟ ಮಾಡುವುದು ಸೇರಿದಂತೆ ವಸೂಲಿ ಮಾಡಲು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ. ಒಟ್ಟಾರೆಯಾಗಿ ಬೆಂಗಳೂರಿನಲ್ಲಿ (Bengaluru) 2.75 ಲಕ್ಷ ಆಸ್ತಿ ಮಾಲೀಕರು ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಅವರಿಗೆ ನೋಟಿಸ್ ನೀಡಲಾಗಿದೆ. ತೆರಿಗೆ ಪಾವತಿ ಮಾಡದವರ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಆದೇಶ ಹೊರಡಿಸಿದ್ದಾರೆ.

ಆಸ್ತಿ ತೆರಿಗೆ ಪಾವತಿಸುವುದನ್ನು ಬಾಕಿ ಇರಿಸಿಕೊಂಡವರು BBMPtax.karnataka.gov.in ವೆಬ್​ಸೈಟ್​​ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸುವಂತೆ ಬಿಬಿಎಂಪಿ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

ಯಾವ ಏರಿಯಾಗಳಲ್ಲಿ ಎಷ್ಟೆಷ್ಟು ತೆರಿಗೆ ಬಾಕಿ?

ಬೆಂಗಳೂರು ಮಹಾನಗರ ಪಾಲಿಕೆಯ ವಿವಿಧ ಏರಿಯಾಗಳಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿರುವ ಆಸ್ತಿಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಮಹದೇವಪುರ ವಲಯದಲ್ಲೇ ಅತ್ಯಧಿಕ ಆಸ್ತಿಗಳು ತೆರಿಗೆ ಕಟ್ಟದೆ ಬಾಕಿ ಉಳಿಸಿವೆ. ಈ ವಲಯದಲ್ಲಿ 65,040 ಸುಸ್ತಿದಾರರು ಇದ್ದು, 197.90 ಕೋಟಿ ರೂ. ತೆರಿಗೆ ಪಾವತಿಗೆ ಬಾಕಿ ಇದೆ. ದಕ್ಷಿಣ ವಲಯದಲ್ಲೂ ದೊಡ್ಡ ಪ್ರಮಾಣದ ತೆರಿಗೆ ಬಾಕಿ ಇದ್ದು, 25,162 ಸುಸ್ತಿದಾರರಿದ್ದಾರೆ. 116.81 ಕೋಟಿ ರೂ. ತೆರಿಗೆ ಬಾಕಿ ಇದೆ.

ಇದನ್ನೂ ಓದಿ
Image
ಇಂದಿನಿಂದ ಜಿಬಿಎ: ದಶಕಗಳ ಇತಿಹಾಸ ಹೊಂದಿದ್ದ ಬಿಬಿಎಂಪಿ ಇನ್ಮುಂದೆ ನೆನಪು
Image
ಮುಂದಿನ ವಾರದಿಂದ ಟ್ರ್ಯಾಕಿಗಿಳಿಯಲಿದೆ ನಮ್ಮ ಮೆಟ್ರೋ ಯೆಲ್ಲೋ ಲೈನ್ 4ನೇ ರೈಲು
Image
ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯದ್ದೇ ಷಡ್ಯಂತ್ರ: ಡಿಕೆ ಶಿವಕುಮಾರ್
Image
ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ

ಪೂರ್ವ ಮತ್ತು ಬೊಮ್ಮನಹಳ್ಳಿ ವಲಯಗಳಲ್ಲಿಯೂ ಸಹ ಗಣನೀಯ ಸಂಖ್ಯೆಯ ಆಸ್ತಿ ಮಾಲೀಕರು ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿದ್ದಾರೆ. ಇದೇ ರೀತಿ ಯಲಹಂಕ ಮತ್ತು ಪಶ್ಚಿಮ ವಲಯಗಳಲ್ಲಿ ಕೂಡ ತೆರಿಗೆ ಬಾಕಿದಾರರ ಸಂಖ್ಯೆ ಹೆಚ್ಚಾಗಿದೆ. ರಾಜರಾಜೇಶ್ವರಿ ನಗರ ಮತ್ತು ದಸರಹಳ್ಳಿ ವಲಯಗಳಲ್ಲಿಯೂ ಸಹ ಸಾಕಷ್ಟು ಆಸ್ತಿಗಳು ತೆರಿಗೆ ಕಟ್ಟದೆ ಬಿಬಿಎಂಪಿಗೆ ಭಾರೀ ನಷ್ಟ ಉಂಟುಮಾಡಿವೆ.

ಇದನ್ನೂ ಓದಿ: ಇಂದಿನಿಂದ ಗ್ರೇಟರ್ ಬೆಂಗಳೂರು ಅಥಾರಿಟಿ: ದಶಕಗಳ ಇತಿಹಾಸ ಹೊಂದಿದ್ದ ಬಿಬಿಎಂಪಿ ಇನ್ಮುಂದೆ ನೆನಪು

ಒಟ್ಟಾರೆಯಾಗಿ, ಬೆಂಗಳೂರು ನಗರದ ಎಲ್ಲಾ ವಲಯಗಳನ್ನು ಸೇರಿಸಿದಾಗ 786.86 ಕೋಟಿ ರೂ. ತೆರಿಗೆ ಕಟ್ಟದೆ ಬಿಬಿಎಂಪಿಗೆ ಭಾರಿ ನಷ್ಟವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ