AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಆಸ್ತಿ ತೆರಿಗೆ ಪಾವತಿಸಿಲ್ಲವೇ? ಕಾದಿದೆ ಸಂಕಷ್ಟ: ವಸೂಲಿಗೆ ಮುಂದಿನ ಕ್ರಮಕ್ಕೆ ಮುಂದಾದ ಬಿಬಿಎಂಪಿ

ಬೆಂಗಳೂರು ನಗರದಾದ್ಯಂತ ಆಸ್ತಿ ಮಾಲೀಕರು ಸುಮಾರು 786.86 ಕೋಟಿ ರೂ. ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದು, ಇದೀಗ ಬಿಬಿಎಂಪಿ ಕಠಿಣ ಕ್ರಮದ ಎಚ್ಚರಿಕೆ ನೀಡಿ ನೋಟಿಸ್ ಕಳುಹಿಸಿದೆ. ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು, ತುರ್ತು ಮಾರಾಟ ಮಾಡುವಂಥ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದು, ಆನ್​ಲೈನ್ ಮೂಲಕ ಕೂಡಲೇ ತೆರಿಗೆ ಪಾವತಿಸುವಂತೆ ಸೂಚಿಸಿದೆ.

ಇನ್ನೂ ಆಸ್ತಿ ತೆರಿಗೆ ಪಾವತಿಸಿಲ್ಲವೇ? ಕಾದಿದೆ ಸಂಕಷ್ಟ: ವಸೂಲಿಗೆ ಮುಂದಿನ ಕ್ರಮಕ್ಕೆ ಮುಂದಾದ ಬಿಬಿಎಂಪಿ
ಬಿಬಿಎಂಪಿ ಆಸ್ತಿ ತೆರಿಗೆ ಸುಸ್ತಿದಾರರಿಗೆ ನೋಟಿಸ್
ಶಾಂತಮೂರ್ತಿ
| Updated By: Ganapathi Sharma|

Updated on: Sep 02, 2025 | 9:15 AM

Share

ಬೆಂಗಳೂರು, ಸೆಪ್ಟೆಂಬರ್ 2: ಆಸ್ತಿ ತೆರಿಗೆ ಪಾವತಿ ಮಾಡದೇ ಇರುವ ಸುಸ್ತಿದಾರರಿಗೆ ಬಿಬಿಎಂಪಿ (BBMP) ನೋಟಿಸ್ ನೀಡಿದ್ದು, ಕೂಡಲೇ ಪಾವತಿ ಮಾಡುವಂತೆ ಸೂಚಿಸಿದೆ. ಇಲ್ಲವಾದಲ್ಲಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು, ಚರ ಮತ್ತು ಸ್ಥಿರ ಆಸ್ತಿಗಳ ತುರ್ತು ಮಾರಾಟ ಮಾಡುವುದು ಸೇರಿದಂತೆ ವಸೂಲಿ ಮಾಡಲು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ. ಒಟ್ಟಾರೆಯಾಗಿ ಬೆಂಗಳೂರಿನಲ್ಲಿ (Bengaluru) 2.75 ಲಕ್ಷ ಆಸ್ತಿ ಮಾಲೀಕರು ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಅವರಿಗೆ ನೋಟಿಸ್ ನೀಡಲಾಗಿದೆ. ತೆರಿಗೆ ಪಾವತಿ ಮಾಡದವರ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಆದೇಶ ಹೊರಡಿಸಿದ್ದಾರೆ.

ಆಸ್ತಿ ತೆರಿಗೆ ಪಾವತಿಸುವುದನ್ನು ಬಾಕಿ ಇರಿಸಿಕೊಂಡವರು BBMPtax.karnataka.gov.in ವೆಬ್​ಸೈಟ್​​ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸುವಂತೆ ಬಿಬಿಎಂಪಿ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

ಯಾವ ಏರಿಯಾಗಳಲ್ಲಿ ಎಷ್ಟೆಷ್ಟು ತೆರಿಗೆ ಬಾಕಿ?

ಬೆಂಗಳೂರು ಮಹಾನಗರ ಪಾಲಿಕೆಯ ವಿವಿಧ ಏರಿಯಾಗಳಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿರುವ ಆಸ್ತಿಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಮಹದೇವಪುರ ವಲಯದಲ್ಲೇ ಅತ್ಯಧಿಕ ಆಸ್ತಿಗಳು ತೆರಿಗೆ ಕಟ್ಟದೆ ಬಾಕಿ ಉಳಿಸಿವೆ. ಈ ವಲಯದಲ್ಲಿ 65,040 ಸುಸ್ತಿದಾರರು ಇದ್ದು, 197.90 ಕೋಟಿ ರೂ. ತೆರಿಗೆ ಪಾವತಿಗೆ ಬಾಕಿ ಇದೆ. ದಕ್ಷಿಣ ವಲಯದಲ್ಲೂ ದೊಡ್ಡ ಪ್ರಮಾಣದ ತೆರಿಗೆ ಬಾಕಿ ಇದ್ದು, 25,162 ಸುಸ್ತಿದಾರರಿದ್ದಾರೆ. 116.81 ಕೋಟಿ ರೂ. ತೆರಿಗೆ ಬಾಕಿ ಇದೆ.

ಇದನ್ನೂ ಓದಿ
Image
ಇಂದಿನಿಂದ ಜಿಬಿಎ: ದಶಕಗಳ ಇತಿಹಾಸ ಹೊಂದಿದ್ದ ಬಿಬಿಎಂಪಿ ಇನ್ಮುಂದೆ ನೆನಪು
Image
ಮುಂದಿನ ವಾರದಿಂದ ಟ್ರ್ಯಾಕಿಗಿಳಿಯಲಿದೆ ನಮ್ಮ ಮೆಟ್ರೋ ಯೆಲ್ಲೋ ಲೈನ್ 4ನೇ ರೈಲು
Image
ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯದ್ದೇ ಷಡ್ಯಂತ್ರ: ಡಿಕೆ ಶಿವಕುಮಾರ್
Image
ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ

ಪೂರ್ವ ಮತ್ತು ಬೊಮ್ಮನಹಳ್ಳಿ ವಲಯಗಳಲ್ಲಿಯೂ ಸಹ ಗಣನೀಯ ಸಂಖ್ಯೆಯ ಆಸ್ತಿ ಮಾಲೀಕರು ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿದ್ದಾರೆ. ಇದೇ ರೀತಿ ಯಲಹಂಕ ಮತ್ತು ಪಶ್ಚಿಮ ವಲಯಗಳಲ್ಲಿ ಕೂಡ ತೆರಿಗೆ ಬಾಕಿದಾರರ ಸಂಖ್ಯೆ ಹೆಚ್ಚಾಗಿದೆ. ರಾಜರಾಜೇಶ್ವರಿ ನಗರ ಮತ್ತು ದಸರಹಳ್ಳಿ ವಲಯಗಳಲ್ಲಿಯೂ ಸಹ ಸಾಕಷ್ಟು ಆಸ್ತಿಗಳು ತೆರಿಗೆ ಕಟ್ಟದೆ ಬಿಬಿಎಂಪಿಗೆ ಭಾರೀ ನಷ್ಟ ಉಂಟುಮಾಡಿವೆ.

ಇದನ್ನೂ ಓದಿ: ಇಂದಿನಿಂದ ಗ್ರೇಟರ್ ಬೆಂಗಳೂರು ಅಥಾರಿಟಿ: ದಶಕಗಳ ಇತಿಹಾಸ ಹೊಂದಿದ್ದ ಬಿಬಿಎಂಪಿ ಇನ್ಮುಂದೆ ನೆನಪು

ಒಟ್ಟಾರೆಯಾಗಿ, ಬೆಂಗಳೂರು ನಗರದ ಎಲ್ಲಾ ವಲಯಗಳನ್ನು ಸೇರಿಸಿದಾಗ 786.86 ಕೋಟಿ ರೂ. ತೆರಿಗೆ ಕಟ್ಟದೆ ಬಿಬಿಎಂಪಿಗೆ ಭಾರಿ ನಷ್ಟವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ