AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ಮಾಲೀಕರಿಗೆ ಬಿಬಿಎಂಪಿ ಶುಭ ಸುದ್ದಿ: ಬಿ ಖಾತಾ ಬದಲಿಗೆ ಎ ಖಾತಾ ನೀಡುವ ಸುಳಿವು!

ಬೆಂಗಳೂರಿನಲ್ಲಿ ಬಿಬಿಎಂಪಿ ಬಿ-ಖಾತಾ ನೀಡುವುದನ್ನು ನಿಲ್ಲಿಸುವ ಸಾಧ್ಯತೆ ಹೆಚ್ಚಿದೆ. ಯೋಜನಾ ಅನುಮೋದನೆ ಇಲ್ಲದ ಸೈಟ್​​​ಗಳಿಗೆ ಬಿ ಖಾತಾ ನೀಡುವುದರ ಬದಲಾಗಿ ಅಭಿವೃದ್ಧಿ ಶುಲ್ಕ ಪಡೆದು ಎ-ಖಾತಾ ನೀಡುವ ಪ್ರಸ್ತಾವ ಪರಿಶೀಲನೆಯಲ್ಲಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಇದರಿಂದ ಆಸ್ತಿ ಮಾಲೀಕರಿಗೆ ಅನುಕೂಲವಾಗಲಿದೆ.

ಆಸ್ತಿ ಮಾಲೀಕರಿಗೆ ಬಿಬಿಎಂಪಿ ಶುಭ ಸುದ್ದಿ: ಬಿ ಖಾತಾ ಬದಲಿಗೆ ಎ ಖಾತಾ ನೀಡುವ ಸುಳಿವು!
ಬಿಬಿಎಂಪಿ
Follow us
Ganapathi Sharma
|

Updated on: Jun 02, 2025 | 8:17 AM

ಬೆಂಗಳೂರು, ಜೂನ್ 2: ಯೋಜನಾ ಪ್ರಾಧಿಕಾರದಿಂದ ಅನುಮೋದನೆ ಪಡೆಯದ ಅಥವಾ ರೂಪಿಸಲ್ಪಟ್ಟಿರದ ಸೈಟ್​ಗಳಿಗೆ ‘ಬಿ ಖಾತಾ’ (B Khata) ನೀಡುವುದನ್ನು ಬಿಬಿಎಂಪಿ (BBMP) ಸ್ಥಗಿತಗೊಳಿಸುವ ಸಾಧ್ಯತೆ ಇದೆ ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಸುಳಿವು ನೀಡಿದ್ದಾರೆ. ಬಿ ಖಾತಾ ನೀಡುವುದರ ಬದಲಿಗೆ, ಅಭಿವೃದ್ಧಿ ಶುಲ್ಕವನ್ನು ಸಂಗ್ರಹಿಸಿ ‘ಎ ಖಾತಾ’ (A Khata) ನೀಡುವ ಕುರಿತದಾ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಅವರು ತಿಳಿಸಿದ್ದಾರೆ. ಇದು ಜಾರಿಯಾಗಿದ್ದೇ ಆದಲ್ಲಿ ಬೆಂಗಳೂರಿನ ಆಸ್ತಿ ಮಾಲೀಕರಿಗೆ ಸಿಹಿಸುದ್ದಿಯಾಗಲಿದೆ.

ಉದ್ಯಾನವನಗಳನ್ನು ನಿರ್ಮಾಣ ಮಾಡುವುದಕ್ಕಾಗಿ ಸಣ್ಣ ಸೈಟ್​​ಗಳಿಂದ ಅವುಗಳ ಗೈಡೆನ್ಸ್ ವ್ಯಾಲ್ಯೂವಿನ ಶೇ 5 ಮತ್ತು ದೊಡ್ಡ ಸೈಟ್​​ಗಳಿಂದ ಅವುಗಳ ಗೈಡೆನ್ಸ್ ವ್ಯಾಲ್ಯೂವಿನ ಶೇ 15 ರಷ್ಟು ಮೊತ್ತವನ್ನು ಸಂಗ್ರಹಿಸುವ ಬಗ್ಗೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಮುಂದಿಟ್ಟಿದೆ ಎಂದು ಅವರು ತಿಳಿಸಿದ್ದಾರೆ.

ಬಿ ಖಾತಾ ನೀಡುವುದನ್ನು ನಿಲ್ಲಿಸುವ ಪ್ರಸ್ತಾವ ಇದೆ. ಕಟ್ಟಡ ಯೋಜನೆ ಅನುಮೋದನೆಗಳನ್ನು ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಪ್ರಸ್ತಾವನೆಯನ್ನು ಪರಿಗಣಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.

ಇದನ್ನೂ ಓದಿ
Image
ಐತಿಹಾಸಿಕ ಸದಾಶಿವಗಡ ಕೊಟೆಯ ಮೇಲೆ ಜಂಗಲ್ ಲಾಡ್ಜ್ ಕಣ್ಣು: ಸ್ಥಳೀಯರ ವಿರೋಧ
Image
ಗರ್ಭಿಣಿ ಪ್ರೇಯಸಿ ಜತೆ ಸೇರಿ ಪ್ರಿಯಕರನಿಂದ ಕಳ್ಳತನ, ಪೊಲೀಸ್ ಬಲೆಗೆ ಲವರ್ಸ್
Image
ವಿದ್ಯಾರ್ಥಿಗಳು KSRTC ಬಸ್ ಪಾಸ್ ವಿತರಣೆ ಆರಂಭ: ಅರ್ಜಿ ಸಲ್ಲಿಕೆ ಹೇಗೆ?
Image
ಎ ಮತ್ತು ಬಿ ಖಾತಾ ಎಂದರೇನು? ಗುರುತಿಸುವುದು ಹೇಗೆ?

ಪ್ರತಿ ವರ್ಷ ಸರಾಸರಿ 10,000 ಕಟ್ಟಡ ಯೋಜನೆ ಮಂಜೂರಾತಿ ಅರ್ಜಿಗಳು ಸಲ್ಲಿಕೆಯಾಗುತ್ತವೆ. ಈ ಆಸ್ತಿಗಳಲ್ಲಿ 60 ಕ್ಕಿಂತ ಹೆಚ್ಚು ಬಿ ಖಾತಾ ವ್ಯಾಪ್ತಿಗೆ ಬರುತ್ತವೆ. ನಗರದ ಹಲವು ಭಾಗಗಳಲ್ಲಿ ಬಿಡಿಎ ಲೇಔಟ್​​ಗಳ ರಚನೆಯಾಗದಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.

ಪ್ರಸ್ತುತ, ಆಸ್ತಿ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣವಾಗಿರುವ ಕಟ್ಟಡಗಳು, ಲೇಔಟ್‌ಗಳು ಅಥವಾ ಕಂದಾಯ ನಿವೇಶನಗನ್ನು ಬಿಬಿಎಂಪಿಯು ಬಿ ಖಾತಾ ಎಂದು ವರ್ಗೀಕರಿಸಿರುತ್ತದೆ. ನಿರ್ಮಾಣದ ಸಮಯದಲ್ಲಿ ಕಟ್ಟಡದ ಬೈಲಾಗಳನ್ನು ಉಲ್ಲಂಘಿಸುವುದು, ಕಂದಾಯ ಭೂಮಿಯಲ್ಲಿ ನಿರ್ಮಾಣ, ಅನಧಿಕೃತ ಬಡಾವಣೆಗಳಲ್ಲಿ ಕಟ್ಟಡ ನಿರ್ಮಾಣ, ಪೂರ್ಣಗೊಳಿಸುವಿಕೆ ಅಥವಾ ವಿತರಣೆ ಪ್ರಮಾಣಪತ್ರಗಳ ಕೊರತೆ ಇತ್ಯಾದಿ ಇದ್ದಲ್ಲಿ ಬಿ ಖಾತಾ ನೀಡಲಾಗುತ್ತದೆ. ಆದರೆ, ಇಂಥ ಆಸ್ತಿಯನ್ನು ನಿರ್ದಿಷ್ಟ ನಿಯಮಗಳ ಅನುಸಾರ ದಂಡ ಪಾವತಿಸಿ ಎ ಖಾತಾಗೆ ಪರಿವರ್ತಿಸಲು ಅವಕಾಶ ನೀಡಲಾಗುತ್ತಿತ್ತು.

ಇದನ್ನೂ ಓದಿ: ಎ ಮತ್ತು ಬಿ ಖಾತಾ ಎಂದರೇನು? ಗುರುತಿಸುವುದು ಹೇಗೆ, ಬಿ ಖಾತಾ ಇದ್ದರೆ ಏನು ಮಾಡಬೇಕು? ಇಲ್ಲಿದೆ ಮಾಹಿತಿ

ಇದೀಗ ಹೊಸ ಪ್ರಸ್ತಾವನೆಯ ಪ್ರಕಾರ, ಮೊತ್ತಮೊದಲಿಗೆ ಆಸ್ತಿ ಪ್ರಮಾಣಪತ್ರ ನೀಡುವ ಸಂದರ್ಭದಲ್ಲಿಯೇ ಬಿ ಖಾತಾ ನೀಡದೆ ನೇರವಾಗಿ ಎ ಖಾತಾ ನೀಡುವುದಾಗಿದೆ. ಅಂದರೆ, ಆರಂಭದಲ್ಲಿಯೇ ಅಭಿವೃದ್ಧಿ ಶುಲ್ಕ ಸಂಗ್ರಹಿಸಿ ಎ ಖಾತಾ ನೀಡುವುದಾಗಿದೆ. ಇದು ಜಾರಿಗೆ ಬಂದಲ್ಲಿ ಆಸ್ತಿ ಮಾಲೀಕರಿಗೆ ಅನುಕೂಲವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು