AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಅಧಿಕಾರಿಗಳಿಂದ ಬಿಬಿಎಂಪಿ ಮಾರ್ಷ್​​ಗಳ ದುರಪಯೋಗ: ವೈಯಕ್ತಿಕ ಕಾರ್ಯಗಳಿಗೆ ಬಳಕೆ

ಬಿಬಿಎಂಪಿ ಮಾರ್ಷ್​​ಲ್​ಗಳನ್ನು ಹಿರಿಯ ಅಧಿಕಾರಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹಿರಿಯ ಅಧಿಕಾರಿಗಳಿಂದ ಬಿಬಿಎಂಪಿ ಮಾರ್ಷ್​​ಗಳ ದುರಪಯೋಗ: ವೈಯಕ್ತಿಕ ಕಾರ್ಯಗಳಿಗೆ ಬಳಕೆ
ಬಿಬಿಎಂಪಿ ಮಾರ್ಷಲ್ಸ್​​​
ವಿವೇಕ ಬಿರಾದಾರ
|

Updated on:Apr 12, 2023 | 11:38 AM

Share

ಬೆಂಗಳೂರು: ಕೊರೊನಾ (Covid) ಅವಧಿಯಲ್ಲಿ ವಾರಿಯರ್ಸ್​​​ ಜೊತೆಗೆ ಕೆಲಸ ಮಾಡಿದ್ದ, ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಮಾರ್ಷಲ್ಸ್​​ಗಳನ್ನು, ಈಗ ಪ್ಲಾಸ್ಟಿಕ್ ಬ್ಯಾನ್ ಹಾಗೂ ಮಾಸ್ಕ್ ಹಾಕುವುದು, ರಸ್ತೆಯಲ್ಲಿ ಕಸಹಾಕುವವರ ಮೇಲೆ ನಿಗಾ ಇಡಲು ನೇಮಿಸಲಾಗಿದೆ. ಈ ಮಾರ್ಷ್​​ಲ್​ಗಳನ್ನು ಹಿರಿಯ ಅಧಿಕಾರಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಖಾಸಗಿ ಸುದ್ದಿ ಸಂಸ್ಥೆ ಡೆಕ್ಕನ್​ ಹೆರಾಲ್ಡ್​ ವರದಿ ಮಾಡಿದೆ.

ಈ ಮಾರ್ಷಲ್​​ಗಳನ್ನು ಕೆಲ ಹಿರಿಯ ಅಧಿಕಾರಿಗಳು ತಮ್ಮ ಭದ್ರತಾ ಸಿಬ್ಬಂದಿಯಾಗಿ ನೇಮಿಸಿಕೊಂಡಿದ್ದಾರೆ. ಅಲ್ಲದೇ ಊಟದ ಡಬ್ಬ ಮತ್ತು ಫೈಲ್​ಗಳನ್ನು ಸರಬರಾಜು ಮಾಡಲು ಬಳಸಲಾಗುತ್ತಿದೆ. ಬಿಬಿಎಂಪಿಯ ನಿಯಮದ ವಿರುದ್ಧವಾಗಿ ಹಣಕಾಸು ಇಲಾಖೆಯ ಆಯುಕ್ತರು, ಆರ್​ಆರ್​ನಗರದ ವಲಯ ಆಯುಕ್ತರು ಇವರನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ.

ಈ ಮಾರ್ಷಲ್​​​ಗಳನ್ನು ಕರ್ನಾಟಕ ಮಾಜಿ ಸೈನಿಕರ ಕಲ್ಯಾಣ ಸಂಘದಿಂದ ನೇಮಕ ಮಾಡಿಕೊಳ್ಳಲಾಗಿದ್ದು, ಇವರನ್ನು ಬಿಬಿಎಂಪಿ ಅಧಿಕಾರಿಗಳು ದುರುಪಯೋಗ ಪಡಿಸಿಕೊಳ್ಳುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 2019ರಲ್ಲಿ ಬಿಬಿಎಂಪಿ ಈ ಮಾರ್ಷಲ್ಸ್​​ಗಳನ್ನು ನೇಮಕ ಮಾಡಿಕೊಂಡಿತ್ತು. ಸದ್ಯ ಬಿಬಿಎಂಪಿಯಲ್ಲಿ 500 ಜನ ಮಾರ್ಷ್​​ಲ್ಸ್​​ಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ತಮ್ಮ ಏರಿಯಾದ ಸಮಸ್ಯೆಗಳಿಗೆ ಪರ್ಯಾಯ ಮಾರ್ಗ ಕಂಡುಕೊಂಡು ಮಾದರಿಯಾದ ಬ್ರೂಕ್‌ಫೀಲ್ಡ್ ಲೇಔಟ್ ನಿವಾಸಿಗಳು

ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೆ ತರಲು ಪ್ರಾಯೋಗಿಕ ಆಧಾರದ ಮೇಲೆ 2017 ರಲ್ಲಿ, ಬಿಬಿಎಂಪಿ ಮಾರ್ಷಲ್‌ಗಳನ್ನು ನೇಮಿಸಿಕೊಳ್ಳಲು ಯೋಚನೆ ಮಾಡಿತು. 8.3 ಕೋಟಿ ರೂ. ವಾರ್ಷಿಕ ವೇತನದೊಂದಿಗೆ 240 ಮಾರ್ಷಲ್‌ಗಳನ್ನು ಒದಗಿಸುವಂತೆ ಮಾಜಿ ಸೈನಿಕರ ಕಲ್ಯಾಣ ಸೊಸೈಟಿಯೊಂದಿಗೆ, ಬಿಬಿಎಂಪಿ ಒಪ್ಪಂದ ಮಾಡಿಕೊಂಡಿತ್ತು. ಅದರಂತೆ 2019 ರಲ್ಲಿ ಪ್ರಸ್ತಾವನೆ ಜಾರಿಗೆ ತರಲಾಯಿತು.

BBMPಯು ಕೊರೊನಾ ನಿರ್ವಹಣೆ, ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಗಳು, ಪೌರಕಾರ್ಮಿಕರು ಮತ್ತು ಕಸ ಸಂಗ್ರಹಿಸುವ ಆಟೋ ಟಿಪ್ಪರ್‌ಗಳ ಹಾಜರಾತಿ ಮತ್ತು ತ್ಯಾಜ್ಯ ಸಂಸ್ಕರಣಾ ಘಟಕಗಳ ಕಾವಲು, ಬೆಳ್ಳಂದೂರು ಮತ್ತು ವರ್ತೂರು ಕೆರೆಗಳ ಕಾವಲು ಮುಂತಾದ ವೈವಿಧ್ಯಮಯ ಕಾರ್ಯಗಳಿಗೆ ಮಾರ್ಷಲ್‌ಗಳನ್ನು ನೇಮಿಸಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 am, Wed, 12 April 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ