AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾನ್ ಮಾಡಿದರೂ ಇನ್ನೂ ಬಳಕೆಯಲ್ಲಿದೆ ಪ್ಲಾಸ್ಟಿಕ್, ನಿರ್ಮೂಲನೆಗೆ ಆಸಕ್ತಿ ಕಳೆದುಕೊಂಡ ಬಿಬಿಎಂಪಿ

ಕೇಂದ್ರ ಸರ್ಕಾರ ಏಕ ಬಳಕೆ‌ ಪ್ಲಾಸ್ಟಿಕ್ ಬ್ಯಾನ್ ಮಾಡಿ ಆದೇಶ ಹೊರಡಿಸಿದೆ. ಆದರೆ ಬೆಂಗಳೂರಿನ ಹಲವೆಡೆ ಈಗಲೂ ಕೂಡ ಎಗ್ಗಿಲ್ಲದೆ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಈ ಬಗ್ಗೆ ವಿಚಾರ ತಿಳಿದಿದ್ದರೂ ಬಿಬಿಎಂಪಿ ಮಾತ್ರ ಕೈ ಕಟ್ಟಿ ಕುಳಿತಿದೆ. ಪ್ಲಾಸ್ಟಿಕ್ ಉತ್ಪಾದನೆ ಮಾಡುವ ಫ್ಯಾಕ್ಟರಿಗಳ ಮೇಲೆ ದಾಳಿ ಮಾಡಿ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

ಬ್ಯಾನ್ ಮಾಡಿದರೂ ಇನ್ನೂ ಬಳಕೆಯಲ್ಲಿದೆ ಪ್ಲಾಸ್ಟಿಕ್, ನಿರ್ಮೂಲನೆಗೆ ಆಸಕ್ತಿ ಕಳೆದುಕೊಂಡ ಬಿಬಿಎಂಪಿ
ಪ್ಲಾಸ್ಟಿಕ್
TV9 Web
| Edited By: |

Updated on: Feb 17, 2024 | 7:55 AM

Share

ಬೆಂಗಳೂರು, ಫೆ.17: ಏಕ ಬಳಕೆಯ ಪ್ಲಾಸ್ಟಿಕ್ (Plastic) ಗಳನ್ನ ಕೇಂದ್ರ ಸರ್ಕಕರ ನಿಷೇಧಿಸಿ ಆದೇಶ ಹೊರಡಿಸಿದೆ. ಆದರೆ ಸಿಲಿಕಾನ್ ಸಿಟಿ‌ ಬೆಂಗಳೂರಿನ ಎಗ್ಗಿಲ್ಲದೇ ಪ್ಲಾಸ್ಟಿಕ್ ಬಳಕೆ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಾದ ಬಿಬಿಎಂಪಿ (BBMP) ಅಧಿಕಾರಿಗಳು ವ್ಯಾಪಾರಿಗಳಿಗೆ ಸಾಥ್ ನೀಡಿ ಕೈ ಕಟ್ಟಿ ಕುಳಿತುಕೊಳ್ಳುವ ಮೂಲಕ ಪ್ಲ್ಯಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಲು ಅಧಿಕಾರಿಗಳು ಮುಂದಾಗದೇ ಇರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಕೇಂದ್ರ ಸರ್ಕಾರ ಏಕ ಬಳಕೆ‌ ಪ್ಲಾಸ್ಟಿಕ್ ಬ್ಯಾನ್ ಮಾಡಿ ಆದೇಶ ಹೊರಡಿಸಿದೆ. ಪ್ಲಾಸ್ಟಿಕ್ ಬಳಕೆ ತುಂಬಾ ಸುಲಭವಾದ್ದರಿಂದ ಈ ಉತ್ಪನ್ನಗಳಿಗೆ ಆಧ್ಯತೆ ನೀಡಲಾಗುತ್ತಿದೆ. ನಾವು ನಗರದ ಪ್ರಮುಖವಾದ ಕೆ.ಆರ್. ಮಾರ್ಕೆಟ್ ನಲ್ಲಿ ನೋಡೊದಾದರೆ ಪ್ರತಿಯೊಬ್ಬ ವ್ಯಾಪಾರಿಗಳು ಏಕ ಬಳಕೆ ಪ್ಲಾಸ್ಟಿಕ್ ನಲ್ಲೆ ತರಕಾರಿ ಸೇರಿದಂತೆ ಹೂವುಗಳನ್ನ ಗ್ರಾಹಕರಿಗೆ ನೀಡುತ್ತಾರೆ. ಇದು ನೋಡಲು ನಮಗೆ ಸರ್ವೆ ಸಾಮಾನ್ಯವಾಗಿ ಕಂಡು ಬರುತ್ತದೆ. ಕೇವಲ ಬಿಬಿಎಂಪಿ ಅಧಿಕಾರಿಗಳು ಇಂತಹ ವ್ಯಾಪಾರಿಗಳ ಮೇಲೆ ದಾಳಿ ನಡೆಸಿ ದಂಡ ಹಾಕುತ್ತಾರೆ ಹೊರತು ಮೂಲತಃ ಯಾವ ಫ್ಯಾಕ್ಟರಿಗಳಲ್ಲಿ ಉತ್ಪಾದನೆ ಆಗುತ್ತದೆ ಅಲ್ಲಿ ದಾಳಿ ನಡೆಸಿ ಪ್ಲಾಸ್ಟಿಕ್ ಉತ್ಪಾದನೆ ಆಗುವಂತೆ ನೋಡಿಕೊಳ್ಳಬೇಕು. ನಗರದಲ್ಲಿ ಎಲ್ಲೆಲ್ಲಿ ಪ್ಲಾಸ್ಟಿಕ್ ಹೇಗೆ ಉತ್ಪಾದನೆ ಆಗುತ್ತದೆ ಎಂಬುದು ಅಧಿಕಾರಿಗಳಿಗೆ ಗೊತ್ತು. ಆದರೆ ಈ ಬಗ್ಗೆ ಗೊತ್ತಿದ್ದರೂ ಅವರು ಇದಕ್ಕೆ ಕಡಿವಾಣ ಹಾಕದೆ ಕಮೀಷನ್ ಪಡೆದು ಸುಮ್ಮನಾಗುತ್ತಿದ್ದಾರೆ ಅಂತ ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಶೀಘ್ರ ಚಾಲನೆ: ಸಿದ್ದರಾಮಯ್ಯ ಘೋಷಣೆಗೆ ತಮಿಳುನಾಡು ಖಂಡನೆ

ಇನ್ನೂ ಏಕ ಬಳಕೆ ಪ್ಲಾಸ್ಟಿಕ್‌ನ್ನ ಒಮ್ಮೆ ಬಳಸಿದ ಬಳಿಕ ಅದನ್ನ ಎಲ್ಲೆಂದರಲ್ಲಿ ಎಸೆಯಲ್ಲಾಗುತ್ತೆ, ಹೀಗೆ ಎಸೆಯುವ ಪ್ಲಾಸ್ಟಿಕ್ ಕೆರೆ ಸೇರಿದಂತೆ ಇನ್ನೀತರ ಪ್ರದೇಶಗಳಲ್ಲಿ‌ ಬಿದ್ದು ಜಲಚರಗಳಿಗೆ ಪರಿಸರಕ್ಕೆ ಹಾಗೂ ಪ್ರಾಣಿಗಳಿಗೆ ಹಾನಿಯಾಗುತ್ತಿದೆ ಅಂತ ಪರಿಸರ ಪ್ರೇಮಿಗಳು ಪ್ಲಾಸ್ಟಿಕ್ ಬಳಕೆಗೆ ಅವಕಾಶ ಕೊಡದೆ ಸಂಪೂರ್ಣ ನಿಷೇಧ ಮಾಡಿ ಜನರಲ್ಲಿ‌ ಜಾಗೃತಿ ಮೂಡಿಸಲು ಮುಂದಾಗಬೇಕು ಅಂತ ಆಗ್ರಹಿಸುತ್ತಿದ್ದಾರೆ.

ಒಟ್ಟಿನಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಅಧಿಕಾರಿಗಳು ನಾಮ ಕಾ ವಾಸ್ತೆ ದಾಳಿ ನಡೆಸಿ ಕ್ರಮ ಕೈಗೊಳ್ಳುವುದಕ್ಕಿಂತ ಪ್ಲಾಸ್ಟಿಕ್ ಉತ್ಪಾದನಾ ಘಟಕಗಳ ಮೇಲೆ ದಾಳಿ ನಡೆಸಿ ಸಂಪೂರ್ಣವಾಗಿ ಕಡಿವಾಣ ಹಾಕಿ ನಮ್ಮ ಪರಿಸರ ಸಂರಕ್ಷಣೆ ಮಾಡಬೇಕೆನ್ನುವುದು ಬೆಂಗಳೂರು ಜನತೆಯ ಒಕ್ಕೊರಲು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!